Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...