Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಯಾತ್ರೆಯಲ್ಲಿ ಯುವತಿಯೊಬ್ಬರೊಂದಿಗೆ ಇರುವ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರೀತಿ ಗಾಂಧಿ ಅವರು ಹಂಚಿಕೊಂಡಿರುವ ವಿಡಿಯೊದ ಅರ್ಧ ಭಾಗದಲ್ಲಿ ಬಾಬ್‌ಕಟ್‌‌ ಹೇರ್‌ಸ್ಟೈಲ್‌ ಮಾಡಿಕೊಂಡಿರುವ ಯುವತಿಯು ರಾಹುಲ್ ಗಾಂಧಿಯ ಜೊತೆಗೆ ನಡೆಯುತ್ತಿರುವ ದೃಶ್ಯವಿದ್ದರೆ, ಮತ್ತೊಂದು ಅರ್ಧದಲ್ಲಿ ಸಿಎಎ ವಿರೋಧಿ ಹೋರಾಟದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯ ದೃಶ್ಯಗಳಿವೆ.

ಸಿಎಎ ವಿರೋಧಿ ಹೋರಾಟದ ಸಮಯ ಸಂಸದ ಅಸಾದುದ್ದೀನ್ ಒವೈಸಿ ಅವರು ಭಾಗವಹಿಸಿದ್ದ ವೇದಿಕೆಯೊಂದರಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗುತ್ತಿದ್ದಂತೆ ಅವರ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿತ್ತು. ಅದರ ನಂತರ ಅವರು ‘ಹಿಂದೂಸ್ತಾನ್ ಝಿಂದಾಬಾದ್’ ಹೇಳಿಕೆ ನೀಡಿ ‘ವ್ಯತ್ಯಾಸ ಗಮನಿಸಿ…’ ಎಂದು ಹೇಳುತ್ತಿದ್ದಂತೆ ಅವರಿಂದ ಮೈಕ್‌‌ ಕಿತ್ತು, ಅವರು ಮುಂದಕ್ಕೆ ಮಾತನಾಡದಂತೆ ತಡೆಯಲಾಗಿತ್ತು. ಇದರ ನಂತರ ಅವರ ಬಂಧನ ಕೂಡಾ ನಡೆದಿತ್ತು.

ಅಲ್ಲದೆ ಈ ವೇದಿಕೆ ಏರುವುದಕ್ಕಿಂತ ಮುಂಚೆ ಅವರು ತಮ್ಮ ಫೇಸ್‌ಬುಕ್‌‌ನಲ್ಲಿ ಎಲ್ಲಾ ದೇಶಗಳಿಗೂ ‘ಜಿಂದಾಬಾದ್’ ಎಂದು ಬರೆದಿರುವ ಪೋಸ್ಟ್‌ ಒಂದನ್ನು ಕೂಡಾ ಹಂಚಿಕೊಂಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೆ?

ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದ ಅಮೂಲ್ಯ ಲಿಯೋನ್‌‌ ಅವರನ್ನೆ ರಾಹುಲ್ ಗಾಂಧಿ ಅವರು ಕೇರಳದಲ್ಲಿ ಇರುವ ‘ಭಾರತ್‌ ಜೋಡೋ’ ಯಾತ್ರೆಯ ವೇಳೆ ಭೇಟಿಯಾಗಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ.

ಫ್ಯಾಕ್ಟ್‌ಚೆಕ್

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಪ್ರಸ್ತುತ ಕೇರಳದ ತ್ರಿಶೂರ್‌ನಲ್ಲಿ ಇದೆ. ಅಮೂಲ್ಯ ಲಿಯೋನ್‌‌ ಅವರು ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದಾರೆ. ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈ ವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಮಿವಾ ಆಂಡ್ರೆಲಿಯೊ ಅವರು ತನ್ನ ಇನ್ಸ್‌ಟಾಗ್ರಾಮ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಚಿತ್ರಗಳನ್ನು ಮೂರು ದಿನಗಳ ಹಿಂದೆಯೆ ಪೋಸ್ಟ್‌ ಮಾಡಿದ್ದು, ‘‘ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ. ನನ್ನ ಸ್ವಂತ ರಾಹುಲ್ ಗಾಂಧಿ’’ ಎಂದು ಬರೆದುಕೊಂಡಿದ್ದಾರೆ.

ಇಷ್ಟೆ ಅಲ್ಲದೆ ಯೂತ್ ಕಾಂಗ್ರೆಸ್‌ ಕಾರ್ಯಕರ್ತ ಮೊಯಿದಿನ್ ಕುರೇಶಿ ಅವರು ಕೂಡಾ ರಾಹುಲ್ ಗಾಂಧಿ ಅವರು ‘ಮಿವಾ ಆಂಡ್ರೆಲಿಯೊ’ ಅವರೊಂದಿಗೆ ನಡೆಯುವ ವಿಡಿಯೊವನ್ನು ಅವರಿಗೆ ಟ್ಯಾಗ್ ಮಾಡಿ ಇನ್ಸ್‌ಟಾಗ್ರಾಮ್‌‌ನಲ್ಲ ಪೋಸ್ಟ್‌ ಮಾಡಿದ್ದಾರೆ.

 

View this post on Instagram

 

A post shared by Moideen Qurayshy (@moidheen.qurayshy)

ಅಲ್ಲದೆ ಅವರ ಚಿತ್ರವನ್ನು ‘ಭಾರತ್ ಜೋಡೋ’ ಅಧೀಕೃತ ಟ್ವಿಟರ್‌ ಹ್ಯಾಂಡಲ್‌ ಕೂಡಾ ಒಂದು ದಿನದ ಹಿಂದೆ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದು

ಒಟ್ಟಿನಲ್ಲಿ ಹೇಳಬಹುದಾದರೆ, ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಹರಡುತ್ತಿರುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಚಿತ್ರ ಮತ್ತು ವಿಡಿಯೊದಲ್ಲಿ ಇರುವ ಯುವತಿಯು ಇನ್ಸ್‌ಟಾಗ್ರಾಮ್‌ನಲ್ಲಿ ‘ಮಿವಾ ಆಂಡ್ರೆಲಿಯೊ’ ಎಂದು ಗುರುತಿಸಿಕೊಂಡಿದ್ದು, ಕೇರಳದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ಯು ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...