Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ಪೋಟೋಗಳನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಘಟನೆಗೆ ಮಮತಾ ಬ್ಯಾನರ್ಜಿ ಕಾರಣ ಎಂದು ಆರೋಪಿದ್ದಾರೆ.

- Advertisement -
- Advertisement -

ಪಶ್ವಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ಮುಸ್ಲಿಮರು ಹಿಂದೂ ದೇವತೆ ಕಾಳಿ ಮಾತೆಯ ವಿಗ್ರಹ ಸುಟ್ಟಿದ್ದಾರೆ ಹಾಗೂ ದೇವಸ್ಥಾನ ಧ್ವಂಸಗೊಳಿಸಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ್ಧಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಸುಟ್ಟ ದೇವತೆಯ ಮೂರ್ತಿಯೊಂದರ ಚಿತ್ರ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ಇದೇ ಪೋಟೋಗಳನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಎಂಬುವರು,  ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮುಸ್ಲಿಂ ಸಮುದಾಯದ ಜನರು ಕಾಳಿ ಮಾತೆಯ ವಿಗ್ರಹಕ್ಕೆ ಬೆಂಕಿ ಇಟ್ಟಿದ್ದಾರೆ. ಇದು ಮುಖ್ಯಮಂತ್ರಿ ದೀದಿಯ ಜಿಹಾದಿ ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಅವರು ಆರೋಪಿಸಿದ್ದರು.

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರೂ ಕೂಡಾ ಇದೇ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಪೋಸ್ಟ್‌ನ ಆರ್ಕವೈ ಮಾಡಲಾದ ಆವೃತ್ತಿಯನ್ನು ಇಲ್ಲಿ ಕಾಣಬಹುದು.

ಪ್ರತಿಪಾದನೆ: ಮುಸ್ಲಿಮರು ಕಾಳಿ ದೇವರ ವಿಗ್ರಹ ಸುಟ್ಟು, ದೇವಸ್ಥಾನ ದ್ವಂಸಗೊಳಿದ್ದಾರೆ.
ಸತ್ಯಾಂಶ: ಕಾಳಿ ದೇವಸ್ಥಾನವನ್ನು ಯಾವುದೇ ಗುಂಪು ದ್ವಂಸ ಮಾಡಿಲ್ಲ. ದೇವಸ್ಥಾನದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಆ ಸಮಯದಲ್ಲಿ ವಿಗ್ರಹ ಸುಟ್ಟಿತ್ತು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪಾಗಿದೆ.

ಅರ್ಜುನ್‌ ಸಿಂಗ್ ಅರೋಪಿಸಿ ಮಾಡಿರುವ ಟ್ವೀಟ್‌ಅನ್ನು ಪ್ರತಿಕ್ರಿಯಿಸಿ ರೀಟ್ವೀಟ್‌ ಮಾಡಿರುವ ಮುರ್ಶಿದಾಬಾದ್ ಪೊಲೀಸರು ಇದಕ್ಕೆ ಸ್ಪಷ್ಟನೆ ನೀಡಿದ್ದು, “ಮುಸ್ಲಿಮರು ಈ ದೇಗುಲಕ್ಕೆ ಬೆಂಕಿ ಇಟ್ಟರು ಎಂಬ ಆಪಾದನೆಯನ್ನು ಸುಳ್ಳು. ದೇವಾಲಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಆ ಸಂದರ್ಭದಲ್ಲಿ ದೇವರ ವಿಗ್ರಹ ಸುಟ್ಟಿದೆ. ಅಲ್ಲದೆ, ದೇವಸ್ಥಾನದಲ್ಲಿ ಹಲವು ವಸ್ತುಗಳು ಸುಟ್ಟುಹೋಗಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಬಂಗಾಳಿ ಭಾಷೆಯಲ್ಲಿ ಬರೆಯಲಾದ ಪತ್ರದಲ್ಲಿ, ಮುರ್ಶಿದಾಬಾದ್ ಪೊಲೀಸರು ಇದೊಂದು ಅಗ್ನಿ ಅನಾಹುತ ಎಂದು ವರದಿ ನೀಡಿದ್ದು, ದೇವಸ್ಥಾನದ ಆಡಳಿತ ಮಂಡಳಿ ಕೂಡಾ ದೇಗುಲದಲ್ಲಿ ಹಚ್ಚಿದ್ದ ಹಣತೆಯ ಮೂಲಕ ಆಕಸ್ಮಿಕವಾಗಿ ಬೆಂಕಿ ಅಫಘಾತ ಸಂಭವಿಸಿದೆ ಎಂದು ಹೇಳಿದೆ.
ದೇವಾಲಯ ಆಡಳಿತ ಮಂಡಳಿಯು ದೇವಾಲಯದ ಪುನರ್‌ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯ ಪೊಲೀಸ್, ಜಿಲ್ಲಾಡಳಿತ ನೆರವಿಗೆ ನಿಂತಿದೆ. ಈ ನಡುವೆ, ಈ ರೀತಿಯ ಪ್ರಚೋದನಾತ್ಮಕ ಸಂದೇಶಗಳನ್ನು ಹಂಚಿಕೊಳ್ಳಬೇಡಿ. ಹೆಚ್ಚಿನ ಮಾಹಿತಿ ಬೇಕಿದ್ದರೆ ದೇವಸ್ಥಾನದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಎಂದು ಮರ್ಶಿದಾಬಾದ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಳಿ ದೇವಾಲಯಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ ದೇವಾಲಯ ಸುಟ್ಟಿದ್ದು, ಮುಸ್ಲೀಮರು ದೇವಸ್ಥಾನವನ್ನು ದ್ವಂಸ ಮಾಡಿದ್ದಾರೆ ಎಂಬ ಬಿಜೆಪಿ ನಾಯಕರ ವಾದ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...