Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...