Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ.

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ ಎನ್ನುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಪಾಕಿಸ್ತಾನದ ಸಂಸತ್ತಿನಲ್ಲಿನ ಚರ್ಚೆಯ ವಿಡಿಯೋ ತುಣುಕಿನಲ್ಲಿ ಸದಸ್ಯರು “ಮೋದಿ, ಮೋದಿ” ಎಂದು ಕೂಗುತ್ತಿದ್ದಾರೆ ಎಂದು ಹಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಈ ವೀಡಿಯೋವನ್ನ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ, “ಪ್ರಧಾನಿ ನರೇಂದ್ರ ಮೋದಿ ಜಿ ಅವರು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಸ್ಫೂರ್ತಿ ನೀಡಿದ್ದಾರೆ! ಪಾಕಿಸ್ತಾನ ಸಂಸತ್ತಿನಲ್ಲಿ ಆಡಳಿತಾರೂಢ ಸರಕಾರದ ವಿರುದ್ಧ “ಮೋದಿ ಮೋದಿ” ಎಂದು ಘೋಷಣೆ ಹಾಕುತ್ತಿರುವುದನ್ನು ನೋಡಿ. # ಇಮ್ರಾನ್ ಖಾನ್‌ಗೆ ಭಾರಿ ಮುಜುಗರವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಸೇರಿದಂತೆ ಅನೇಕ ಮುಖ್ಯವಾಹಿನಿಯ ಸುದ್ದಿ ಮಾಧ್ಯಮಗಳು ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ. ಜೊತೆಗೆ ಹತ್ತಾರು ಬಿಜೆಪಿ ನಾಯಕರೂ ಕೂಡ ರಾಷ್ಟ್ರವ್ಯಾಪಿ ಈ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: 

ಇಂಡಿಯಾ ಟಿವಿ ಅಪ್‌ಲೋಡ್ ಮಾಡಿದ ಕ್ಲಿಪ್‌ನಲ್ಲಿ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಷಾ ಮಹಮೂದ್ ಖುರೇಷಿ ದೇಶದ ಸಂಸತ್ತಿನಲ್ಲಿ ಮಾತನಾಡುವುದನ್ನು ಕಾಣಬಹುದು. ಹಾಗಾಗಿ “ಷಾ ಮಹಮೂದ್ ಖುರೇಷಿಯವರ ಸಂಸತ್ತಿನ ಭಾಷಣ”ಕ್ಕಾಗಿ ಗೂಗಲ್‌ನಲ್ಲಿ ಹುಡುಕಿದಾಗ ಪಾಕಿಸ್ತಾನದ ಸುದ್ದಿ ವಾಹಿನಿಯಾದ 92 ನ್ಯೂಸ್ ಎಚ್‌ಡಿ ಅಪ್‌ಲೋಡ್ ಮಾಡಿದ ವೀಡಿಯೊ ಕಂಡಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಸುಮಾರು 10 ನಿಮಿಷಗಳ ಸುದೀರ್ಘ ಭಾಷಣದ ಕೆಲವು ಭಾಗಗಳನ್ನು ಮೇಲೆ ತಿಳಿಸಿದ ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಭಾರತೀಯ ಚಾನೆಲ್‌ಗಳು ಬಳಸುತ್ತಿರುವುದು ತಿಳಿದುಬಂದಿದೆ. ಇದರಲ್ಲಿ ’ಮೋದಿ ಮೋದಿ ಎಂದು ಕೂಗುತ್ತಿರುವಂತೆಯೇ ಕಂಡುಬಂದಿದೆ.

ಆದರೂ ವೀಡಿಯೋವನ್ನು ಸೂಕ್ಷ್ಮವಾಗಿ ಮತ್ತು ನಿಧಾನಗೊಳಿಸಿ ಆಲಿಸಿದಾಗ, ವಾಸ್ತವದಲ್ಲಿ ವಿರೋಧ ಪಕ್ಷದ ಸಂಸದರು “ವೋಟಿಂಗ್ ವೋಟಿಂಗ್” ಎಂದು ಕೂಗುತ್ತಿರುವುದನ್ನು ಕೇಳಬಹುದು.

ವೀಡಿಯೊದಲ್ಲಿ 0.15 ನಿಮಿಷದಲ್ಲಿ, ಸ್ಪೀಕರ್ ಸಂಸದರನ್ನುದ್ದೇಶಿಸಿ ಅವರನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ “वोटिंग सबकुछ होगा… सबकुछ होगा” (ಮತದಾನ ನಡೆಯಲಿದೆ) ಎಂದು ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇಷ್ಟೇ ಅಲ್ಲದೇ, ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ (ಎಎಫ್‌ಡಬ್ಲ್ಯೂಎ) ಈ ಸುದ್ದಿಯನ್ನು ಸುಳ್ಳು ಎಂದು ಕಂಡುಹಿಡಿದಿದೆ. ಪಾಕಿಸ್ತಾನದ ಅಸೆಂಬ್ಲಿಯಲ್ಲಿ ಸದಸ್ಯರು ಮಂಡಿಸಿದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ವಿರೋಧ ವ್ಯಕ್ತವಾಯಿತು. ಈ ವೇಳೆ ಸದಸ್ಯರು  “ಮತದಾನ, ಮತದಾನ” (ಓಟಿಂಗ್.. ಓಟಿಂಗ್) ಎಂದು ಕೂಗುತ್ತಿದ್ದಾರೆ. ಗಮನ ಹರಿಸದೇ ಕೇಳಿದರೆ ಅದು “ಮೋದಿ, ಮೋದಿ” ಅಂತಲೇ ಕೇಳುತ್ತದೆ. ಆದರೆ ಅದು “ಮೋದಿ.. ಮೋದಿ” ಅಂತ ಕೂಗಿದ್ದಲ್ಲ “ಓಟಿಂಗ್.. ಓಟಿಂಗ್..” ಎಂದು ಕೂಗಲಾಗಿದೆ.

ಅಕ್ಟೋಬರ್ 27 ರಂದು ಪಾಕಿಸ್ತಾನದ ದಿನಪತ್ರಿಕೆ ಡಾನ್ ನೀಡಿದ ವರದಿಯು ಸದನದಲ್ಲಿ ಉಂಟಾದ ಅವ್ಯವಸ್ಥೆಯನ್ನು ಸಹ ವಿವರಿಸಿದ್ದು, ವಿರೋಧ ಪಕ್ಷದ ಸದಸ್ಯರು ‘ಮತದಾನ ಮತದಾನ’ ಘೋಷಣೆಗಳನ್ನು ಎತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಆದ್ದರಿಂದ, ಪಾಕಿಸ್ತಾನದ ಸಂಸತ್ತಿನ ಸಂಸದರು “ಮತದಾನ, ಮತದಾನ” ಎಂದು ಕೂಗುತ್ತಿದ್ದರು. ಹಾಗಾಗಿ “ಮೋದಿ, ಮೋದಿ” ಎಂದು ಕೂಗುತ್ತಿರುವುದಲ್ಲ ಎಂದು ಸ್ಪಷ್ಟವಾಗಿದೆ.


ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...