Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...