Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...