Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...