Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...