Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...