Homeಕರ್ನಾಟಕಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್...

ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

- Advertisement -
- Advertisement -

“ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕನ್ನಡಿಗ ಹಿಂದೂ ಯುವಕನನ್ನು ಬರ್ಬರವಾಗಿ ಕೊಂದು ಹಾಕಿದ ಮತಾಂಧರು” ಎಂದು ಬರೆದಿರುವ ಪೋಸ್ಟರ್‌ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ಬೆಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಚಂದ್ರು ಎಂಬ ಯುವಕನ ಚಿತ್ರವಿರುವ ಪೋಸ್ಟರ್‌ ಆಗಿದ್ದು, ‘ಕಸ್ತೂರಿಟಿವಿ-24’ನ ಟಿವಿ ಸ್ಕ್ರೀನ್‌ಶಾರ್ಟ್‌ಗಳನ್ನು ಇಟ್ಟುಕೊಂಡು ಈ ಪೋಸ್ಟರ್‌ ಅನ್ನು ತಯಾರಿಸಲಾಗಿದೆ.

ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ “ನಮ್ಮ ತುಳುನಾಡು ಟ್ರೋಲ್ಸ್‌”ನ ಫೇಸ್‌ಬುಕ್ ಪೇಜ್‌ ಈ ಪೋಸ್ಟ್‌ರ್‌ ಅನ್ನು ತನ್ನ ಪೇಜ್‌ನಲ್ಲಿ ಪೋಸ್ಟ್‌ ಮಾಡಿತ್ತು. ಆದರೆ ಈಗ ಅದನ್ನು ಡಿಲೀಟ್‌ ಮಾಡಲಾಗಿದೆ. ಮುಸ್ಲಿಂ ಏರಿಯಾಗೆ ಬಂದು ಉರ್ದು ಮಾತನಾಡಲು ಬರುವುದಿಲ್ಲವಾ? ಎಂದು ಹಿಂದೂ ಯುವಕನನ್ನು ಮುಸ್ಲಿಂ ಹಂತಕರು ಕೊಂದಿದ್ದಾರೆ ಎಂದು ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ. ಮತ್ತೊಂದು ವಿಡಿಯೊವನ್ನು ಇಲ್ಲಿ ನೋಡಬಹುದು.

ಪೋಸ್ಟ್‌ರ್‌ನಲ್ಲಿ ಮಾಡಲಾಗಿರುವ ಆರೋಪವು ಕೋಮು ಸಂಘರ್ಷಕ್ಕೆ ಕಾರಣವಾಗುವಂತಹ ವಿಚಾರವಾಗಿದ್ದು ಈ ಹತ್ಯೆಯ ಹಿಂದೆ ನಡೆದಿರುವ ವಾಸ್ತವ ಸಂಗತಿಗಳೇನು? ನಿಜವಾಗಿಯೂ ಉರ್ದು ಭಾಷೆಯ ವಿಚಾರಕ್ಕೆ ಈ ಹತ್ಯೆ ನಡೆದಿದೆಯಾ? ಅಥವಾ ಬೇರೆ ಕಾರಣಗಳೇನು? ಎಂದು ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಏನಿದು ಚಂದ್ರು ಹತ್ಯೆ ಘಟನೆ?

ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋರಿಪಾಳ್ಯದಲ್ಲಿ ಬುಧವಾರ ಮಧ್ಯರಾತ್ರಿ ಚಂದ್ರು ಹತ್ಯೆ ಘಟನೆ ನಡೆದಿದೆ. ಕೊಲೆಗೀಡಾದ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್ ಜೊತೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್‌ಗೆ ಪರಸ್ಪರ ತಗುಲಿತ್ತು. ಈ ವೇಳೆ ಮಾತಿಗೆ ಮಾತು ಮತ್ತೊಂದು ಬೈಕ್‌ನಲ್ಲಿದ್ದ ಆರೋಪಿ ಶಾಹಿದ್‌ ಎಂಬಾತ ಚಂದ್ರುವಿನ ತೊಡೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದನು.

ಈ ವೇಳೆ ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದರು. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಚಂದ್ರು ಹತ್ಯೆ ಕುರಿತು ಮಾಧ್ಯಮಗಳಿಗೆ ಗೃಹ ಸಚಿವರ ಹೇಳಿಕೆ: (ಮೊದಲ ಹೇಳಿಕೆ)

ಚಂದ್ರು ಹತ್ಯೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮದವರ ಮುಂದೆ ಮಾತನಾಡುತ್ತಾ, “ಚಂದ್ರು ಎಂಬ ಹುಡುಗನ ಹತ್ಯೆ ಆಗಿದೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಆತನಿಗೆ ಉರ್ದು ಮಾತನಾಡೋಕೆ ಹೇಳಿದ್ರು. ಆದ್ರೆ ಅವನಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರೋದಿಲ್ಲ ಎಂದು ಹೇಳಿದ್ದಾನೆ. ಆಗ ಅವನನ್ನು ಚೂರಿಯಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಂದಿದ್ದಾರೆ. ಆತ ಒಬ್ಬ ದಲಿತ ಯುವಕನಾಗಿದ್ದು ಹತ್ಯೆ ಮಾಡಿದಂತಹ ಆರೋಪಿಗಳನ್ನು ನಮ್ಮ ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಮಾಧ್ಯಮಗಳು ಕೂಡಾ ಹಾಗೆಯೆ ವರದಿ ಮಾಡಿದ್ದವು. ಇದು ರಾಜ್ಯದ ಪರಿಸ್ಥಿತಿಯನ್ನು ಮತ್ತಷ್ಟು ಕೋಮು ಉದ್ವಿಗ್ನಗೊಳಿಸಿತ್ತು. ಕಸ್ತೂರಿನ್ಯೂಸ್‌24 ಕೂಡಾ ಹಾಗೆಯೆ ಈ ಸುದ್ದಿಯನ್ನು ವರದಿ ಮಾಡಿತ್ತು.(ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ)

 ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!
ಫ್ಯಾಕ್ಟ್‌ಚೆಕ್‌: ಹತ್ಯೆಗೆ ನಿಜವಾದ ಕಾರಣ ಏನು? ಪೊಲೀಸರು ಹೇಳಿದ್ದೇನು?

ಘಟನೆಯ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, “ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದ್ದು.

ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ” ಎಂದು ಟ್ವೀಟ್ ಮಾಡಿದ್ದರು.

ಚಂದ್ರು ಕೊಲೆಗೆ ಸಂಬಂಧಪಟ್ಟ ಗೃಹ ಸಚಿವರ ಆರಗ ಜ್ಞಾನೇಂದ್ರರವರು ನೀಡಿದ್ದ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಲಪಂಥೀಯ ಪ್ರತಿಪಾದಕ ಸೋಶಿಯಲ್ ಮೀಡಿಯಾಗಳು ಕೋಮು ದ್ವೇ‍ಷಭರಿತ ಪೋಸ್ಟ್‌ರ್‌ಗಳನ್ನು ತಮ್ಮ ತಮ್ಮ ಪೇಜ್‌ಗಳಲ್ಲಿವೈರಲ್ ಮಾಡಲು ಪ್ರಾರಂಭಿಸಿದ್ದವು.

ಇದರ ಅಪಾಯಗಳನ್ನರಿತ ಪೊಲೀಸ್ ಇಲಾಖೆ ಚಂದ್ರು ಕೊಲೆಗೆ ಕಾರಣಗಳೇನು ಎಂದು ಘಟನೆಯ ಮಾಹಿತಿಯನ್ನು, ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರು ಸುಳ್ಳು ಮಾಹಿತಿಗಳ ಬಗ್ಗೆ ಫ್ಯಾಕ್ಟ್‌ ಚೆಕ್ ನಡೆಸಿದ್ದಾರೆ.

ಪೋಸ್ಟ್‌ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ಗೃಹ ಸಚಿವರು, ಮತ್ತೆ ಹೇಳಿಕೆ ವಾಪಾಸ್!(2ನೇ ಹೇಳಿಕೆ)

ಪೊಲೀಸರ ಸ್ಪಷ್ಟೀಕರಣದ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರರವರು ನೀಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾದವು. ಇದರಿಂದ ವಿಚಲಿತರಾದ ಗೃಹಸಚಿವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, “ನನ್ನ ಹೇಳಿಕೆಯಲ್ಲಿ ತಪ್ಪಾಗಿದೆ. ತಕ್ಷಣದ ಮಾಹಿತಿಯನ್ನು ಆಧರಿಸಿ ಮಾಹಿತಿಯನ್ನು ಕೊಟ್ಟಿದ್ದೆ. ಅದು ಭಾಷೆ ವಿಚಾರಕ್ಕೆ ಆಗಿರುವ ಹತ್ಯೆ ಅಲ್ಲ. ಮಾಹಿತಿ ಇಲ್ಲದೇ ಮಾತನಾಡಿದೆ. ಅದು ತಪ್ಪಾಗಿದೆ. ಬೈಕ್ ಡಿಕ್ಕಿಯಾಗಿದ್ದು ಬಿಟ್ಟರೆ ಯಾವುದೇ ಹಿನ್ನೆಲೆ ಇಲ್ಲ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಗೃಹ ಮಂತ್ರಿ ಸುಳ್ಳು ಬಯಲಾಗುತ್ತಿದ್ದಂತೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, “ರಾಜ್ಯದ ಗೃಹ ಮಂತ್ರಿಯೊಬ್ಬರು ಈ ರೀತಿ ಸುಳ್ಳು ಹೇಳಿಕೆಯನ್ನು ನೀಡಿದರೆ ಅದರ ಪರಿಣಾಮ ಏನಾಗುತ್ತದೆ ಎಂಬ ಸಣ್ಣ ಸೂಕ್ಷ್ಮತೆ ಇದೆಯೇ” ಎಂದು ಕಿಡಿ ಕಾರಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ ಯುವಕ ಚಂದ್ರು ಮತ್ತು ಆತನ ಸ್ನೇಹಿತ ಸೈಮನ್ ರಾಜ್ ಊಟಕ್ಕೆಂದು ಹೋಗಿದ್ದಾರೆ. ಬೈಕ್ ನಿಲ್ಲಿಸುವ ವೇಳೆ ಸೈಯದ್ ಎಂಬುವವನಿಗೆ ಬೈಕ್‌ ತಗುಲಿದೆ. ಇದರಿಂದ ಕೋಪಗೊಂಡ ಶಾಹಿದ್ ಮತ್ತು ಆತನ ಸ್ನೇಹಿತರು ಚಂದ್ರು ಮತ್ತು ಸೈಮನ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಚಂದ್ರುವಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕ ಚಂದ್ರು ಅಧಿಕ ರಕ್ತ ಸ್ರಾವದಿಂದ ಸಾವನಪ್ಪಿದ್ದಾರೆ.

ಪ್ರಕರಣದಲ್ಲಿ ಉರ್ದು ಭಾಷೆ ಮಾತನಾಡಲಿಲ್ಲ ಎಂಬ ವಿಚಾರಕ್ಕೆ ಕೊಲೆ ನಡೆದಿದೆ ಎಂಬ ಗೃಹ ಸಚಿವರ ಹೇಳಿಕೆ ಸುಳ್ಳಾಗಿದ್ದು, ಈ ಕೊಲೆಗೆ ಕೋಮು ಸಂಘರ್ಷವಾಗಲಿ, ಕೋಮು ಪ್ರಚೋದನೆಯ ಹಿನ್ನೆಯಾಗಲಿ ಇಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...