Homeಕರ್ನಾಟಕಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್...

ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್‌!

- Advertisement -
- Advertisement -

“ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕನ್ನಡಿಗ ಹಿಂದೂ ಯುವಕನನ್ನು ಬರ್ಬರವಾಗಿ ಕೊಂದು ಹಾಕಿದ ಮತಾಂಧರು” ಎಂದು ಬರೆದಿರುವ ಪೋಸ್ಟರ್‌ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ಬೆಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಚಂದ್ರು ಎಂಬ ಯುವಕನ ಚಿತ್ರವಿರುವ ಪೋಸ್ಟರ್‌ ಆಗಿದ್ದು, ‘ಕಸ್ತೂರಿಟಿವಿ-24’ನ ಟಿವಿ ಸ್ಕ್ರೀನ್‌ಶಾರ್ಟ್‌ಗಳನ್ನು ಇಟ್ಟುಕೊಂಡು ಈ ಪೋಸ್ಟರ್‌ ಅನ್ನು ತಯಾರಿಸಲಾಗಿದೆ.

ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ “ನಮ್ಮ ತುಳುನಾಡು ಟ್ರೋಲ್ಸ್‌”ನ ಫೇಸ್‌ಬುಕ್ ಪೇಜ್‌ ಈ ಪೋಸ್ಟ್‌ರ್‌ ಅನ್ನು ತನ್ನ ಪೇಜ್‌ನಲ್ಲಿ ಪೋಸ್ಟ್‌ ಮಾಡಿತ್ತು. ಆದರೆ ಈಗ ಅದನ್ನು ಡಿಲೀಟ್‌ ಮಾಡಲಾಗಿದೆ. ಮುಸ್ಲಿಂ ಏರಿಯಾಗೆ ಬಂದು ಉರ್ದು ಮಾತನಾಡಲು ಬರುವುದಿಲ್ಲವಾ? ಎಂದು ಹಿಂದೂ ಯುವಕನನ್ನು ಮುಸ್ಲಿಂ ಹಂತಕರು ಕೊಂದಿದ್ದಾರೆ ಎಂದು ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ. ಮತ್ತೊಂದು ವಿಡಿಯೊವನ್ನು ಇಲ್ಲಿ ನೋಡಬಹುದು.

ಪೋಸ್ಟ್‌ರ್‌ನಲ್ಲಿ ಮಾಡಲಾಗಿರುವ ಆರೋಪವು ಕೋಮು ಸಂಘರ್ಷಕ್ಕೆ ಕಾರಣವಾಗುವಂತಹ ವಿಚಾರವಾಗಿದ್ದು ಈ ಹತ್ಯೆಯ ಹಿಂದೆ ನಡೆದಿರುವ ವಾಸ್ತವ ಸಂಗತಿಗಳೇನು? ನಿಜವಾಗಿಯೂ ಉರ್ದು ಭಾಷೆಯ ವಿಚಾರಕ್ಕೆ ಈ ಹತ್ಯೆ ನಡೆದಿದೆಯಾ? ಅಥವಾ ಬೇರೆ ಕಾರಣಗಳೇನು? ಎಂದು ಪರಿಶೀಲಿಸೋಣ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಏನಿದು ಚಂದ್ರು ಹತ್ಯೆ ಘಟನೆ?

ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋರಿಪಾಳ್ಯದಲ್ಲಿ ಬುಧವಾರ ಮಧ್ಯರಾತ್ರಿ ಚಂದ್ರು ಹತ್ಯೆ ಘಟನೆ ನಡೆದಿದೆ. ಕೊಲೆಗೀಡಾದ ಚಂದ್ರು ತನ್ನ ಸ್ನೇಹಿತ ಸೈಮನ್ ರಾಜ್ ಜೊತೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್‌ಗೆ ಪರಸ್ಪರ ತಗುಲಿತ್ತು. ಈ ವೇಳೆ ಮಾತಿಗೆ ಮಾತು ಮತ್ತೊಂದು ಬೈಕ್‌ನಲ್ಲಿದ್ದ ಆರೋಪಿ ಶಾಹಿದ್‌ ಎಂಬಾತ ಚಂದ್ರುವಿನ ತೊಡೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದನು.

ಈ ವೇಳೆ ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದರು. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಚಂದ್ರು ಹತ್ಯೆ ಕುರಿತು ಮಾಧ್ಯಮಗಳಿಗೆ ಗೃಹ ಸಚಿವರ ಹೇಳಿಕೆ: (ಮೊದಲ ಹೇಳಿಕೆ)

ಚಂದ್ರು ಹತ್ಯೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮದವರ ಮುಂದೆ ಮಾತನಾಡುತ್ತಾ, “ಚಂದ್ರು ಎಂಬ ಹುಡುಗನ ಹತ್ಯೆ ಆಗಿದೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಆತನಿಗೆ ಉರ್ದು ಮಾತನಾಡೋಕೆ ಹೇಳಿದ್ರು. ಆದ್ರೆ ಅವನಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರೋದಿಲ್ಲ ಎಂದು ಹೇಳಿದ್ದಾನೆ. ಆಗ ಅವನನ್ನು ಚೂರಿಯಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಂದಿದ್ದಾರೆ. ಆತ ಒಬ್ಬ ದಲಿತ ಯುವಕನಾಗಿದ್ದು ಹತ್ಯೆ ಮಾಡಿದಂತಹ ಆರೋಪಿಗಳನ್ನು ನಮ್ಮ ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದರು.

ಈ ಹೇಳಿಕೆಯನ್ನು ಮಾಧ್ಯಮಗಳು ಕೂಡಾ ಹಾಗೆಯೆ ವರದಿ ಮಾಡಿದ್ದವು. ಇದು ರಾಜ್ಯದ ಪರಿಸ್ಥಿತಿಯನ್ನು ಮತ್ತಷ್ಟು ಕೋಮು ಉದ್ವಿಗ್ನಗೊಳಿಸಿತ್ತು. ಕಸ್ತೂರಿನ್ಯೂಸ್‌24 ಕೂಡಾ ಹಾಗೆಯೆ ಈ ಸುದ್ದಿಯನ್ನು ವರದಿ ಮಾಡಿತ್ತು.(ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ)

 ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!
ಫ್ಯಾಕ್ಟ್‌ಚೆಕ್‌: ಹತ್ಯೆಗೆ ನಿಜವಾದ ಕಾರಣ ಏನು? ಪೊಲೀಸರು ಹೇಳಿದ್ದೇನು?

ಘಟನೆಯ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, “ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದ್ದು.

ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ” ಎಂದು ಟ್ವೀಟ್ ಮಾಡಿದ್ದರು.

ಚಂದ್ರು ಕೊಲೆಗೆ ಸಂಬಂಧಪಟ್ಟ ಗೃಹ ಸಚಿವರ ಆರಗ ಜ್ಞಾನೇಂದ್ರರವರು ನೀಡಿದ್ದ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಲಪಂಥೀಯ ಪ್ರತಿಪಾದಕ ಸೋಶಿಯಲ್ ಮೀಡಿಯಾಗಳು ಕೋಮು ದ್ವೇ‍ಷಭರಿತ ಪೋಸ್ಟ್‌ರ್‌ಗಳನ್ನು ತಮ್ಮ ತಮ್ಮ ಪೇಜ್‌ಗಳಲ್ಲಿವೈರಲ್ ಮಾಡಲು ಪ್ರಾರಂಭಿಸಿದ್ದವು.

ಇದರ ಅಪಾಯಗಳನ್ನರಿತ ಪೊಲೀಸ್ ಇಲಾಖೆ ಚಂದ್ರು ಕೊಲೆಗೆ ಕಾರಣಗಳೇನು ಎಂದು ಘಟನೆಯ ಮಾಹಿತಿಯನ್ನು, ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರು ಸುಳ್ಳು ಮಾಹಿತಿಗಳ ಬಗ್ಗೆ ಫ್ಯಾಕ್ಟ್‌ ಚೆಕ್ ನಡೆಸಿದ್ದಾರೆ.

ಪೋಸ್ಟ್‌ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ಗೃಹ ಸಚಿವರು, ಮತ್ತೆ ಹೇಳಿಕೆ ವಾಪಾಸ್!(2ನೇ ಹೇಳಿಕೆ)

ಪೊಲೀಸರ ಸ್ಪಷ್ಟೀಕರಣದ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರರವರು ನೀಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾದವು. ಇದರಿಂದ ವಿಚಲಿತರಾದ ಗೃಹಸಚಿವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, “ನನ್ನ ಹೇಳಿಕೆಯಲ್ಲಿ ತಪ್ಪಾಗಿದೆ. ತಕ್ಷಣದ ಮಾಹಿತಿಯನ್ನು ಆಧರಿಸಿ ಮಾಹಿತಿಯನ್ನು ಕೊಟ್ಟಿದ್ದೆ. ಅದು ಭಾಷೆ ವಿಚಾರಕ್ಕೆ ಆಗಿರುವ ಹತ್ಯೆ ಅಲ್ಲ. ಮಾಹಿತಿ ಇಲ್ಲದೇ ಮಾತನಾಡಿದೆ. ಅದು ತಪ್ಪಾಗಿದೆ. ಬೈಕ್ ಡಿಕ್ಕಿಯಾಗಿದ್ದು ಬಿಟ್ಟರೆ ಯಾವುದೇ ಹಿನ್ನೆಲೆ ಇಲ್ಲ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಗೃಹ ಮಂತ್ರಿ ಸುಳ್ಳು ಬಯಲಾಗುತ್ತಿದ್ದಂತೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, “ರಾಜ್ಯದ ಗೃಹ ಮಂತ್ರಿಯೊಬ್ಬರು ಈ ರೀತಿ ಸುಳ್ಳು ಹೇಳಿಕೆಯನ್ನು ನೀಡಿದರೆ ಅದರ ಪರಿಣಾಮ ಏನಾಗುತ್ತದೆ ಎಂಬ ಸಣ್ಣ ಸೂಕ್ಷ್ಮತೆ ಇದೆಯೇ” ಎಂದು ಕಿಡಿ ಕಾರಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ ಯುವಕ ಚಂದ್ರು ಮತ್ತು ಆತನ ಸ್ನೇಹಿತ ಸೈಮನ್ ರಾಜ್ ಊಟಕ್ಕೆಂದು ಹೋಗಿದ್ದಾರೆ. ಬೈಕ್ ನಿಲ್ಲಿಸುವ ವೇಳೆ ಸೈಯದ್ ಎಂಬುವವನಿಗೆ ಬೈಕ್‌ ತಗುಲಿದೆ. ಇದರಿಂದ ಕೋಪಗೊಂಡ ಶಾಹಿದ್ ಮತ್ತು ಆತನ ಸ್ನೇಹಿತರು ಚಂದ್ರು ಮತ್ತು ಸೈಮನ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಚಂದ್ರುವಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕ ಚಂದ್ರು ಅಧಿಕ ರಕ್ತ ಸ್ರಾವದಿಂದ ಸಾವನಪ್ಪಿದ್ದಾರೆ.

ಪ್ರಕರಣದಲ್ಲಿ ಉರ್ದು ಭಾಷೆ ಮಾತನಾಡಲಿಲ್ಲ ಎಂಬ ವಿಚಾರಕ್ಕೆ ಕೊಲೆ ನಡೆದಿದೆ ಎಂಬ ಗೃಹ ಸಚಿವರ ಹೇಳಿಕೆ ಸುಳ್ಳಾಗಿದ್ದು, ಈ ಕೊಲೆಗೆ ಕೋಮು ಸಂಘರ್ಷವಾಗಲಿ, ಕೋಮು ಪ್ರಚೋದನೆಯ ಹಿನ್ನೆಯಾಗಲಿ ಇಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...