Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...