Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ.

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ ಎನ್ನುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಪಾಕಿಸ್ತಾನದ ಸಂಸತ್ತಿನಲ್ಲಿನ ಚರ್ಚೆಯ ವಿಡಿಯೋ ತುಣುಕಿನಲ್ಲಿ ಸದಸ್ಯರು “ಮೋದಿ, ಮೋದಿ” ಎಂದು ಕೂಗುತ್ತಿದ್ದಾರೆ ಎಂದು ಹಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಈ ವೀಡಿಯೋವನ್ನ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ, “ಪ್ರಧಾನಿ ನರೇಂದ್ರ ಮೋದಿ ಜಿ ಅವರು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಸ್ಫೂರ್ತಿ ನೀಡಿದ್ದಾರೆ! ಪಾಕಿಸ್ತಾನ ಸಂಸತ್ತಿನಲ್ಲಿ ಆಡಳಿತಾರೂಢ ಸರಕಾರದ ವಿರುದ್ಧ “ಮೋದಿ ಮೋದಿ” ಎಂದು ಘೋಷಣೆ ಹಾಕುತ್ತಿರುವುದನ್ನು ನೋಡಿ. # ಇಮ್ರಾನ್ ಖಾನ್‌ಗೆ ಭಾರಿ ಮುಜುಗರವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಸೇರಿದಂತೆ ಅನೇಕ ಮುಖ್ಯವಾಹಿನಿಯ ಸುದ್ದಿ ಮಾಧ್ಯಮಗಳು ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ. ಜೊತೆಗೆ ಹತ್ತಾರು ಬಿಜೆಪಿ ನಾಯಕರೂ ಕೂಡ ರಾಷ್ಟ್ರವ್ಯಾಪಿ ಈ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: 

ಇಂಡಿಯಾ ಟಿವಿ ಅಪ್‌ಲೋಡ್ ಮಾಡಿದ ಕ್ಲಿಪ್‌ನಲ್ಲಿ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಷಾ ಮಹಮೂದ್ ಖುರೇಷಿ ದೇಶದ ಸಂಸತ್ತಿನಲ್ಲಿ ಮಾತನಾಡುವುದನ್ನು ಕಾಣಬಹುದು. ಹಾಗಾಗಿ “ಷಾ ಮಹಮೂದ್ ಖುರೇಷಿಯವರ ಸಂಸತ್ತಿನ ಭಾಷಣ”ಕ್ಕಾಗಿ ಗೂಗಲ್‌ನಲ್ಲಿ ಹುಡುಕಿದಾಗ ಪಾಕಿಸ್ತಾನದ ಸುದ್ದಿ ವಾಹಿನಿಯಾದ 92 ನ್ಯೂಸ್ ಎಚ್‌ಡಿ ಅಪ್‌ಲೋಡ್ ಮಾಡಿದ ವೀಡಿಯೊ ಕಂಡಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಸುಮಾರು 10 ನಿಮಿಷಗಳ ಸುದೀರ್ಘ ಭಾಷಣದ ಕೆಲವು ಭಾಗಗಳನ್ನು ಮೇಲೆ ತಿಳಿಸಿದ ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಭಾರತೀಯ ಚಾನೆಲ್‌ಗಳು ಬಳಸುತ್ತಿರುವುದು ತಿಳಿದುಬಂದಿದೆ. ಇದರಲ್ಲಿ ’ಮೋದಿ ಮೋದಿ ಎಂದು ಕೂಗುತ್ತಿರುವಂತೆಯೇ ಕಂಡುಬಂದಿದೆ.

ಆದರೂ ವೀಡಿಯೋವನ್ನು ಸೂಕ್ಷ್ಮವಾಗಿ ಮತ್ತು ನಿಧಾನಗೊಳಿಸಿ ಆಲಿಸಿದಾಗ, ವಾಸ್ತವದಲ್ಲಿ ವಿರೋಧ ಪಕ್ಷದ ಸಂಸದರು “ವೋಟಿಂಗ್ ವೋಟಿಂಗ್” ಎಂದು ಕೂಗುತ್ತಿರುವುದನ್ನು ಕೇಳಬಹುದು.

ವೀಡಿಯೊದಲ್ಲಿ 0.15 ನಿಮಿಷದಲ್ಲಿ, ಸ್ಪೀಕರ್ ಸಂಸದರನ್ನುದ್ದೇಶಿಸಿ ಅವರನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ “वोटिंग सबकुछ होगा… सबकुछ होगा” (ಮತದಾನ ನಡೆಯಲಿದೆ) ಎಂದು ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇಷ್ಟೇ ಅಲ್ಲದೇ, ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ (ಎಎಫ್‌ಡಬ್ಲ್ಯೂಎ) ಈ ಸುದ್ದಿಯನ್ನು ಸುಳ್ಳು ಎಂದು ಕಂಡುಹಿಡಿದಿದೆ. ಪಾಕಿಸ್ತಾನದ ಅಸೆಂಬ್ಲಿಯಲ್ಲಿ ಸದಸ್ಯರು ಮಂಡಿಸಿದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ವಿರೋಧ ವ್ಯಕ್ತವಾಯಿತು. ಈ ವೇಳೆ ಸದಸ್ಯರು  “ಮತದಾನ, ಮತದಾನ” (ಓಟಿಂಗ್.. ಓಟಿಂಗ್) ಎಂದು ಕೂಗುತ್ತಿದ್ದಾರೆ. ಗಮನ ಹರಿಸದೇ ಕೇಳಿದರೆ ಅದು “ಮೋದಿ, ಮೋದಿ” ಅಂತಲೇ ಕೇಳುತ್ತದೆ. ಆದರೆ ಅದು “ಮೋದಿ.. ಮೋದಿ” ಅಂತ ಕೂಗಿದ್ದಲ್ಲ “ಓಟಿಂಗ್.. ಓಟಿಂಗ್..” ಎಂದು ಕೂಗಲಾಗಿದೆ.

ಅಕ್ಟೋಬರ್ 27 ರಂದು ಪಾಕಿಸ್ತಾನದ ದಿನಪತ್ರಿಕೆ ಡಾನ್ ನೀಡಿದ ವರದಿಯು ಸದನದಲ್ಲಿ ಉಂಟಾದ ಅವ್ಯವಸ್ಥೆಯನ್ನು ಸಹ ವಿವರಿಸಿದ್ದು, ವಿರೋಧ ಪಕ್ಷದ ಸದಸ್ಯರು ‘ಮತದಾನ ಮತದಾನ’ ಘೋಷಣೆಗಳನ್ನು ಎತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಆದ್ದರಿಂದ, ಪಾಕಿಸ್ತಾನದ ಸಂಸತ್ತಿನ ಸಂಸದರು “ಮತದಾನ, ಮತದಾನ” ಎಂದು ಕೂಗುತ್ತಿದ್ದರು. ಹಾಗಾಗಿ “ಮೋದಿ, ಮೋದಿ” ಎಂದು ಕೂಗುತ್ತಿರುವುದಲ್ಲ ಎಂದು ಸ್ಪಷ್ಟವಾಗಿದೆ.


ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...