Homeಕರ್ನಾಟಕಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್...

ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

- Advertisement -
- Advertisement -

“ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕನ್ನಡಿಗ ಹಿಂದೂ ಯುವಕನನ್ನು ಬರ್ಬರವಾಗಿ ಕೊಂದು ಹಾಕಿದ ಮತಾಂಧರು” ಎಂದು ಬರೆದಿರುವ ಪೋಸ್ಟರ್‌ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ಬೆಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಚಂದ್ರು ಎಂಬ ಯುವಕನ ಚಿತ್ರವಿರುವ ಪೋಸ್ಟರ್‌ ಆಗಿದ್ದು, ‘ಕಸ್ತೂರಿಟಿವಿ-24’ನ ಟಿವಿ ಸ್ಕ್ರೀನ್‌ಶಾರ್ಟ್‌ಗಳನ್ನು ಇಟ್ಟುಕೊಂಡು ಈ ಪೋಸ್ಟರ್‌ ಅನ್ನು ತಯಾರಿಸಲಾಗಿದೆ.

ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ “ನಮ್ಮ ತುಳುನಾಡು ಟ್ರೋಲ್ಸ್‌”ನ ಫೇಸ್‌ಬುಕ್ ಪೇಜ್‌ ಈ ಪೋಸ್ಟ್‌ರ್‌ ಅನ್ನು ತನ್ನ ಪೇಜ್‌ನಲ್ಲಿ ಪೋಸ್ಟ್‌ ಮಾಡಿತ್ತು. ಆದರೆ ಈಗ ಅದನ್ನು ಡಿಲೀಟ್‌ ಮಾಡಲಾಗಿದೆ. ಮುಸ್ಲಿಂ ಏರಿಯಾಗೆ ಬಂದು ಉರ್ದು ಮಾತನಾಡಲು ಬರುವುದಿಲ್ಲವಾ? ಎಂದು ಹಿಂದೂ ಯುವಕನನ್ನು ಮುಸ್ಲಿಂ ಹಂತಕರು ಕೊಂದಿದ್ದಾರೆ ಎಂದು ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ. ಮತ್ತೊಂದು ವಿಡಿಯೊವನ್ನು ಇಲ್ಲಿ ನೋಡಬಹುದು.

ಪೋಸ್ಟ್‌ರ್‌ನಲ್ಲಿ ಮಾಡಲಾಗಿರುವ ಆರೋಪವು ಕೋಮು ಸಂಘರ್ಷಕ್ಕೆ ಕಾರಣವಾಗುವಂತಹ ವಿಚಾರವಾಗಿದ್ದು ಈ ಹತ್ಯೆಯ ಹಿಂದೆ ನಡೆದಿರುವ ವಾಸ್ತವ ಸಂಗತಿಗಳೇನು? ನಿಜವಾಗಿಯೂ ಉರ್ದು ಭಾಷೆಯ ವಿಚಾರಕ್ಕೆ ಈ ಹತ್ಯೆ ನಡೆದಿದೆಯಾ? ಅಥವಾ ಬೇರೆ ಕಾರಣಗಳೇನು? ಎಂದು ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಏನಿದು ಚಂದ್ರು ಹತ್ಯೆ ಘಟನೆ?

ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋರಿಪಾಳ್ಯದಲ್ಲಿ ಬುಧವಾರ ಮಧ್ಯರಾತ್ರಿ ಚಂದ್ರು ಹತ್ಯೆ ಘಟನೆ ನಡೆದಿದೆ. ಕೊಲೆಗೀಡಾದ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್ ಜೊತೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್‌ಗೆ ಪರಸ್ಪರ ತಗುಲಿತ್ತು. ಈ ವೇಳೆ ಮಾತಿಗೆ ಮಾತು ಮತ್ತೊಂದು ಬೈಕ್‌ನಲ್ಲಿದ್ದ ಆರೋಪಿ ಶಾಹಿದ್‌ ಎಂಬಾತ ಚಂದ್ರುವಿನ ತೊಡೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದನು.

ಈ ವೇಳೆ ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದರು. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಚಂದ್ರು ಹತ್ಯೆ ಕುರಿತು ಮಾಧ್ಯಮಗಳಿಗೆ ಗೃಹ ಸಚಿವರ ಹೇಳಿಕೆ: (ಮೊದಲ ಹೇಳಿಕೆ)

ಚಂದ್ರು ಹತ್ಯೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮದವರ ಮುಂದೆ ಮಾತನಾಡುತ್ತಾ, “ಚಂದ್ರು ಎಂಬ ಹುಡುಗನ ಹತ್ಯೆ ಆಗಿದೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಆತನಿಗೆ ಉರ್ದು ಮಾತನಾಡೋಕೆ ಹೇಳಿದ್ರು. ಆದ್ರೆ ಅವನಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರೋದಿಲ್ಲ ಎಂದು ಹೇಳಿದ್ದಾನೆ. ಆಗ ಅವನನ್ನು ಚೂರಿಯಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಂದಿದ್ದಾರೆ. ಆತ ಒಬ್ಬ ದಲಿತ ಯುವಕನಾಗಿದ್ದು ಹತ್ಯೆ ಮಾಡಿದಂತಹ ಆರೋಪಿಗಳನ್ನು ನಮ್ಮ ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಮಾಧ್ಯಮಗಳು ಕೂಡಾ ಹಾಗೆಯೆ ವರದಿ ಮಾಡಿದ್ದವು. ಇದು ರಾಜ್ಯದ ಪರಿಸ್ಥಿತಿಯನ್ನು ಮತ್ತಷ್ಟು ಕೋಮು ಉದ್ವಿಗ್ನಗೊಳಿಸಿತ್ತು. ಕಸ್ತೂರಿನ್ಯೂಸ್‌24 ಕೂಡಾ ಹಾಗೆಯೆ ಈ ಸುದ್ದಿಯನ್ನು ವರದಿ ಮಾಡಿತ್ತು.(ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ)

 ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!
ಫ್ಯಾಕ್ಟ್‌ಚೆಕ್‌: ಹತ್ಯೆಗೆ ನಿಜವಾದ ಕಾರಣ ಏನು? ಪೊಲೀಸರು ಹೇಳಿದ್ದೇನು?

ಘಟನೆಯ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, “ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದ್ದು.

ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ” ಎಂದು ಟ್ವೀಟ್ ಮಾಡಿದ್ದರು.

ಚಂದ್ರು ಕೊಲೆಗೆ ಸಂಬಂಧಪಟ್ಟ ಗೃಹ ಸಚಿವರ ಆರಗ ಜ್ಞಾನೇಂದ್ರರವರು ನೀಡಿದ್ದ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಲಪಂಥೀಯ ಪ್ರತಿಪಾದಕ ಸೋಶಿಯಲ್ ಮೀಡಿಯಾಗಳು ಕೋಮು ದ್ವೇ‍ಷಭರಿತ ಪೋಸ್ಟ್‌ರ್‌ಗಳನ್ನು ತಮ್ಮ ತಮ್ಮ ಪೇಜ್‌ಗಳಲ್ಲಿವೈರಲ್ ಮಾಡಲು ಪ್ರಾರಂಭಿಸಿದ್ದವು.

ಇದರ ಅಪಾಯಗಳನ್ನರಿತ ಪೊಲೀಸ್ ಇಲಾಖೆ ಚಂದ್ರು ಕೊಲೆಗೆ ಕಾರಣಗಳೇನು ಎಂದು ಘಟನೆಯ ಮಾಹಿತಿಯನ್ನು, ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರು ಸುಳ್ಳು ಮಾಹಿತಿಗಳ ಬಗ್ಗೆ ಫ್ಯಾಕ್ಟ್‌ ಚೆಕ್ ನಡೆಸಿದ್ದಾರೆ.

ಪೋಸ್ಟ್‌ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ಗೃಹ ಸಚಿವರು, ಮತ್ತೆ ಹೇಳಿಕೆ ವಾಪಾಸ್!(2ನೇ ಹೇಳಿಕೆ)

ಪೊಲೀಸರ ಸ್ಪಷ್ಟೀಕರಣದ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರರವರು ನೀಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾದವು. ಇದರಿಂದ ವಿಚಲಿತರಾದ ಗೃಹಸಚಿವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, “ನನ್ನ ಹೇಳಿಕೆಯಲ್ಲಿ ತಪ್ಪಾಗಿದೆ. ತಕ್ಷಣದ ಮಾಹಿತಿಯನ್ನು ಆಧರಿಸಿ ಮಾಹಿತಿಯನ್ನು ಕೊಟ್ಟಿದ್ದೆ. ಅದು ಭಾಷೆ ವಿಚಾರಕ್ಕೆ ಆಗಿರುವ ಹತ್ಯೆ ಅಲ್ಲ. ಮಾಹಿತಿ ಇಲ್ಲದೇ ಮಾತನಾಡಿದೆ. ಅದು ತಪ್ಪಾಗಿದೆ. ಬೈಕ್ ಡಿಕ್ಕಿಯಾಗಿದ್ದು ಬಿಟ್ಟರೆ ಯಾವುದೇ ಹಿನ್ನೆಲೆ ಇಲ್ಲ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಗೃಹ ಮಂತ್ರಿ ಸುಳ್ಳು ಬಯಲಾಗುತ್ತಿದ್ದಂತೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, “ರಾಜ್ಯದ ಗೃಹ ಮಂತ್ರಿಯೊಬ್ಬರು ಈ ರೀತಿ ಸುಳ್ಳು ಹೇಳಿಕೆಯನ್ನು ನೀಡಿದರೆ ಅದರ ಪರಿಣಾಮ ಏನಾಗುತ್ತದೆ ಎಂಬ ಸಣ್ಣ ಸೂಕ್ಷ್ಮತೆ ಇದೆಯೇ” ಎಂದು ಕಿಡಿ ಕಾರಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ ಯುವಕ ಚಂದ್ರು ಮತ್ತು ಆತನ ಸ್ನೇಹಿತ ಸೈಮನ್ ರಾಜ್ ಊಟಕ್ಕೆಂದು ಹೋಗಿದ್ದಾರೆ. ಬೈಕ್ ನಿಲ್ಲಿಸುವ ವೇಳೆ ಸೈಯದ್ ಎಂಬುವವನಿಗೆ ಬೈಕ್‌ ತಗುಲಿದೆ. ಇದರಿಂದ ಕೋಪಗೊಂಡ ಶಾಹಿದ್ ಮತ್ತು ಆತನ ಸ್ನೇಹಿತರು ಚಂದ್ರು ಮತ್ತು ಸೈಮನ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಚಂದ್ರುವಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕ ಚಂದ್ರು ಅಧಿಕ ರಕ್ತ ಸ್ರಾವದಿಂದ ಸಾವನಪ್ಪಿದ್ದಾರೆ.

ಪ್ರಕರಣದಲ್ಲಿ ಉರ್ದು ಭಾಷೆ ಮಾತನಾಡಲಿಲ್ಲ ಎಂಬ ವಿಚಾರಕ್ಕೆ ಕೊಲೆ ನಡೆದಿದೆ ಎಂಬ ಗೃಹ ಸಚಿವರ ಹೇಳಿಕೆ ಸುಳ್ಳಾಗಿದ್ದು, ಈ ಕೊಲೆಗೆ ಕೋಮು ಸಂಘರ್ಷವಾಗಲಿ, ಕೋಮು ಪ್ರಚೋದನೆಯ ಹಿನ್ನೆಯಾಗಲಿ ಇಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...