Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...