Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ...

ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

- Advertisement -
- Advertisement -

ಬುಧವಾರದಂದು ಉತ್ತರ ಪ್ರದೇಶದ ಅಟ್ರೌಲಿ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ, “ಕೋವಿಡ್ ಸಾಂಕ್ರಾಮಿಕದ ಕಳೆದ ಎರಡು ವರ್ಷಗಳಲ್ಲಿ ಕಮಲದ ಮೇಲೆ ಕೂತ ಲಕ್ಷ್ಮಿ ದೇವಿ ಪ್ರತಿ ಮನೆಗೂ ಬಂದಿದ್ದಾಳೆ. ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಭಾರತೀಯ ಪುರಾಣ ಕತೆಗಳ ಪ್ರಕಾರ ಲಕ್ಷ್ಮೀ ದೇವಿ ಸಂಪತ್ತಿನ ದೇವತೆಯಾಗಿದ್ದಾಳೆ. ಅಮಿತ್‌ ಶಾ ಅವರ ಈ ಹೇಳಿಕೆಯನ್ನು ಅರ್ಥ ಮಾಡಿಕೊಂಡರೆ, ಅವರು ಹೇಳಿದ್ದು, “ಕೊರೊನಾ ಸಮಯದಲ್ಲಿ ಪ್ರತಿ ಭಾರತೀಯರ ಮನೆಯಲ್ಲಿ ಸಂಪತ್ತು ತುಳುಕುತ್ತಿತ್ತು. ಆರ್ಥಿಕ ತೊಂದರೆ ದೇಶದ ಯಾವುದೇ ಪ್ರಜೆಯ ಮನೆಯಲ್ಲಿ ಇರಲಿಲ್ಲ. ಇದೆಲ್ಲವೂ ಸಾಧ್ಯವಾಗಿದ್ದು ಪ್ರಧಾನಿ ಮೋದಿಯಿಂದಾಗಿ” ಎಂದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದು ನಿಜವೇ ಅಥವಾ ಸುಳ್ಳೆ ಎಂದು ಚರ್ಚೆಗಳಾಗುತ್ತಿದೆ. ಸಚಿವರ ಈ ಹೇಳಿಕೆಯ ಬಗ್ಗೆ ‘ನಾನುಗೌರಿ.ಕಾಂ’ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ. ಅವುಗಳನ್ನು ಒಂದೊಂದಾಗಿ ನೋಡೋಣ.

ದೇಶದ ಜಿಡಿಪಿ

ಜಿಡಿಪಿ ಎಂದರೆ Gross Domestic Product ಅರ್ಥಾತ್ ಒಟ್ಟು ದೇಶೀಯ ಉತ್ಪನ್ನ. ಅಂದರೆ ಒಂದು ನಿರ್ದಿಷ್ಟ ಅವಧಿಯಲ್ಲಿ ದೇಶದೊಳಗೆ ಉತ್ಪಾದನೆಯಾಗುವ ಸರಕು ಮತ್ತು ಸೇವೆಗಳ ಒಟ್ಟು ಮಾರುಕಟ್ಟೆ ಮೌಲ್ಯವಾಗಿದೆ. ಇದರೊಂದಿಗೆ ದೇಶದಲ್ಲಿ ಜಿಡಿಪಿ ಇಳಿಕೆಯಾಗಿದೆ ಎಂದರೆ ದೇಶದಲ್ಲಿ ಉತ್ಪಾದನೆಗಳು ಕಡಿಮೆಯಾಗಿದೆ ಎಂದರ್ಥ.

ಕೊರೊನಾ ಸೋಂಕು 2019ರಲ್ಲಿ ಚೀನಾದಲ್ಲಿ ಪತ್ತೆಯಾದರೂ, 2020ರ ಹೊತ್ತಿಗೆ ಭಾರತದಲ್ಲಿ ಎಲ್ಲಾ ಕಡೆಗೆ ಹರಡಲು ಪ್ರಾರಂಭವಾಗಿತ್ತು. 2020 ರಲ್ಲಿ ದೇಶದ ಜಿಡಿಪಿ -7.252 ಗೆ ಇಳಿದಿತ್ತು. (ಸರಿಯಾಗಿ ಗಮನಿಸಿ ಅದು ಮೈನಸ್‌ 7.252)

ಕೊರೊನಾ ಸಮಯದಲ್ಲಿ ಲಾಕ್‌ಡೌನ್‌‌ ಇದ್ದ ಕಾರಣ ವಿಶ್ವದ ಇತರ ದೇಶಗಳಲ್ಲೂ ಜಿಡಿಪಿ ಕುಸಿತ ಕಂಡಿತ್ತು. ಹೀಗೆಯೇ ಭಾರತದಲ್ಲೂ ಜಿಡಿಪಿ ಕುಸಿತ ಆಗಿತ್ತು ಎಂಬ ವಾದಕ್ಕೆ ಬರುವುದಾದರೆ ಅದು 100% ಸರಿಯಾದ ವಾದವಲ್ಲ. ಯಾಕೆಂದರೆ ಕಳೆದ ಹತ್ತು ವರ್ಷಗಳ ಜಿಡಿಪಿಯನ್ನು ಲೆಕ್ಕಕ್ಕೆ ತೆಗೆದುಕೊಂಡದರೆ ಭಾರತದ ಜಿಡಿಪಿ ಏರುತ್ತಲೇ ಇತ್ತು. ಭಾರತದ ಜಿಡಿಪಿ ನಿರಂತರವಾಗಿ ಇಳಿಕೆ ಪ್ರಾರಂಭವಾಗಿದ್ದು 2016ರ ನಂತರವಾಗಿದೆ.

2010 ರಲ್ಲಿ 8.498 ಇದ್ದ ದೇಶದ ಜಿಡಿಪಿ 2019 ರ ಹೊತ್ತಿಗೆ 4.042 ತಲುಪಿತ್ತು. ಅದೇ ರೀತಿ 2020 ರಲ್ಲಿ ದೇಶದ ಜಿಡಿಪಿ ‘ಮೈನಸ್‌ 7.252ತಲುಪಿತ್ತು. ಈ ಮಾದರಿಯನ್ನು ನೋಡುವುದಾದರೆ ದೇಶದಲ್ಲಿ ಕೊರೊನಾ ಹರಡದಿದ್ದರೂ ದೇಶದ ಜಿಡಿಪಿ ಮೇಲಕ್ಕೆ ಏರುತ್ತಿರಲಿಲ್ಲ. ಆರ್ಥಿಕ ತಜ್ಞರು, ‘ನೋಟ್ ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ಜಾರಿ ಮತ್ತು ಮೋದಿ ಸರ್ಕಾರದ ಇತರ ಯೋಜನೆಗಳು ಇದಕ್ಕೆ ಕಾರಣ’ ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇಷ್ಟೇ ಅಲ್ಲದೆ, ದೇಶದಲ್ಲಿ ಕೊರೊನಾ ಲಾಕ್‌ಡೌನ್‌ ಪ್ರಾರಂಭವಾಗಿದ್ದು 2020 ರ ಮಾರ್ಚ್‌ ನಂತರವಾಗಿದೆ. ಆದರೆ ದೇಶದ ಜಿಡಿಪಿ 2018-19 ಮತ್ತು  2019-20 ರ ಆರ್ಥಿಕ ವರ್ಷದ ಎಂಟು ತ್ರೈಮಾಸಿದಲ್ಲೂ ಇಳಿಕೆಯಲ್ಲಿತ್ತು. ಕೊರೊನಾ ಲಾಕ್‌ಡೌನ್‌‌ನಿಂದಾಗಿ ದೇಶದ ಜಿಡಿಪಿ ಮೇಲೆ ಪರಿಣಾಮ ಬೀರಿದ್ದು 2020-21 ರ ಮೇಲೆಯಾಗಿದೆ. 2020-21 ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ -23.9 (ಸರಿಯಾಗಿ ಗಮನಿಸಿ ಅದು ‘ಮೈನಸ್‌23.9ಆಗಿದೆ). ಅದರ ನಂತರ ಲಾಕ್‌ಡೌನ್‌ ಸಡಿಲಿಕೆಯ ನಂತರ ದೇಶದ ಜಿಡಿಪಿ ಮೇಲೇರುತ್ತಾ ಬಂದಿದೆ.


source: tradingeconomics.com

ತಲಾ ಆದಾಯ

ತಲಾ ಆದಾಯ ಎಂದರೆ ದೇಶದ ಪ್ರತಿ ವ್ಯಕ್ತಿ ಗಳಿಸಿದ ಸರಾಸರಿ ಆದಾಯ. ತಲಾ ಆದಾಯವನ್ನು ಒಂದು ದೇಶದ ಜನಸಂಖ್ಯೆಯ ಜೀವನ ಮಟ್ಟ ಮತ್ತು ಜೀವನದ ಗುಣಮಟ್ಟವನ್ನು ಮೌಲ್ಯಮಾಪನ ಮಾಡಲು ಬಳಸಬಹುದು.

ದೇಶದ ತಲಾ ಆದಾಯ 2012 ರಿಂದ ನಿತಂತರ ಏರುಗತಿಯಲ್ಲೇ ಇತ್ತು. ಆದರೆ 2020 ರಲ್ಲಿ ದೇಶದ ತಲಾ ಆದಾಯ ಪ್ರಧಾನಿ ಮೋದಿ ಇದ್ದಾಗಿಯೂ ಇಳಿದಿದೆ.


source: tradingeconomics.com

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಭಾರತದ ಸಂಪತ್ತು

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ. ಈ ವರ್ಷದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೇ ಆಗಿದ್ದಾರೆ.

ಅವೈಜ್ಞಾನಿಕ ಕೊರೊನಾ ಲಾಕ್‌ಡೌನ್‌ನಲ್ಲಿ ಕಾರ್ಮಿಕ ಮಹಾವಲಸೆ

ಪ್ರಧಾನಿ ಮೋದಿಯವರ ಅವೈಜ್ಞಾನಿಕ ಮತ್ತು ಅತ್ಯಂತ ತುರ್ತಿನ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ದೇಶದ ಸಂಪತ್ತನ್ನು ಸೃಷ್ಟಿಸುವ ಕೋಟ್ಯಾಂತರ ಕಾರ್ಮಿಕರು ಸಂಕಷ್ಟಕ್ಕೆ ಒಳಗಾದರು. ಲಕ್ಷಾಂತರ ಕಾರ್ಮಿಕರು ಹೊಟ್ಟೆಗೆ ಏನೂ ಇಲ್ಲದೆ ಸಾವಿರಾರು ಕಿಲೊ ಮೀಟರ್‌ ದೂರದ ತಮ್ಮ ಮನೆಯನ್ನು ಅರಸುತ್ತಾ ಬರಿಗಾಲಲ್ಲಿ ನಡೆಯುತ್ತಾ ಹೊದರು. ಈ ವೇಳೆ ಸಾವಿರಾರು ಜನರು ದಾರಿ ಮಧ್ಯೆ ಅಸುನೀಗಿದರು. ಹಲವಾರು ದಾರುಣ ಘಟನೆಗಳಿಗೂ ದೇಶ ಸಾಕ್ಷಿಯಾಯಿತು. ಈ ವೇಳೆ ಕೂಡಾ ಮೋದಿ ದೇಶದ ಪ್ರಧಾನಿಯಾಗಿದ್ದರು.

ಆರೋಗ್ಯ ತಜ್ಞರ ಎಚ್ಚರಿಕೆಯ ಹೊರಾಗಿಯು ಆರೋಗ್ಯ ವ್ಯವಸ್ಥೆ ಸರಿ ಮಾಡದ ಪ್ರಧಾನಿ

ಕೊರೊನಾ ಮೊದಲ ಅಲೆಯ ಸಮಯದಲ್ಲಿ ದೇಶದ ಜನತೆ ಕಷ್ಟಪಟ್ಟರೂ, ಎರಡನೇ ಅಲೆ ಬರಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದರೂ, ಪ್ರಧಾನಿ ಮೋದಿ ಅದರ ಬಗ್ಗೆ ಗಮನಹರಿಸಿರಲಿಲ್ಲ. 2021ರ ಜನವರಿ 28 ರಂದು ವರ್ಲ್ಡ್ ಎಕನಾಮಿಕ್ ಫೋರಮ್‌ನ ದಾವೋಸ್ ಸಂವಾದವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಕೊರೊನಾ ವೈರಸ್ ಅನ್ನು ಯಶಸ್ವಿಯಾಗಿ ನಿಯಂತ್ರಿಸಿದ ದೇಶಗಳಲ್ಲಿ ಭಾರತವೂ ಒಂದು’ ಎಂದು ಘೋಷಿಸಿದ್ದರು.

ಇದರ ನಂತರ ದೇಶದಲ್ಲಿ ಎರಡನೇ ಅಲೆ ಪ್ರಾರಂಭವಾಗಿ ದೇಶದ ಜನತೆ ಆಮ್ಲಜನಕವಿಲ್ಲದೆ ಕಷ್ಟಕ್ಕೆ ಒಳಗಾಗಿದ್ದು. ಕೋಟ್ಯಾಂತರ ಭಾರತೀಯರು ಆಮ್ಲಜನಕವಿಲ್ಲದೆ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದರು. ದೇಶದ ಸ್ಮಶಾನಗಳು ತುಂಬಿ ಜನರು ಹೆಣವನ್ನು ಸುಡಲೂ ಸರತಿ ಸಾಲಿನಲ್ಲಿ ನಿಲ್ಲುವಂತಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಹೆಚ್ಚಿದ ಸಾಲ

ಕೊರೊನಾದ ಎರಡು ವರ್ಷಗಳಲ್ಲಿ ಪ್ರತಿ ಭಾರತೀಯನ ಮೇಲಿನ ಸಾಲಗಳು ಹೆಚ್ಚಾಗಿದೆ. ಭಾರತದ ಸಾಲದ ಹೊರೆಯು 2021 ರ ಹಣಕಾಸು ವರ್ಷಕ್ಕೆ ಒಟ್ಟು GDP ಗಿಂತಲೂ 60.5% ಕ್ಕೆ ಜಿಗಿದಿದೆ.

ಉದ್ಯೋಗ ನಷ್ಟ

CMIE 2020 ವರದಿಯ ಪ್ರಕಾರ, ಜುಲೈ 2020 ರಲ್ಲಿ ರಾಷ್ಟ್ರೀಯ ನಿರುದ್ಯೋಗ ದರವು 7.4% ಕ್ಕೆ ಇಳಿದಿತ್ತು ಮತ್ತು ಏಪ್ರಿಲ್ 2020 ರಲ್ಲಿ ಗರಿಷ್ಠ 23.5% ವರೆಗೂ ತಲುಪಿತ್ತು. ನವೆಂಬರ್ 2021 ರಲ್ಲಿ ಕಾರ್ಮಿಕ ವರ್ಗದ ಲಕ್ಷಾಂತರ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು CMIE ವರದಿ ಮಾಡಿತ್ತು.  ಸುಮಾರು 60 ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುವ ಉದ್ಯೋಗಿಗಳ ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ ಎಂದು ಈ ವರದಿ ಹೇಳಿತ್ತು.

ಬೆಲೆ ಏರಿಕೆ

ಕೊರೊನಾದಿಂದ ದೇಶದ ಜನರು ಉದ್ಯೋಗವಿಲ್ಲದೆ ಕಷ್ಟ ಪಡುತ್ತಿದ್ದಾಗ, ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಬೆಲೆಗಳನ್ನು ಏರಿಸುತ್ತಲೇ ಹೋಗಿದೆ. ದೇಶದ ಇತಿಹಾಸದಲ್ಲೇ ಇಂದನಕ್ಕೆ ಅತ್ಯಂತ ಹೆಚ್ಚು ಬೆಲೆ ಕೊರೊನಾದ ಈ ಎರಡು ವರ್ಷಗಳಲ್ಲಿ ದಾಖಲಾಯಿತು. ಇಷ್ಟೇ ಅಲ್ಲದೆ, ಅಡುಗೆ ಎಣ್ಣೆ ಸೇರಿದಂತೆ ದಿನ ಬಳಕೆ ವಸ್ತುಗಳ ಮೇಲೆ ಕೂಡಾ ಬೆಲೆ ಏರಿಕೆ ಆಗಿತ್ತು. ಜನರು ಬೆಲೆ ಏರಿಕೆಯಿಂದಾಗಿ ಕಷ್ಟ ಪಡುವಂತಾಯಿತು.

ಈ ಎಲ್ಲಾ ಆಧಾರಗಳನ್ನು ಇಟ್ಟುಕೊಂಡು ಹೇಳಬಹುದಾದರೆ, ‘ಮೋದಿಯಿಂದಾಗಿ ಕೊರೊನಾ ಸಮಯದಲ್ಲೂ ದೇಶದ ಪ್ರತಿ ಮನೆಯ ಸಂಪತ್ತು ತುಂಬಿತ್ತು’ ಎಂಬ ಅಮಿತ್‌ ಶಾ ಅವರ ಹೇಳಿಕೆಯು ಸುಳ್ಳಾಗಿದೆ. ಇದಕ್ಕೆ ಯಾವುದೆ ಅಧೀಕೃತ ಆಧಾರಗಳು ಇಲ್ಲ. ಇದೊಂದು ರಾಜಕೀಯ ಗಿಮಿಕ್ಕಿನ ಭಾಷಣ ಮಾತ್ರವೇ ಆಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...