Homeಮುಖಪುಟಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಈ ಪ್ರಯತ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾಂಗ್ರೆಸ್ ಮುಂದಾಗಿದೆ

- Advertisement -
- Advertisement -

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಸಾರ್ವಜನಿಕ ರ್‍ಯಾಲಿಯಲ್ಲಿ ಮಾಡಿದ ಭಾಷಣದ ತುಣುಕ್ಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸ್ಮೃತಿ ಇರಾನಿ ಥೋರಾ ಗುಂಗೆ ಬೆಹ್ರಿ ಹೋ ಗಯಾ ಹೈ, ಮೈನ್ ಉಂಕೋ ಕೆಹನಾ ಚಾಹ್ತಾ ಹೂ – ಉಸಿ ದಯಾನ್ ಕೋ, ಮೆಹೆಂಗಾಯಿ ದಯಾನ್ ಕೋ ಡಾರ್ಲಿಂಗ್ ಬನಾಕೆ ಬೆಡ್‌ರೂಮ್ ಮೇ ಬೈತಾನೆ ಕಾ ಕಾಮ್ ಕಿಯಾ ಹೈ” (ಸ್ಮೃತಿ ಇರಾನಿ ಮೂಕ ಮತ್ತು ಕಿವುಡರಾಗಿದ್ದಾರೆ. ಈಗ ಅದೇ ಮಾಟಗಾತಿ ಹಣದುಬ್ಬರವೆಂಬ ದೆವ್ವವನ್ನು ‘ಡಾರ್ಲಿಂಗ್’ ಆಗಿ ಪರಿವರ್ತಿಸಿ ಮಲಗುವ ಕೋಣೆಯಲ್ಲಿ ಇರಿಸಿದ್ದಾರೆ) ಎಂದು ಶ್ರೀನಿವಾಸ್ ಹೇಳಿರುವುದಾಗಿ ಈ ವಿಡಿಯೊ ಕ್ಲಿಪ್‌ ಮೂಲಕ ಪ್ರತಿಪಾದಿಸಲಾಗುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ. “ಈ ಅಸಭ್ಯ, ಸೆಕ್ಸಿಸ್ಟ್ ವ್ಯಕ್ತಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ” ಎಂದು ಬರೆದುಕೊಂಡಿದ್ದಾರೆ. ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆದ್ದಿದ್ದಕ್ಕಾಗಿ ಸ್ಮೃತಿ ಇರಾನಿ ಅವರನ್ನು “ಡಾರ್ಲಿಂಗ್ ಬನಾ ಕರ್ ಬೆಡರೂಮ್ ಮೆನ್” ಎಂದು ಬಿ.ವಿ.ಶ್ರೀನಿವಾಸ್ ಹೇಳಿರುವುದಾಗಿ ಆರೋಪಿಸಿದ್ದಾರೆ.

ಬಿಜೆಪಿ ಕರ್ನಾಟಕ ಕೂಡ ಇದೇ ವಿಡಿಯೊವನ್ನು ಟ್ವೀಟ್ ಮಾಡಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿಯವರಿಗೆ ಸ್ಮೃತಿ ಇರಾನಿ ಅವರು ಉಂಟುಮಾಡಿದ ಸೋಲನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ ಪಕ್ಷವು ಸ್ತ್ರೀದ್ವೇಷಿಯಾಗಿದೆ, ವಿಕೃತತೆಯ ಕೂಪವಾಗಿ ಮಾರ್ಪಟ್ಟಿದೆ ಎಂದು ದೂರಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಟ್ವೀಟ್ ಮಾಡಿದ್ದಾರೆ. “ಶ್ರೀನಿವಾಸ್ ಬಿ.ವಿ. ಅವರ ಟೀಕೆಗಳು ಶೋಚನೀಯವಾಗಿವೆ, ಕಾಮಪ್ರಚೋದಕವಾಗಿವೆ. ಪ್ರಿಯಾಂಕಾ ಗಾಂಧಿಯವರು ಈ ಭಾಷಣವನ್ನು ಖಂಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಹೀಗೆ ಅನೇಕರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಸತ್ಯಾಂಶವೇನು?

ಈ ವಿಡಿಯೋ ಬಿಜೆಪಿ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ, ಶ್ರೀನಿವಾಸ್ ಬಿ.ವಿ. ಅವರು ತಮ್ಮ ಭಾಷಣದ ದೀರ್ಘ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ.

“ಸಂಘಿಗಳು ಸುಧಾರಿಸುವುದಿಲ್ಲ. ಪೂರ್ಣ ಹೇಳಿಕೆಯನ್ನು ಅಪೂರ್ಣವಾಗಿ ತೋರಿಸಿದ್ದಾರೆ. 2014 ರ ಮೊದಲು ನೀವು ನೀಡಿದ ಹೇಳಿಕೆಯನ್ನು ನಾನು ಉಲ್ಲೇಖಿಸಿದ್ದೇನೆ. ₹ 400 ಎಲ್‌ಪಿಜಿ ಸಿಲಿಂಡರ್‌ನ ಹಣದುಬ್ಬರವು ನಿಮಗೆ ‘ಮಾಟಗಾತಿ’ಯಂತೆ ಕಾಣಿಸುತ್ತಿತ್ತು. ಇಂದು ಎಲ್‌ಪಿಜಿ ಬೆಲೆ ₹ 1100 ರೂ. ಆಗಿದೆ. ಅಂದು ದಯಾನ್‌ (ಮಾಟಗಾತಿ/ದೆವ್ವ) ಆಗಿದ್ದ ಹಣದುಬ್ಬರ ‘ಡಾರ್ಲಿಂಗ್’ ಆಗಿದೆ” ಎಂದಿದ್ದಾರೆ.

ಶ್ರೀನಿವಾಸ್ ಅವರು ಸ್ಮೃತಿ ಇರಾನಿಯವರನ್ನು ಮಾಟಗಾತಿ (ದಯಾನ್) ಎಂದು ಉಲ್ಲೇಖಿಸಿಲ್ಲ. ಕೆಲವರು ಪ್ರತಿಪಾದಿಸುತ್ತಿರುವುದಕ್ಕೆ ವಿರುದ್ಧವಾಗಿ ಇಲ್ಲಿನ ವಿಡಿಯೊವಿದೆ. ಬಿಜೆಪಿ ರಾಜಕಾರಣಿಗಳು ತಮ್ಮ ಹಿಂಬಾಲಕರಿಗೆ ತಪ್ಪಾಗಿ ವಿಡಿಯೊವನ್ನು ಒದಗಿಸಿದ್ದಾರೆ. ‘ಮಹಾಂಗೈ ದಯಾನ್’ ಎಂಬ ಸಾಲು ಪೀಪ್ಲಿ ಲೈವ್ (2010) ಚಿತ್ರದ ನಂತರ ಪ್ರಸಿದ್ಧವಾಗಿದೆ. ಇದೇ ಸಾಲಿನ ಹಾಡು ಆ ಸಿನಿಮಾದಲ್ಲಿದೆ. ಬೆಲೆ ಏರಿಕೆಯಿಂದಾಗುವ ಪ್ರಮುಖ ಸಾಮಾಜಿಕ-ಆರ್ಥಿಕ ಸಮಸ್ಯೆಯ ಕಡೆಗೆ ಈ ಹಾಡು ಗಮನ ಸೆಳೆಯುತ್ತದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ವಾಕ್‌ಚಾತುರ್ಯದ ಭಾಗವಾಗಿ ಈ ಹಾಡನ್ನು ಹೆಚ್ಚಾಗಿ ಬಳಸಲಾಗುತ್ತದೆ.  2012ರ ಹಿಂದೆ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ‘ಮಹಾಂಗೈ ದಯಾನ್‌’ ಹಾಡನ್ನು ಗುನುಗಿದ್ದರು.

ಶ್ರೀನಿವಾಸ್ ಬಿ.ವಿ ಅವರೂ ಇದೇ ರೀತಿಯಲ್ಲಿ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. 2014ಕ್ಕಿಂತ ಮೊದಲು ‘ಮಹಾಂಗೈ ದಯಾನ್’ ಹಾಡನ್ನು ಬಳಸಿದ ಅದೇ ಬಿಜೆಪಿ, ಈಗ ಹಣದುಬ್ಬರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಹಣದುಬ್ಬರವನ್ನು ತಮ್ಮ ಮಲಗುವ ಕೋಣೆಗೆ ಬಿಜೆಪಿ ತಂದಿದೆ. ಅದನ್ನು ತಮ್ಮ ಪ್ರಿಯತಮೆಯನ್ನಾಗಿ ಮಾಡಿಕೊಂಡಂತಿದೆ” ಎಂದಿದ್ದಾರೆ. ಸ್ಮೃತಿ ಇರಾನಿ ಅವರು ಬಡವರ ಬೇಡಿಕೆಗಳಿಗೆ ಕಿವುಡರಾಗಿದ್ದಾರೆ ಎಂದು ಹೇಳುವ ಮೂಲಕ ಬಿ.ವಿ.ಶ್ರೀನಿವಾಸ್ ಅವರು ಟಾರ್ಗೆಟ್ ಆಗಿರುವುದು ನಿಜವಾದರೂ, ಅವರು ಮೇಲಿನ ಹೇಳಿಕೆಯನ್ನು ಕೇವಲ ರೂಪಕವಾಗಿ ಬಳಸಿರುವುದು ಸ್ಪಷ್ಟವಾಗುತ್ತದೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಬಿ.ವಿ.ಶ್ರೀನಿವಾಸ್ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿ ಮಂತ್ರಿಯಾಗಿದ್ದ ಅವಧಿಯಲ್ಲಿ ಇದೇ ಮಾತನ್ನು ಹೇಳಿದ್ದರು. ಗ್ಯಾಸ್ ಸಿಲಿಂಡರ್ ಬೆಲೆ 400 ರೂ ಇದ್ದಾಗ ‘ಮೆಹಂಗಾಯಿ ದಾಯನ್’ ಎಂದು ಹೇಳುತ್ತಿದ್ದ ಅವರು, ಈಗ ಬೆಲೆ 1100 ರೂ.ಗೆ ತಲುಪಿದಾಗ ಮಾತನಾಡುತ್ತಿಲ್ಲ. ಈ ‘ದಾಯನ್‌’ (ದೆವ್ವ) ಈಗ ಪ್ರಿಯತಮೆಯಾಗಿದೆ. ಇದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

“ಅವರಿಗೆ ಹಳೆಯ ದಿನಗಳನ್ನು ನೆನಪಿಸಿದೆ. ಅವರಿಗೆ ಕಿವಿ ಕೇಳಿಸುವುದಿಲ್ಲ. ಬೆಲೆ ಏರಿಕೆಯೆಂದು ರಸ್ತೆಯಲ್ಲಿ ಕುಣಿಯುತ್ತಿದ್ದವರು ಈಗ ಎಲ್ಲಿ ಹೋಗಿದ್ದಾರೆ? ಸ್ಮೃತಿ ಇರಾನಿಯವರು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾಗಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರಗಳಾದಾಗ ಇವರು ಮಾತನಾಡುವುದಿಲ್ಲ. ಹತ್ರಾಸ್‌ ಪ್ರಕರಣ ಇರಬಹುದು, ಉನ್ನಾವೋ ಪ್ರಕರಣ ಇರಬಹುದು- ಇದ್ಯಾವುಕ್ಕೂ ಪ್ರತಿಕ್ರಿಯಿಸಲಿಲ್ಲ. ಕಾನ್ಫುರದಲ್ಲಿ ತಾಯಿ ಮತ್ತು ಮಗಳನ್ನು ಬೆಂಕಿಯಲ್ಲಿ ಹಾಕಿ ಸುಡಲಾಯಿತು. ನಿಶಿಕಾಂತ್ ದುಬೆ ಎಂಬಾತ ಬಿಜೆಪಿಯ ಸಂಸದ. ಮತ್ತೊಬ್ಬ ಮಹಿಳಾ ಜನಪ್ರತಿನಿಧಿಗೆ ಹೀನಾಯವಾಗಿ ನಿಂದಿಸಿ, ಇವರೆಲ್ಲ ರೆಡ್‌ಲೈಟ್‌ ಪ್ರದೇಶದವರು ಎಂದನು. ಅದ್ಯಾವುದಕ್ಕೂ ಸ್ಮೃತಿಯವರು ಪ್ರತಿಕ್ರಿಯಿಸಲಿಲ್ಲ. ಮಹಿಳಾ ಇಲಾಖೆಗೆ ಅವರು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.

ಕಾನೂನು ಕ್ರಮಕ್ಕೆ ಚಿಂತನೆ

“ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಶೋಚನೀಯ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಅಧಿಕಾರದಲ್ಲಿರುವ ಕೆಲವರು ಆರೋಪಿಸಿರುವ ಇಂತಹ ಯಾವುದೇ ಆಲೋಚನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈ ಸಂಬಂಧ ಕಾನೂನು ಕ್ರಮ ಜರುಗಿಸುತ್ತೇವೆ” ಎಂದು ಯುವ ಕಾಂಗ್ರೆಸ್‌ ಕಾನೂನು ಕೋಶದ ಅಧ್ಯಕ್ಷ ರೂಪೇಶ್ ಭದೌರಿಯಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...