Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....