Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...