Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....