Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...