Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...