Homeಕರ್ನಾಟಕಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಜ್ಯದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು, ಅದರ ಕೆಳಗಡೆ ಶಿವನ ದೇವಾಲಯವೊಂದು ಕಾಣಿಸುತ್ತಿದೆ ಎಂದು ಹೇಳುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶಿವ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು. ಮುಸ್ಲಿಮರು ನಮಾಜ್ ಮಾಡುವ ಮಸೀದಿಯ ಕೆಳಗೆ ದೇವಸ್ಥಾನ ಇರುತ್ತದೆ ಎಂದು ಒಂದು ಪೋಸ್ಟ್ ಹೇಳುತ್ತದೆ. ಆ ಪೋಸ್ಟ್ ಎಷ್ಟು ನಿಜ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಮಾಡಿದ ಕ್ಲೈಮ್‌ನ ವಿವರಗಳಿಗಾಗಿ Googleನಲ್ಲಿ ಹುಡುಕಾಡಿದಾಗ ಈ ಫೋಟೋವನ್ನು 2016 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆ ಹಳೆಯ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಒಬ್ಬ ಬಳಕೆದಾರರು ಫೋಟೋ ಜೊತೆಗೆ “ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಲಾಗುತ್ತಿದೆ, 500 ವರ್ಷ ಪುರಾತನವಾದದ್ದು, ಹಿಂದೂ ಬ್ರಾಹ್ಮಣರು ಭವ್ಯವಾದ ಶಿಲ್ಪಗಳನ್ನು ಕೆತ್ತಿದ್ದಾರೆ ನೋಡಿ” ಎಂದಿದ್ದಾರೆ.

 ಈ ಟ್ವೀಟ್‌ಗಳಲ್ಲಿ ಹಂಚಿಕೊಂಡಿರುವ ಮಸೀದಿಯ ಫೋಟೋವನ್ನು ‘ಟ್ರಿಪ್ ಅಡ್ವೈಸರ್’ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಟ್ರಿಪ್ ಅಡ್ವೈಸರ್ ವೆಬ್‌ಸೈಟ್ ಪ್ರಕಾರ ಈ ಫೋಟೋ ರಾಯಚೂರಿನ ಏಕ್ ಮಿನಾರ್ ಮಸೀದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಈ ವಿವರಗಳನ್ನು ಆಧರಿಸಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋದ ಕುರಿತು ಹೆಚ್ಚಿನ ಮಾಹಿತಿಯ ಹುಡುಕಾಡಿದಾಗ, ಈ ಘಟನೆಗೆ ಸಂಬಂಧಿಸಿದಂತೆ ‘ಡೆಕ್ಕನ್ ಕ್ರಾನಿಕಲ್’ ಸುದ್ದಿ ಸಂಸ್ಥೆ 15 ಏಪ್ರಿಲ್ 2016 ರಂದು ಲೇಖನವನ್ನು ಪ್ರಕಟಿಸಿರುವುದು ಕಂಡುಬಂದಿದೆ. ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು 2016 ರಲ್ಲಿ ರಸ್ತೆ ವಿಸ್ತರಣೆಯ ಭಾಗವಾಗಿ ಕೆಡವಲಾಯಿತು ಎಂದು ಈ ಲೇಖನ ವರದಿ ಮಾಡಿದೆ. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಅಲ್ಲಿನ ಹಿಂದೂ ಸಮುದಾಯಗಳ ಪ್ರಕಾರ ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಭವ್ಯವಾದ ಶಿಲ್ಪಕಲಾ ಸ್ತಂಭಗಳನ್ನು ಹೋಲುತ್ತವೆ ಎಂದು ಹೇಳಲಾಗುತ್ತದೆ. ಏಕ್ ಮಿನಾರ್ ಮಸೀದಿಯ ಇತಿಹಾಸವನ್ನು ತಕ್ಷಣವೇ ತನಿಖೆ ಮಾಡಿ ಮತ್ತು ಈ ಹಿಂದೆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆಯೇ ಎಂದು ಸ್ಪಷ್ಟಪಡಿಸಬೇಕೆಂದು ರಾಯಚೂರು ಹಿಂದೂ ಸಮುದಾಯವು ಸರ್ಕಾರವನ್ನು ಒತ್ತಾಯಿಸಿದೆ ಎಂದು ಲೇಖನ ವರದಿ ಮಾಡಿದೆ.

ಆದರೆ, ಈ ಲೇಖನದಲ್ಲಿ ಎಲ್ಲಿಯೂ ಏಕ್ ಮಿನಾರ್ ಮಸೀದಿಯ ಕಂಬಗಳು ಹಿಂದೂ ದೇವಾಲಯಕ್ಕೆ ಸೇರಿವೆ ಎಂದು ದೃಢಪಡಿಸಲಾಗಿಲ್ಲ. ‘ದಿ ಹಿಂದೂ’ ಸುದ್ದಿ ಸಂಸ್ಥೆ ರಾಯಚೂರು ರಸ್ತೆ ಅಗಲೀಕರಣ ಕೆಡವುವ ಕುರಿತು 2016ರ ಏಪ್ರಿಲ್ 10ರಂದು ಲೇಖನ ಪ್ರಕಟಿಸಿತ್ತು.

ಏಕ್ ಮಿನಾರ್ ಮಸೀದಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಸ್ಪಷ್ಟನೆಗಾಗಿ ‘ಆಲ್ಟ್ ನ್ಯೂಸ್’ ಸತ್ಯ ತಪಾಸಣೆ ಸಂಸ್ಥೆ ಅಂದಿನ ರಾಯಚೂರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿತ್ತು. ಆಲ್ಟ್ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದ ರಾಯಚೂರು ಜಿಲ್ಲಾಧಿಕಾರಿಗಳು, ” ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು. ರಾಯಚೂರು ರಸ್ತೆ ವಿಸ್ತರಣೆಯ ಭಾಗವಾಗಿ ಪ್ರಾಚೀನ ಏಕ್ ಮಿನಾರ್ ಮಸೀದಿ ಹಾಗೂ ಕೆಲವು ಧಾರ್ಮಿಕ ಕಟ್ಟಡಗಳನ್ನು ಕೆಡವಲಾಯಿತು. ಪ್ರಾಚೀನ ಸ್ಮಾರಕಗಳಲ್ಲಿ ಹಲವು ವಿಧಗಳಿವೆ. ಸರಳವಾಗಿ ಹೇಳುವುದಾದರೆ, ಕಂಬವನ್ನು ಹಿಂದೂ ದೇವಾಲಯ ಎಂದು ಹೇಳಲಾಗುವುದಿಲ್ಲ. ಕೆಲವು ಗುಂಪುಗಳು ಈ ಆರೋಪ ಮಾಡಲು ಯತ್ನಿಸಿದ್ದವು. ಆದರೆ ಅವರ ಆರೋಪಗಳ ಬಗ್ಗೆ ಮತ್ತೆ ಅವರನ್ನೇ ಕೇಳಿದಾಗ ಅವರು ಆರೋಪಗಳನ್ನು ಮುಂದುವರಿಸಲಿಲ್ಲ” ಎಂದು ಹೇಳಿದ್ದಾರೆ.

ಈ ವಿವರಗಳನ್ನು ಆಧರಿಸಿ, 2016 ರಲ್ಲಿ ರಾಯಚೂರಿನ ಏಕ್ ಮಿನಾರ್ ಮಸೀದಿಯನ್ನು ಕೆಡವಿದಾಗ ಶಿವನ ದೇವಾಲಯವನ್ನು ಕಂಡುಬಂದಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಟ್ಟಾರೆ ರಾಜ್ಯದ ರಾಯಚೂರಿನಲ್ಲಿ ರಸ್ತೆ ಅಗಲೀಕರಣದ ಭಾಗವಾಗಿ ಕೆಡವಲ್ಪಟ್ಟ ಮಸೀದಿಯ ಕೆಳಗೆ ಹಿಂದೂ ದೇಗುಲ ಸಿಕ್ಕಿಲ್ಲ.

ಪ್ರತಿಪಾದನೆ: ಕರ್ನಾಟಕದಲ್ಲಿ ರಸ್ತೆ ವಿಸ್ತರಣೆಯ ಕಾಮಗಾರಿ ಭಾಗವಾಗಿ ಮಸೀದಿಯನ್ನು ಕೆಡವಲಾಗಿದ್ದು ಅದರ ಶಿವ ದೇವಾಲಯ ಕಂಡು ಬಂದಿದೆ.

ನಿಜಾಂಶ: 2016ರಲ್ಲಿ ರಾಯಚೂರು ಜಿಲ್ಲೆಯ ಅಧಿಕಾರಿಗಳು ರಸ್ತೆ ವಿಸ್ತರಣೆಯ ಭಾಗವಾಗಿ ರಾಯಚೂರಿನ ಏಕ್ ಮಿನಾರ್ ಮಸೀದಿಯ ಭಾಗವನ್ನು ಕೆಡವಿದ್ದರು. ಏಕ್ ಮಿನಾರ್ ಮಸೀದಿ ಧ್ವಂಸದ ನಂತರ ಹೊರಹೊಮ್ಮಿದ ಕಂಬಗಳು ಹಿಂದೂ ದೇವಾಲಯಗಳಲ್ಲಿ ನಿರ್ಮಿಸಲಾದ ಕಂಬಗಳನ್ನು ಹೋಲುತ್ತವೆ ಎಂದು ಅಲ್ಲಿನ ಹಿಂದೂ ಸಮುದಾಯವು ಆರೋಪಿಸಿದೆ. ಆದರೆ, ಏಕ್ ಮಿನಾರ್ ಮಸೀದಿ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಅಂದಿನ ರಾಯಚೂರು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...