Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....