Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...