Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...