Homeಮುಖಪುಟಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಈ ಪ್ರಯತ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾಂಗ್ರೆಸ್ ಮುಂದಾಗಿದೆ

- Advertisement -
- Advertisement -

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಸಾರ್ವಜನಿಕ ರ್‍ಯಾಲಿಯಲ್ಲಿ ಮಾಡಿದ ಭಾಷಣದ ತುಣುಕ್ಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸ್ಮೃತಿ ಇರಾನಿ ಥೋರಾ ಗುಂಗೆ ಬೆಹ್ರಿ ಹೋ ಗಯಾ ಹೈ, ಮೈನ್ ಉಂಕೋ ಕೆಹನಾ ಚಾಹ್ತಾ ಹೂ – ಉಸಿ ದಯಾನ್ ಕೋ, ಮೆಹೆಂಗಾಯಿ ದಯಾನ್ ಕೋ ಡಾರ್ಲಿಂಗ್ ಬನಾಕೆ ಬೆಡ್‌ರೂಮ್ ಮೇ ಬೈತಾನೆ ಕಾ ಕಾಮ್ ಕಿಯಾ ಹೈ” (ಸ್ಮೃತಿ ಇರಾನಿ ಮೂಕ ಮತ್ತು ಕಿವುಡರಾಗಿದ್ದಾರೆ. ಈಗ ಅದೇ ಮಾಟಗಾತಿ ಹಣದುಬ್ಬರವೆಂಬ ದೆವ್ವವನ್ನು ‘ಡಾರ್ಲಿಂಗ್’ ಆಗಿ ಪರಿವರ್ತಿಸಿ ಮಲಗುವ ಕೋಣೆಯಲ್ಲಿ ಇರಿಸಿದ್ದಾರೆ) ಎಂದು ಶ್ರೀನಿವಾಸ್ ಹೇಳಿರುವುದಾಗಿ ಈ ವಿಡಿಯೊ ಕ್ಲಿಪ್‌ ಮೂಲಕ ಪ್ರತಿಪಾದಿಸಲಾಗುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ. “ಈ ಅಸಭ್ಯ, ಸೆಕ್ಸಿಸ್ಟ್ ವ್ಯಕ್ತಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ” ಎಂದು ಬರೆದುಕೊಂಡಿದ್ದಾರೆ. ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆದ್ದಿದ್ದಕ್ಕಾಗಿ ಸ್ಮೃತಿ ಇರಾನಿ ಅವರನ್ನು “ಡಾರ್ಲಿಂಗ್ ಬನಾ ಕರ್ ಬೆಡರೂಮ್ ಮೆನ್” ಎಂದು ಬಿ.ವಿ.ಶ್ರೀನಿವಾಸ್ ಹೇಳಿರುವುದಾಗಿ ಆರೋಪಿಸಿದ್ದಾರೆ.

ಬಿಜೆಪಿ ಕರ್ನಾಟಕ ಕೂಡ ಇದೇ ವಿಡಿಯೊವನ್ನು ಟ್ವೀಟ್ ಮಾಡಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿಯವರಿಗೆ ಸ್ಮೃತಿ ಇರಾನಿ ಅವರು ಉಂಟುಮಾಡಿದ ಸೋಲನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ ಪಕ್ಷವು ಸ್ತ್ರೀದ್ವೇಷಿಯಾಗಿದೆ, ವಿಕೃತತೆಯ ಕೂಪವಾಗಿ ಮಾರ್ಪಟ್ಟಿದೆ ಎಂದು ದೂರಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಟ್ವೀಟ್ ಮಾಡಿದ್ದಾರೆ. “ಶ್ರೀನಿವಾಸ್ ಬಿ.ವಿ. ಅವರ ಟೀಕೆಗಳು ಶೋಚನೀಯವಾಗಿವೆ, ಕಾಮಪ್ರಚೋದಕವಾಗಿವೆ. ಪ್ರಿಯಾಂಕಾ ಗಾಂಧಿಯವರು ಈ ಭಾಷಣವನ್ನು ಖಂಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಹೀಗೆ ಅನೇಕರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಸತ್ಯಾಂಶವೇನು?

ಈ ವಿಡಿಯೋ ಬಿಜೆಪಿ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ, ಶ್ರೀನಿವಾಸ್ ಬಿ.ವಿ. ಅವರು ತಮ್ಮ ಭಾಷಣದ ದೀರ್ಘ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ.

“ಸಂಘಿಗಳು ಸುಧಾರಿಸುವುದಿಲ್ಲ. ಪೂರ್ಣ ಹೇಳಿಕೆಯನ್ನು ಅಪೂರ್ಣವಾಗಿ ತೋರಿಸಿದ್ದಾರೆ. 2014 ರ ಮೊದಲು ನೀವು ನೀಡಿದ ಹೇಳಿಕೆಯನ್ನು ನಾನು ಉಲ್ಲೇಖಿಸಿದ್ದೇನೆ. ₹ 400 ಎಲ್‌ಪಿಜಿ ಸಿಲಿಂಡರ್‌ನ ಹಣದುಬ್ಬರವು ನಿಮಗೆ ‘ಮಾಟಗಾತಿ’ಯಂತೆ ಕಾಣಿಸುತ್ತಿತ್ತು. ಇಂದು ಎಲ್‌ಪಿಜಿ ಬೆಲೆ ₹ 1100 ರೂ. ಆಗಿದೆ. ಅಂದು ದಯಾನ್‌ (ಮಾಟಗಾತಿ/ದೆವ್ವ) ಆಗಿದ್ದ ಹಣದುಬ್ಬರ ‘ಡಾರ್ಲಿಂಗ್’ ಆಗಿದೆ” ಎಂದಿದ್ದಾರೆ.

ಶ್ರೀನಿವಾಸ್ ಅವರು ಸ್ಮೃತಿ ಇರಾನಿಯವರನ್ನು ಮಾಟಗಾತಿ (ದಯಾನ್) ಎಂದು ಉಲ್ಲೇಖಿಸಿಲ್ಲ. ಕೆಲವರು ಪ್ರತಿಪಾದಿಸುತ್ತಿರುವುದಕ್ಕೆ ವಿರುದ್ಧವಾಗಿ ಇಲ್ಲಿನ ವಿಡಿಯೊವಿದೆ. ಬಿಜೆಪಿ ರಾಜಕಾರಣಿಗಳು ತಮ್ಮ ಹಿಂಬಾಲಕರಿಗೆ ತಪ್ಪಾಗಿ ವಿಡಿಯೊವನ್ನು ಒದಗಿಸಿದ್ದಾರೆ. ‘ಮಹಾಂಗೈ ದಯಾನ್’ ಎಂಬ ಸಾಲು ಪೀಪ್ಲಿ ಲೈವ್ (2010) ಚಿತ್ರದ ನಂತರ ಪ್ರಸಿದ್ಧವಾಗಿದೆ. ಇದೇ ಸಾಲಿನ ಹಾಡು ಆ ಸಿನಿಮಾದಲ್ಲಿದೆ. ಬೆಲೆ ಏರಿಕೆಯಿಂದಾಗುವ ಪ್ರಮುಖ ಸಾಮಾಜಿಕ-ಆರ್ಥಿಕ ಸಮಸ್ಯೆಯ ಕಡೆಗೆ ಈ ಹಾಡು ಗಮನ ಸೆಳೆಯುತ್ತದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ವಾಕ್‌ಚಾತುರ್ಯದ ಭಾಗವಾಗಿ ಈ ಹಾಡನ್ನು ಹೆಚ್ಚಾಗಿ ಬಳಸಲಾಗುತ್ತದೆ.  2012ರ ಹಿಂದೆ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ‘ಮಹಾಂಗೈ ದಯಾನ್‌’ ಹಾಡನ್ನು ಗುನುಗಿದ್ದರು.

ಶ್ರೀನಿವಾಸ್ ಬಿ.ವಿ ಅವರೂ ಇದೇ ರೀತಿಯಲ್ಲಿ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. 2014ಕ್ಕಿಂತ ಮೊದಲು ‘ಮಹಾಂಗೈ ದಯಾನ್’ ಹಾಡನ್ನು ಬಳಸಿದ ಅದೇ ಬಿಜೆಪಿ, ಈಗ ಹಣದುಬ್ಬರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಹಣದುಬ್ಬರವನ್ನು ತಮ್ಮ ಮಲಗುವ ಕೋಣೆಗೆ ಬಿಜೆಪಿ ತಂದಿದೆ. ಅದನ್ನು ತಮ್ಮ ಪ್ರಿಯತಮೆಯನ್ನಾಗಿ ಮಾಡಿಕೊಂಡಂತಿದೆ” ಎಂದಿದ್ದಾರೆ. ಸ್ಮೃತಿ ಇರಾನಿ ಅವರು ಬಡವರ ಬೇಡಿಕೆಗಳಿಗೆ ಕಿವುಡರಾಗಿದ್ದಾರೆ ಎಂದು ಹೇಳುವ ಮೂಲಕ ಬಿ.ವಿ.ಶ್ರೀನಿವಾಸ್ ಅವರು ಟಾರ್ಗೆಟ್ ಆಗಿರುವುದು ನಿಜವಾದರೂ, ಅವರು ಮೇಲಿನ ಹೇಳಿಕೆಯನ್ನು ಕೇವಲ ರೂಪಕವಾಗಿ ಬಳಸಿರುವುದು ಸ್ಪಷ್ಟವಾಗುತ್ತದೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಬಿ.ವಿ.ಶ್ರೀನಿವಾಸ್ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿ ಮಂತ್ರಿಯಾಗಿದ್ದ ಅವಧಿಯಲ್ಲಿ ಇದೇ ಮಾತನ್ನು ಹೇಳಿದ್ದರು. ಗ್ಯಾಸ್ ಸಿಲಿಂಡರ್ ಬೆಲೆ 400 ರೂ ಇದ್ದಾಗ ‘ಮೆಹಂಗಾಯಿ ದಾಯನ್’ ಎಂದು ಹೇಳುತ್ತಿದ್ದ ಅವರು, ಈಗ ಬೆಲೆ 1100 ರೂ.ಗೆ ತಲುಪಿದಾಗ ಮಾತನಾಡುತ್ತಿಲ್ಲ. ಈ ‘ದಾಯನ್‌’ (ದೆವ್ವ) ಈಗ ಪ್ರಿಯತಮೆಯಾಗಿದೆ. ಇದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

“ಅವರಿಗೆ ಹಳೆಯ ದಿನಗಳನ್ನು ನೆನಪಿಸಿದೆ. ಅವರಿಗೆ ಕಿವಿ ಕೇಳಿಸುವುದಿಲ್ಲ. ಬೆಲೆ ಏರಿಕೆಯೆಂದು ರಸ್ತೆಯಲ್ಲಿ ಕುಣಿಯುತ್ತಿದ್ದವರು ಈಗ ಎಲ್ಲಿ ಹೋಗಿದ್ದಾರೆ? ಸ್ಮೃತಿ ಇರಾನಿಯವರು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾಗಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರಗಳಾದಾಗ ಇವರು ಮಾತನಾಡುವುದಿಲ್ಲ. ಹತ್ರಾಸ್‌ ಪ್ರಕರಣ ಇರಬಹುದು, ಉನ್ನಾವೋ ಪ್ರಕರಣ ಇರಬಹುದು- ಇದ್ಯಾವುಕ್ಕೂ ಪ್ರತಿಕ್ರಿಯಿಸಲಿಲ್ಲ. ಕಾನ್ಫುರದಲ್ಲಿ ತಾಯಿ ಮತ್ತು ಮಗಳನ್ನು ಬೆಂಕಿಯಲ್ಲಿ ಹಾಕಿ ಸುಡಲಾಯಿತು. ನಿಶಿಕಾಂತ್ ದುಬೆ ಎಂಬಾತ ಬಿಜೆಪಿಯ ಸಂಸದ. ಮತ್ತೊಬ್ಬ ಮಹಿಳಾ ಜನಪ್ರತಿನಿಧಿಗೆ ಹೀನಾಯವಾಗಿ ನಿಂದಿಸಿ, ಇವರೆಲ್ಲ ರೆಡ್‌ಲೈಟ್‌ ಪ್ರದೇಶದವರು ಎಂದನು. ಅದ್ಯಾವುದಕ್ಕೂ ಸ್ಮೃತಿಯವರು ಪ್ರತಿಕ್ರಿಯಿಸಲಿಲ್ಲ. ಮಹಿಳಾ ಇಲಾಖೆಗೆ ಅವರು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.

ಕಾನೂನು ಕ್ರಮಕ್ಕೆ ಚಿಂತನೆ

“ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಶೋಚನೀಯ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಅಧಿಕಾರದಲ್ಲಿರುವ ಕೆಲವರು ಆರೋಪಿಸಿರುವ ಇಂತಹ ಯಾವುದೇ ಆಲೋಚನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈ ಸಂಬಂಧ ಕಾನೂನು ಕ್ರಮ ಜರುಗಿಸುತ್ತೇವೆ” ಎಂದು ಯುವ ಕಾಂಗ್ರೆಸ್‌ ಕಾನೂನು ಕೋಶದ ಅಧ್ಯಕ್ಷ ರೂಪೇಶ್ ಭದೌರಿಯಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...