Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...