Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ.

- Advertisement -
- Advertisement -

ಪಾಕಿಸ್ತಾನದ ಸಂಸತ್ತಿನಲ್ಲಿ ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ ಎನ್ನುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಪಾಕಿಸ್ತಾನದ ಸಂಸತ್ತಿನಲ್ಲಿನ ಚರ್ಚೆಯ ವಿಡಿಯೋ ತುಣುಕಿನಲ್ಲಿ ಸದಸ್ಯರು “ಮೋದಿ, ಮೋದಿ” ಎಂದು ಕೂಗುತ್ತಿದ್ದಾರೆ ಎಂದು ಹಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಈ ವೀಡಿಯೋವನ್ನ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ, “ಪ್ರಧಾನಿ ನರೇಂದ್ರ ಮೋದಿ ಜಿ ಅವರು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಸ್ಫೂರ್ತಿ ನೀಡಿದ್ದಾರೆ! ಪಾಕಿಸ್ತಾನ ಸಂಸತ್ತಿನಲ್ಲಿ ಆಡಳಿತಾರೂಢ ಸರಕಾರದ ವಿರುದ್ಧ “ಮೋದಿ ಮೋದಿ” ಎಂದು ಘೋಷಣೆ ಹಾಕುತ್ತಿರುವುದನ್ನು ನೋಡಿ. # ಇಮ್ರಾನ್ ಖಾನ್‌ಗೆ ಭಾರಿ ಮುಜುಗರವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ಇಂಡಿಯಾ ಟಿವಿ, ಟೈಮ್ಸ್‌ ನೌ ಮತ್ತು ಸುಳ್ಳು ಸುದ್ದಿ ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಒಪಿಇಂಡಿಯಾ ಸೇರಿದಂತೆ ಅನೇಕ ಮುಖ್ಯವಾಹಿನಿಯ ಸುದ್ದಿ ಮಾಧ್ಯಮಗಳು ಇದೇ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದೆ. ಜೊತೆಗೆ ಹತ್ತಾರು ಬಿಜೆಪಿ ನಾಯಕರೂ ಕೂಡ ರಾಷ್ಟ್ರವ್ಯಾಪಿ ಈ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: 

ಇಂಡಿಯಾ ಟಿವಿ ಅಪ್‌ಲೋಡ್ ಮಾಡಿದ ಕ್ಲಿಪ್‌ನಲ್ಲಿ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಷಾ ಮಹಮೂದ್ ಖುರೇಷಿ ದೇಶದ ಸಂಸತ್ತಿನಲ್ಲಿ ಮಾತನಾಡುವುದನ್ನು ಕಾಣಬಹುದು. ಹಾಗಾಗಿ “ಷಾ ಮಹಮೂದ್ ಖುರೇಷಿಯವರ ಸಂಸತ್ತಿನ ಭಾಷಣ”ಕ್ಕಾಗಿ ಗೂಗಲ್‌ನಲ್ಲಿ ಹುಡುಕಿದಾಗ ಪಾಕಿಸ್ತಾನದ ಸುದ್ದಿ ವಾಹಿನಿಯಾದ 92 ನ್ಯೂಸ್ ಎಚ್‌ಡಿ ಅಪ್‌ಲೋಡ್ ಮಾಡಿದ ವೀಡಿಯೊ ಕಂಡಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಸುಮಾರು 10 ನಿಮಿಷಗಳ ಸುದೀರ್ಘ ಭಾಷಣದ ಕೆಲವು ಭಾಗಗಳನ್ನು ಮೇಲೆ ತಿಳಿಸಿದ ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಭಾರತೀಯ ಚಾನೆಲ್‌ಗಳು ಬಳಸುತ್ತಿರುವುದು ತಿಳಿದುಬಂದಿದೆ. ಇದರಲ್ಲಿ ’ಮೋದಿ ಮೋದಿ ಎಂದು ಕೂಗುತ್ತಿರುವಂತೆಯೇ ಕಂಡುಬಂದಿದೆ.

ಆದರೂ ವೀಡಿಯೋವನ್ನು ಸೂಕ್ಷ್ಮವಾಗಿ ಮತ್ತು ನಿಧಾನಗೊಳಿಸಿ ಆಲಿಸಿದಾಗ, ವಾಸ್ತವದಲ್ಲಿ ವಿರೋಧ ಪಕ್ಷದ ಸಂಸದರು “ವೋಟಿಂಗ್ ವೋಟಿಂಗ್” ಎಂದು ಕೂಗುತ್ತಿರುವುದನ್ನು ಕೇಳಬಹುದು.

ವೀಡಿಯೊದಲ್ಲಿ 0.15 ನಿಮಿಷದಲ್ಲಿ, ಸ್ಪೀಕರ್ ಸಂಸದರನ್ನುದ್ದೇಶಿಸಿ ಅವರನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ “वोटिंग सबकुछ होगा… सबकुछ होगा” (ಮತದಾನ ನಡೆಯಲಿದೆ) ಎಂದು ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇಷ್ಟೇ ಅಲ್ಲದೇ, ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ (ಎಎಫ್‌ಡಬ್ಲ್ಯೂಎ) ಈ ಸುದ್ದಿಯನ್ನು ಸುಳ್ಳು ಎಂದು ಕಂಡುಹಿಡಿದಿದೆ. ಪಾಕಿಸ್ತಾನದ ಅಸೆಂಬ್ಲಿಯಲ್ಲಿ ಸದಸ್ಯರು ಮಂಡಿಸಿದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ವಿರೋಧ ವ್ಯಕ್ತವಾಯಿತು. ಈ ವೇಳೆ ಸದಸ್ಯರು  “ಮತದಾನ, ಮತದಾನ” (ಓಟಿಂಗ್.. ಓಟಿಂಗ್) ಎಂದು ಕೂಗುತ್ತಿದ್ದಾರೆ. ಗಮನ ಹರಿಸದೇ ಕೇಳಿದರೆ ಅದು “ಮೋದಿ, ಮೋದಿ” ಅಂತಲೇ ಕೇಳುತ್ತದೆ. ಆದರೆ ಅದು “ಮೋದಿ.. ಮೋದಿ” ಅಂತ ಕೂಗಿದ್ದಲ್ಲ “ಓಟಿಂಗ್.. ಓಟಿಂಗ್..” ಎಂದು ಕೂಗಲಾಗಿದೆ.

ಅಕ್ಟೋಬರ್ 27 ರಂದು ಪಾಕಿಸ್ತಾನದ ದಿನಪತ್ರಿಕೆ ಡಾನ್ ನೀಡಿದ ವರದಿಯು ಸದನದಲ್ಲಿ ಉಂಟಾದ ಅವ್ಯವಸ್ಥೆಯನ್ನು ಸಹ ವಿವರಿಸಿದ್ದು, ವಿರೋಧ ಪಕ್ಷದ ಸದಸ್ಯರು ‘ಮತದಾನ ಮತದಾನ’ ಘೋಷಣೆಗಳನ್ನು ಎತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಆದ್ದರಿಂದ, ಪಾಕಿಸ್ತಾನದ ಸಂಸತ್ತಿನ ಸಂಸದರು “ಮತದಾನ, ಮತದಾನ” ಎಂದು ಕೂಗುತ್ತಿದ್ದರು. ಹಾಗಾಗಿ “ಮೋದಿ, ಮೋದಿ” ಎಂದು ಕೂಗುತ್ತಿರುವುದಲ್ಲ ಎಂದು ಸ್ಪಷ್ಟವಾಗಿದೆ.


ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...