Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಯಾತ್ರೆಯಲ್ಲಿ ಯುವತಿಯೊಬ್ಬರೊಂದಿಗೆ ಇರುವ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರೀತಿ ಗಾಂಧಿ ಅವರು ಹಂಚಿಕೊಂಡಿರುವ ವಿಡಿಯೊದ ಅರ್ಧ ಭಾಗದಲ್ಲಿ ಬಾಬ್‌ಕಟ್‌‌ ಹೇರ್‌ಸ್ಟೈಲ್‌ ಮಾಡಿಕೊಂಡಿರುವ ಯುವತಿಯು ರಾಹುಲ್ ಗಾಂಧಿಯ ಜೊತೆಗೆ ನಡೆಯುತ್ತಿರುವ ದೃಶ್ಯವಿದ್ದರೆ, ಮತ್ತೊಂದು ಅರ್ಧದಲ್ಲಿ ಸಿಎಎ ವಿರೋಧಿ ಹೋರಾಟದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯ ದೃಶ್ಯಗಳಿವೆ.

ಸಿಎಎ ವಿರೋಧಿ ಹೋರಾಟದ ಸಮಯ ಸಂಸದ ಅಸಾದುದ್ದೀನ್ ಒವೈಸಿ ಅವರು ಭಾಗವಹಿಸಿದ್ದ ವೇದಿಕೆಯೊಂದರಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗುತ್ತಿದ್ದಂತೆ ಅವರ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿತ್ತು. ಅದರ ನಂತರ ಅವರು ‘ಹಿಂದೂಸ್ತಾನ್ ಝಿಂದಾಬಾದ್’ ಹೇಳಿಕೆ ನೀಡಿ ‘ವ್ಯತ್ಯಾಸ ಗಮನಿಸಿ…’ ಎಂದು ಹೇಳುತ್ತಿದ್ದಂತೆ ಅವರಿಂದ ಮೈಕ್‌‌ ಕಿತ್ತು, ಅವರು ಮುಂದಕ್ಕೆ ಮಾತನಾಡದಂತೆ ತಡೆಯಲಾಗಿತ್ತು. ಇದರ ನಂತರ ಅವರ ಬಂಧನ ಕೂಡಾ ನಡೆದಿತ್ತು.

ಅಲ್ಲದೆ ಈ ವೇದಿಕೆ ಏರುವುದಕ್ಕಿಂತ ಮುಂಚೆ ಅವರು ತಮ್ಮ ಫೇಸ್‌ಬುಕ್‌‌ನಲ್ಲಿ ಎಲ್ಲಾ ದೇಶಗಳಿಗೂ ‘ಜಿಂದಾಬಾದ್’ ಎಂದು ಬರೆದಿರುವ ಪೋಸ್ಟ್‌ ಒಂದನ್ನು ಕೂಡಾ ಹಂಚಿಕೊಂಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೆ?

ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದ ಅಮೂಲ್ಯ ಲಿಯೋನ್‌‌ ಅವರನ್ನೆ ರಾಹುಲ್ ಗಾಂಧಿ ಅವರು ಕೇರಳದಲ್ಲಿ ಇರುವ ‘ಭಾರತ್‌ ಜೋಡೋ’ ಯಾತ್ರೆಯ ವೇಳೆ ಭೇಟಿಯಾಗಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ.

ಫ್ಯಾಕ್ಟ್‌ಚೆಕ್

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಪ್ರಸ್ತುತ ಕೇರಳದ ತ್ರಿಶೂರ್‌ನಲ್ಲಿ ಇದೆ. ಅಮೂಲ್ಯ ಲಿಯೋನ್‌‌ ಅವರು ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದಾರೆ. ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈ ವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಮಿವಾ ಆಂಡ್ರೆಲಿಯೊ ಅವರು ತನ್ನ ಇನ್ಸ್‌ಟಾಗ್ರಾಮ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಚಿತ್ರಗಳನ್ನು ಮೂರು ದಿನಗಳ ಹಿಂದೆಯೆ ಪೋಸ್ಟ್‌ ಮಾಡಿದ್ದು, ‘‘ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ. ನನ್ನ ಸ್ವಂತ ರಾಹುಲ್ ಗಾಂಧಿ’’ ಎಂದು ಬರೆದುಕೊಂಡಿದ್ದಾರೆ.

ಇಷ್ಟೆ ಅಲ್ಲದೆ ಯೂತ್ ಕಾಂಗ್ರೆಸ್‌ ಕಾರ್ಯಕರ್ತ ಮೊಯಿದಿನ್ ಕುರೇಶಿ ಅವರು ಕೂಡಾ ರಾಹುಲ್ ಗಾಂಧಿ ಅವರು ‘ಮಿವಾ ಆಂಡ್ರೆಲಿಯೊ’ ಅವರೊಂದಿಗೆ ನಡೆಯುವ ವಿಡಿಯೊವನ್ನು ಅವರಿಗೆ ಟ್ಯಾಗ್ ಮಾಡಿ ಇನ್ಸ್‌ಟಾಗ್ರಾಮ್‌‌ನಲ್ಲ ಪೋಸ್ಟ್‌ ಮಾಡಿದ್ದಾರೆ.

 

View this post on Instagram

 

A post shared by Moideen Qurayshy (@moidheen.qurayshy)

ಅಲ್ಲದೆ ಅವರ ಚಿತ್ರವನ್ನು ‘ಭಾರತ್ ಜೋಡೋ’ ಅಧೀಕೃತ ಟ್ವಿಟರ್‌ ಹ್ಯಾಂಡಲ್‌ ಕೂಡಾ ಒಂದು ದಿನದ ಹಿಂದೆ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದು

ಒಟ್ಟಿನಲ್ಲಿ ಹೇಳಬಹುದಾದರೆ, ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಹರಡುತ್ತಿರುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಚಿತ್ರ ಮತ್ತು ವಿಡಿಯೊದಲ್ಲಿ ಇರುವ ಯುವತಿಯು ಇನ್ಸ್‌ಟಾಗ್ರಾಮ್‌ನಲ್ಲಿ ‘ಮಿವಾ ಆಂಡ್ರೆಲಿಯೊ’ ಎಂದು ಗುರುತಿಸಿಕೊಂಡಿದ್ದು, ಕೇರಳದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ಯು ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...