Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...