Homeಅಂತರಾಷ್ಟ್ರೀಯಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

ಫ್ಯಾಕ್ಟ್‌‌ಚೆಕ್: ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಶ್ರೀಕೃಷ್ಟ ಹಾಗೂ ಭಗವದ್ಗೀತೆಯನ್ನು ಹೊಗಳಿದರೆ?

ಅವರು ತಮ್ಮ ವಿಡಿಯೋ ಸಂದೇಶದ ಜೊತೆಗೆ ಟ್ವೀಟ್‌ನಲ್ಲಿ ’ಜೈಶ್ರೀಕೃಷ್ಣ’ ಎಂದಿದ್ದು ನಿಜವೆ ?

- Advertisement -
- Advertisement -

ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವಿದೇಶಿಯಂತೆ ಕಾಣುವ ಮಹಿಳೆಯೊಬ್ಬರು ಶ್ರೀಕೃಷ್ಣ ಮತ್ತು ಭಗವದ್ಗೀತೆಯನ್ನು ಹೊಗಳಿದ ವೈರಲ್ ವಿಡಿಯೋವೊಂದನ್ನು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಮಹಿಳೆಯು, “… ಭಗವದ್ಗೀತೆ ಅಂದರೆ ’ದೇವರ ಹಾಡು ’. ಶ್ರೀ ಕೃಷ್ಣ ಹೇಳಿದ್ದ ಭಗವದ್ಗೀತೆಯು ಅತೀಂದ್ರಿಯ ಬುದ್ಧಿವಂತಿಕೆಯಿಂದ ತುಂಬಿದ್ದು, ಅದು 5,000 ವರ್ಷಗಳ ಹಿಂದೆ ಮಾತನಾಡುವಾಗ ಇದ್ದಂತೆಯೇ ಇಂದಿಗೂ ಪ್ರಸ್ತುತವಾಗಿದೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಡಿಜೆ ಹಳ್ಳಿ ಗಲಭೆಯ ಆರೋಪಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದೆ? ಇದು ನಿಜವೆ ?

ಈ ವಿಡಿಯೋವನ್ನುಇಟ್ಟುಕೊಂಡು ಭಗವದ್ಗೀತೆಯ ಮಹತ್ವದ ಬಗ್ಗೆ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಮಾತನಾಡುತ್ತಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಬಳಕೆದಾರರು ಹೇಳುತ್ತಾ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋವನ್ನು ಹಲವಾರು ಫೇಸ್‌ಬುಕ್ ಹಾಗೂ ಟ್ವಿಟ್ಟರ್‌ ಬಳಕೆದಾರರು ಒಂದೇ ರೀತಿಯ ನಿರೂಪಣೆಯೊಂದಿಗೆ ಹಂಚಿಕೊಂಡಿದ್ದಾರೆ.

ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌‌ಚೆಕ್

ವೀಡಿಯೊದಲ್ಲಿ ಇರುವುದು ವಿದೇಶಿ ಮಹಿಳೆ ಎಂಬುವುದು ನಿಜವಾಗಿದೆ. ಅದರಂತೆ ಈ ವಿಡಿಯೋ ಎಡಿಟ್ ಮಾಡಿದ ವಿಡಿಯೋ ಕೂಡಾ ಅಲ್ಲ. ಆದರೆ ವಿಡಿಯೋದಲ್ಲಿ ಇರುವ ಮಹಿಳೆಯು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅಲ್ಲ, ಬದಲಾಗಿ ಅಮೆರಿಕಾದ ಜನಪ್ರತಿನಿಧಿ ತುಳಸಿ ಗಬ್ಬಾರ್ಡ್ ಎಂಬವರಾಗಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಆಗಸ್ಟ್ 11 ರಂದು ಕೃಷ್ಟ ಜನ್ಮಾಷ್ಟಮಿ ಸಂದರ್ಭದಲ್ಲಿ ತುಳಸಿ ಗಬ್ಬಾರ್ಡ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದರು.

ಅಷ್ಟೇ ಅಲ್ಲದೆ ತಮ್ಮ ಟ್ವಿಟ್ಟರ್‌ನಲ್ಲಿ “ಪ್ರಪಂಚದಾದ್ಯಂತ ಜನ್ಮಾಷ್ಟಮಿ ಆಚರಿಸುವ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ! ನಾವು ಯಾವಾಗಲೂ ಶ್ರೀ ಕೃಷ್ಣನ ಸ್ಮರಣೆ, ​​ಅವನ ಬೇಷರತ್ತಾದ ಪ್ರೀತಿ ಮತ್ತು ಅವನ ಅತೀಂದ್ರಿಯ ದೃಷ್ಟಿಯ ಆಶೀರ್ವದ ಪಡೆಯೋಣ. ಜೈ ಶ್ರೀ ಕೃಷ್ಣ! ” ಎಂದು ಬರೆದು ತಮ್ಮ ಈ ವಿಡಿಯೋವನ್ನು ಹಂಚಿದ್ದಾರೆ.

ತುಳಸಿ ಗಬ್ಬಾರ್ಡ್ ಡೆಮೋಕ್ರಾಟಿಕ್ ಪಕ್ಷದ ಅಮೇರಿಕನ್ ರಾಜಕಾರಣಿ, 2013 ರಿಂದ ಹವಾಯಿಯ 2 ನೇ ಕಾಂಗ್ರೆಸ್ ಜಿಲ್ಲೆಯ ಅಮೆರಿಕಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹವಾಯಿಯ ಒಂದು ಕ್ಷೇತ್ರವನ್ನು ಪ್ರತಿನಿಧಿಸುವ ಗಬ್ಬಾರ್ಡ್ ಭಾರತೀಯ ಮೂಲದವರಲ್ಲ ಮತ್ತು ಅವರ ಪೋಷಕರು ಇಬ್ಬರೂ ಹಿಂದೂಗಳಲ್ಲ, ಆದರೆ ಅವರು ಹಿಂದೂ ಧರ್ಮವನ್ನು ಆಚರಣೆ ಮಾಡುತ್ತಾರೆ.

ಇದನ್ನೂ ಓದಿ: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನ್ಯೂಜಿಲೆಂಡ್ ಪ್ರಧಾನಿ ಮತ್ತು ಅಮೆರಿಕಾ ಪ್ರತಿನಿಧಿಯ ಮುಖದ ವ್ಯತ್ಯಾಸವನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

PC: The Quint

ಆದರೆ ನ್ಯೂಜಿಲೆಂಡ್ ಪ್ರಧಾನಿ ಆಗಸ್ಟ್ 6 ರಂದು ಆಕ್ಲೆಂಡ್‌ನ ರಾಧಾ ಕೃಷ್ಣ ದೇವಸ್ಥಾನಕ್ಕೆ ಒಂದು ಸಣ್ಣ ಭೇಟಿ ನೀಡಿದ್ದರು.

ಅಮೆರಿಕಾದ ರಾಜಕಾರಣಿ ತುಳಸಿ ಗಬ್ಬಾರ್ಡ್ ಬಿಡುಗಡೆ ಮಾಡಿರುವ ವಿಡಿಯೋವನ್ನು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರದ್ದೆಂದು ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡುತ್ತಿದ್ದಾರೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...