Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...