Homeಮುಖಪುಟಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಈ ಪ್ರಯತ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾಂಗ್ರೆಸ್ ಮುಂದಾಗಿದೆ

- Advertisement -
- Advertisement -

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಸಾರ್ವಜನಿಕ ರ್‍ಯಾಲಿಯಲ್ಲಿ ಮಾಡಿದ ಭಾಷಣದ ತುಣುಕ್ಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸ್ಮೃತಿ ಇರಾನಿ ಥೋರಾ ಗುಂಗೆ ಬೆಹ್ರಿ ಹೋ ಗಯಾ ಹೈ, ಮೈನ್ ಉಂಕೋ ಕೆಹನಾ ಚಾಹ್ತಾ ಹೂ – ಉಸಿ ದಯಾನ್ ಕೋ, ಮೆಹೆಂಗಾಯಿ ದಯಾನ್ ಕೋ ಡಾರ್ಲಿಂಗ್ ಬನಾಕೆ ಬೆಡ್‌ರೂಮ್ ಮೇ ಬೈತಾನೆ ಕಾ ಕಾಮ್ ಕಿಯಾ ಹೈ” (ಸ್ಮೃತಿ ಇರಾನಿ ಮೂಕ ಮತ್ತು ಕಿವುಡರಾಗಿದ್ದಾರೆ. ಈಗ ಅದೇ ಮಾಟಗಾತಿ ಹಣದುಬ್ಬರವೆಂಬ ದೆವ್ವವನ್ನು ‘ಡಾರ್ಲಿಂಗ್’ ಆಗಿ ಪರಿವರ್ತಿಸಿ ಮಲಗುವ ಕೋಣೆಯಲ್ಲಿ ಇರಿಸಿದ್ದಾರೆ) ಎಂದು ಶ್ರೀನಿವಾಸ್ ಹೇಳಿರುವುದಾಗಿ ಈ ವಿಡಿಯೊ ಕ್ಲಿಪ್‌ ಮೂಲಕ ಪ್ರತಿಪಾದಿಸಲಾಗುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ. “ಈ ಅಸಭ್ಯ, ಸೆಕ್ಸಿಸ್ಟ್ ವ್ಯಕ್ತಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ” ಎಂದು ಬರೆದುಕೊಂಡಿದ್ದಾರೆ. ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆದ್ದಿದ್ದಕ್ಕಾಗಿ ಸ್ಮೃತಿ ಇರಾನಿ ಅವರನ್ನು “ಡಾರ್ಲಿಂಗ್ ಬನಾ ಕರ್ ಬೆಡರೂಮ್ ಮೆನ್” ಎಂದು ಬಿ.ವಿ.ಶ್ರೀನಿವಾಸ್ ಹೇಳಿರುವುದಾಗಿ ಆರೋಪಿಸಿದ್ದಾರೆ.

ಬಿಜೆಪಿ ಕರ್ನಾಟಕ ಕೂಡ ಇದೇ ವಿಡಿಯೊವನ್ನು ಟ್ವೀಟ್ ಮಾಡಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿಯವರಿಗೆ ಸ್ಮೃತಿ ಇರಾನಿ ಅವರು ಉಂಟುಮಾಡಿದ ಸೋಲನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ ಪಕ್ಷವು ಸ್ತ್ರೀದ್ವೇಷಿಯಾಗಿದೆ, ವಿಕೃತತೆಯ ಕೂಪವಾಗಿ ಮಾರ್ಪಟ್ಟಿದೆ ಎಂದು ದೂರಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಟ್ವೀಟ್ ಮಾಡಿದ್ದಾರೆ. “ಶ್ರೀನಿವಾಸ್ ಬಿ.ವಿ. ಅವರ ಟೀಕೆಗಳು ಶೋಚನೀಯವಾಗಿವೆ, ಕಾಮಪ್ರಚೋದಕವಾಗಿವೆ. ಪ್ರಿಯಾಂಕಾ ಗಾಂಧಿಯವರು ಈ ಭಾಷಣವನ್ನು ಖಂಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಹೀಗೆ ಅನೇಕರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಸತ್ಯಾಂಶವೇನು?

ಈ ವಿಡಿಯೋ ಬಿಜೆಪಿ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ, ಶ್ರೀನಿವಾಸ್ ಬಿ.ವಿ. ಅವರು ತಮ್ಮ ಭಾಷಣದ ದೀರ್ಘ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ.

“ಸಂಘಿಗಳು ಸುಧಾರಿಸುವುದಿಲ್ಲ. ಪೂರ್ಣ ಹೇಳಿಕೆಯನ್ನು ಅಪೂರ್ಣವಾಗಿ ತೋರಿಸಿದ್ದಾರೆ. 2014 ರ ಮೊದಲು ನೀವು ನೀಡಿದ ಹೇಳಿಕೆಯನ್ನು ನಾನು ಉಲ್ಲೇಖಿಸಿದ್ದೇನೆ. ₹ 400 ಎಲ್‌ಪಿಜಿ ಸಿಲಿಂಡರ್‌ನ ಹಣದುಬ್ಬರವು ನಿಮಗೆ ‘ಮಾಟಗಾತಿ’ಯಂತೆ ಕಾಣಿಸುತ್ತಿತ್ತು. ಇಂದು ಎಲ್‌ಪಿಜಿ ಬೆಲೆ ₹ 1100 ರೂ. ಆಗಿದೆ. ಅಂದು ದಯಾನ್‌ (ಮಾಟಗಾತಿ/ದೆವ್ವ) ಆಗಿದ್ದ ಹಣದುಬ್ಬರ ‘ಡಾರ್ಲಿಂಗ್’ ಆಗಿದೆ” ಎಂದಿದ್ದಾರೆ.

ಶ್ರೀನಿವಾಸ್ ಅವರು ಸ್ಮೃತಿ ಇರಾನಿಯವರನ್ನು ಮಾಟಗಾತಿ (ದಯಾನ್) ಎಂದು ಉಲ್ಲೇಖಿಸಿಲ್ಲ. ಕೆಲವರು ಪ್ರತಿಪಾದಿಸುತ್ತಿರುವುದಕ್ಕೆ ವಿರುದ್ಧವಾಗಿ ಇಲ್ಲಿನ ವಿಡಿಯೊವಿದೆ. ಬಿಜೆಪಿ ರಾಜಕಾರಣಿಗಳು ತಮ್ಮ ಹಿಂಬಾಲಕರಿಗೆ ತಪ್ಪಾಗಿ ವಿಡಿಯೊವನ್ನು ಒದಗಿಸಿದ್ದಾರೆ. ‘ಮಹಾಂಗೈ ದಯಾನ್’ ಎಂಬ ಸಾಲು ಪೀಪ್ಲಿ ಲೈವ್ (2010) ಚಿತ್ರದ ನಂತರ ಪ್ರಸಿದ್ಧವಾಗಿದೆ. ಇದೇ ಸಾಲಿನ ಹಾಡು ಆ ಸಿನಿಮಾದಲ್ಲಿದೆ. ಬೆಲೆ ಏರಿಕೆಯಿಂದಾಗುವ ಪ್ರಮುಖ ಸಾಮಾಜಿಕ-ಆರ್ಥಿಕ ಸಮಸ್ಯೆಯ ಕಡೆಗೆ ಈ ಹಾಡು ಗಮನ ಸೆಳೆಯುತ್ತದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ವಾಕ್‌ಚಾತುರ್ಯದ ಭಾಗವಾಗಿ ಈ ಹಾಡನ್ನು ಹೆಚ್ಚಾಗಿ ಬಳಸಲಾಗುತ್ತದೆ.  2012ರ ಹಿಂದೆ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ‘ಮಹಾಂಗೈ ದಯಾನ್‌’ ಹಾಡನ್ನು ಗುನುಗಿದ್ದರು.

ಶ್ರೀನಿವಾಸ್ ಬಿ.ವಿ ಅವರೂ ಇದೇ ರೀತಿಯಲ್ಲಿ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. 2014ಕ್ಕಿಂತ ಮೊದಲು ‘ಮಹಾಂಗೈ ದಯಾನ್’ ಹಾಡನ್ನು ಬಳಸಿದ ಅದೇ ಬಿಜೆಪಿ, ಈಗ ಹಣದುಬ್ಬರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಹಣದುಬ್ಬರವನ್ನು ತಮ್ಮ ಮಲಗುವ ಕೋಣೆಗೆ ಬಿಜೆಪಿ ತಂದಿದೆ. ಅದನ್ನು ತಮ್ಮ ಪ್ರಿಯತಮೆಯನ್ನಾಗಿ ಮಾಡಿಕೊಂಡಂತಿದೆ” ಎಂದಿದ್ದಾರೆ. ಸ್ಮೃತಿ ಇರಾನಿ ಅವರು ಬಡವರ ಬೇಡಿಕೆಗಳಿಗೆ ಕಿವುಡರಾಗಿದ್ದಾರೆ ಎಂದು ಹೇಳುವ ಮೂಲಕ ಬಿ.ವಿ.ಶ್ರೀನಿವಾಸ್ ಅವರು ಟಾರ್ಗೆಟ್ ಆಗಿರುವುದು ನಿಜವಾದರೂ, ಅವರು ಮೇಲಿನ ಹೇಳಿಕೆಯನ್ನು ಕೇವಲ ರೂಪಕವಾಗಿ ಬಳಸಿರುವುದು ಸ್ಪಷ್ಟವಾಗುತ್ತದೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಬಿ.ವಿ.ಶ್ರೀನಿವಾಸ್ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿ ಮಂತ್ರಿಯಾಗಿದ್ದ ಅವಧಿಯಲ್ಲಿ ಇದೇ ಮಾತನ್ನು ಹೇಳಿದ್ದರು. ಗ್ಯಾಸ್ ಸಿಲಿಂಡರ್ ಬೆಲೆ 400 ರೂ ಇದ್ದಾಗ ‘ಮೆಹಂಗಾಯಿ ದಾಯನ್’ ಎಂದು ಹೇಳುತ್ತಿದ್ದ ಅವರು, ಈಗ ಬೆಲೆ 1100 ರೂ.ಗೆ ತಲುಪಿದಾಗ ಮಾತನಾಡುತ್ತಿಲ್ಲ. ಈ ‘ದಾಯನ್‌’ (ದೆವ್ವ) ಈಗ ಪ್ರಿಯತಮೆಯಾಗಿದೆ. ಇದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

“ಅವರಿಗೆ ಹಳೆಯ ದಿನಗಳನ್ನು ನೆನಪಿಸಿದೆ. ಅವರಿಗೆ ಕಿವಿ ಕೇಳಿಸುವುದಿಲ್ಲ. ಬೆಲೆ ಏರಿಕೆಯೆಂದು ರಸ್ತೆಯಲ್ಲಿ ಕುಣಿಯುತ್ತಿದ್ದವರು ಈಗ ಎಲ್ಲಿ ಹೋಗಿದ್ದಾರೆ? ಸ್ಮೃತಿ ಇರಾನಿಯವರು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾಗಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರಗಳಾದಾಗ ಇವರು ಮಾತನಾಡುವುದಿಲ್ಲ. ಹತ್ರಾಸ್‌ ಪ್ರಕರಣ ಇರಬಹುದು, ಉನ್ನಾವೋ ಪ್ರಕರಣ ಇರಬಹುದು- ಇದ್ಯಾವುಕ್ಕೂ ಪ್ರತಿಕ್ರಿಯಿಸಲಿಲ್ಲ. ಕಾನ್ಫುರದಲ್ಲಿ ತಾಯಿ ಮತ್ತು ಮಗಳನ್ನು ಬೆಂಕಿಯಲ್ಲಿ ಹಾಕಿ ಸುಡಲಾಯಿತು. ನಿಶಿಕಾಂತ್ ದುಬೆ ಎಂಬಾತ ಬಿಜೆಪಿಯ ಸಂಸದ. ಮತ್ತೊಬ್ಬ ಮಹಿಳಾ ಜನಪ್ರತಿನಿಧಿಗೆ ಹೀನಾಯವಾಗಿ ನಿಂದಿಸಿ, ಇವರೆಲ್ಲ ರೆಡ್‌ಲೈಟ್‌ ಪ್ರದೇಶದವರು ಎಂದನು. ಅದ್ಯಾವುದಕ್ಕೂ ಸ್ಮೃತಿಯವರು ಪ್ರತಿಕ್ರಿಯಿಸಲಿಲ್ಲ. ಮಹಿಳಾ ಇಲಾಖೆಗೆ ಅವರು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.

ಕಾನೂನು ಕ್ರಮಕ್ಕೆ ಚಿಂತನೆ

“ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಶೋಚನೀಯ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಅಧಿಕಾರದಲ್ಲಿರುವ ಕೆಲವರು ಆರೋಪಿಸಿರುವ ಇಂತಹ ಯಾವುದೇ ಆಲೋಚನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈ ಸಂಬಂಧ ಕಾನೂನು ಕ್ರಮ ಜರುಗಿಸುತ್ತೇವೆ” ಎಂದು ಯುವ ಕಾಂಗ್ರೆಸ್‌ ಕಾನೂನು ಕೋಶದ ಅಧ್ಯಕ್ಷ ರೂಪೇಶ್ ಭದೌರಿಯಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...