Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...