Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...