Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಯಾತ್ರೆಯಲ್ಲಿ ಯುವತಿಯೊಬ್ಬರೊಂದಿಗೆ ಇರುವ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರೀತಿ ಗಾಂಧಿ ಅವರು ಹಂಚಿಕೊಂಡಿರುವ ವಿಡಿಯೊದ ಅರ್ಧ ಭಾಗದಲ್ಲಿ ಬಾಬ್‌ಕಟ್‌‌ ಹೇರ್‌ಸ್ಟೈಲ್‌ ಮಾಡಿಕೊಂಡಿರುವ ಯುವತಿಯು ರಾಹುಲ್ ಗಾಂಧಿಯ ಜೊತೆಗೆ ನಡೆಯುತ್ತಿರುವ ದೃಶ್ಯವಿದ್ದರೆ, ಮತ್ತೊಂದು ಅರ್ಧದಲ್ಲಿ ಸಿಎಎ ವಿರೋಧಿ ಹೋರಾಟದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯ ದೃಶ್ಯಗಳಿವೆ.

ಸಿಎಎ ವಿರೋಧಿ ಹೋರಾಟದ ಸಮಯ ಸಂಸದ ಅಸಾದುದ್ದೀನ್ ಒವೈಸಿ ಅವರು ಭಾಗವಹಿಸಿದ್ದ ವೇದಿಕೆಯೊಂದರಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗುತ್ತಿದ್ದಂತೆ ಅವರ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿತ್ತು. ಅದರ ನಂತರ ಅವರು ‘ಹಿಂದೂಸ್ತಾನ್ ಝಿಂದಾಬಾದ್’ ಹೇಳಿಕೆ ನೀಡಿ ‘ವ್ಯತ್ಯಾಸ ಗಮನಿಸಿ…’ ಎಂದು ಹೇಳುತ್ತಿದ್ದಂತೆ ಅವರಿಂದ ಮೈಕ್‌‌ ಕಿತ್ತು, ಅವರು ಮುಂದಕ್ಕೆ ಮಾತನಾಡದಂತೆ ತಡೆಯಲಾಗಿತ್ತು. ಇದರ ನಂತರ ಅವರ ಬಂಧನ ಕೂಡಾ ನಡೆದಿತ್ತು.

ಅಲ್ಲದೆ ಈ ವೇದಿಕೆ ಏರುವುದಕ್ಕಿಂತ ಮುಂಚೆ ಅವರು ತಮ್ಮ ಫೇಸ್‌ಬುಕ್‌‌ನಲ್ಲಿ ಎಲ್ಲಾ ದೇಶಗಳಿಗೂ ‘ಜಿಂದಾಬಾದ್’ ಎಂದು ಬರೆದಿರುವ ಪೋಸ್ಟ್‌ ಒಂದನ್ನು ಕೂಡಾ ಹಂಚಿಕೊಂಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೆ?

ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದ ಅಮೂಲ್ಯ ಲಿಯೋನ್‌‌ ಅವರನ್ನೆ ರಾಹುಲ್ ಗಾಂಧಿ ಅವರು ಕೇರಳದಲ್ಲಿ ಇರುವ ‘ಭಾರತ್‌ ಜೋಡೋ’ ಯಾತ್ರೆಯ ವೇಳೆ ಭೇಟಿಯಾಗಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ.

ಫ್ಯಾಕ್ಟ್‌ಚೆಕ್

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಪ್ರಸ್ತುತ ಕೇರಳದ ತ್ರಿಶೂರ್‌ನಲ್ಲಿ ಇದೆ. ಅಮೂಲ್ಯ ಲಿಯೋನ್‌‌ ಅವರು ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದಾರೆ. ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈ ವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಮಿವಾ ಆಂಡ್ರೆಲಿಯೊ ಅವರು ತನ್ನ ಇನ್ಸ್‌ಟಾಗ್ರಾಮ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಚಿತ್ರಗಳನ್ನು ಮೂರು ದಿನಗಳ ಹಿಂದೆಯೆ ಪೋಸ್ಟ್‌ ಮಾಡಿದ್ದು, ‘‘ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ. ನನ್ನ ಸ್ವಂತ ರಾಹುಲ್ ಗಾಂಧಿ’’ ಎಂದು ಬರೆದುಕೊಂಡಿದ್ದಾರೆ.

ಇಷ್ಟೆ ಅಲ್ಲದೆ ಯೂತ್ ಕಾಂಗ್ರೆಸ್‌ ಕಾರ್ಯಕರ್ತ ಮೊಯಿದಿನ್ ಕುರೇಶಿ ಅವರು ಕೂಡಾ ರಾಹುಲ್ ಗಾಂಧಿ ಅವರು ‘ಮಿವಾ ಆಂಡ್ರೆಲಿಯೊ’ ಅವರೊಂದಿಗೆ ನಡೆಯುವ ವಿಡಿಯೊವನ್ನು ಅವರಿಗೆ ಟ್ಯಾಗ್ ಮಾಡಿ ಇನ್ಸ್‌ಟಾಗ್ರಾಮ್‌‌ನಲ್ಲ ಪೋಸ್ಟ್‌ ಮಾಡಿದ್ದಾರೆ.

 

View this post on Instagram

 

A post shared by Moideen Qurayshy (@moidheen.qurayshy)

ಅಲ್ಲದೆ ಅವರ ಚಿತ್ರವನ್ನು ‘ಭಾರತ್ ಜೋಡೋ’ ಅಧೀಕೃತ ಟ್ವಿಟರ್‌ ಹ್ಯಾಂಡಲ್‌ ಕೂಡಾ ಒಂದು ದಿನದ ಹಿಂದೆ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದು

ಒಟ್ಟಿನಲ್ಲಿ ಹೇಳಬಹುದಾದರೆ, ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಹರಡುತ್ತಿರುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಚಿತ್ರ ಮತ್ತು ವಿಡಿಯೊದಲ್ಲಿ ಇರುವ ಯುವತಿಯು ಇನ್ಸ್‌ಟಾಗ್ರಾಮ್‌ನಲ್ಲಿ ‘ಮಿವಾ ಆಂಡ್ರೆಲಿಯೊ’ ಎಂದು ಗುರುತಿಸಿಕೊಂಡಿದ್ದು, ಕೇರಳದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ಯು ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...