Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...