Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ...

ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

- Advertisement -
- Advertisement -

ಬುಧವಾರದಂದು ಉತ್ತರ ಪ್ರದೇಶದ ಅಟ್ರೌಲಿ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ, “ಕೋವಿಡ್ ಸಾಂಕ್ರಾಮಿಕದ ಕಳೆದ ಎರಡು ವರ್ಷಗಳಲ್ಲಿ ಕಮಲದ ಮೇಲೆ ಕೂತ ಲಕ್ಷ್ಮಿ ದೇವಿ ಪ್ರತಿ ಮನೆಗೂ ಬಂದಿದ್ದಾಳೆ. ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಭಾರತೀಯ ಪುರಾಣ ಕತೆಗಳ ಪ್ರಕಾರ ಲಕ್ಷ್ಮೀ ದೇವಿ ಸಂಪತ್ತಿನ ದೇವತೆಯಾಗಿದ್ದಾಳೆ. ಅಮಿತ್‌ ಶಾ ಅವರ ಈ ಹೇಳಿಕೆಯನ್ನು ಅರ್ಥ ಮಾಡಿಕೊಂಡರೆ, ಅವರು ಹೇಳಿದ್ದು, “ಕೊರೊನಾ ಸಮಯದಲ್ಲಿ ಪ್ರತಿ ಭಾರತೀಯರ ಮನೆಯಲ್ಲಿ ಸಂಪತ್ತು ತುಳುಕುತ್ತಿತ್ತು. ಆರ್ಥಿಕ ತೊಂದರೆ ದೇಶದ ಯಾವುದೇ ಪ್ರಜೆಯ ಮನೆಯಲ್ಲಿ ಇರಲಿಲ್ಲ. ಇದೆಲ್ಲವೂ ಸಾಧ್ಯವಾಗಿದ್ದು ಪ್ರಧಾನಿ ಮೋದಿಯಿಂದಾಗಿ” ಎಂದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

ಫ್ಯಾಕ್ಟ್‌ಚೆಕ್

ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದು ನಿಜವೇ ಅಥವಾ ಸುಳ್ಳೆ ಎಂದು ಚರ್ಚೆಗಳಾಗುತ್ತಿದೆ. ಸಚಿವರ ಈ ಹೇಳಿಕೆಯ ಬಗ್ಗೆ ‘ನಾನುಗೌರಿ.ಕಾಂ’ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ. ಅವುಗಳನ್ನು ಒಂದೊಂದಾಗಿ ನೋಡೋಣ.

ದೇಶದ ಜಿಡಿಪಿ

ಜಿಡಿಪಿ ಎಂದರೆ Gross Domestic Product ಅರ್ಥಾತ್ ಒಟ್ಟು ದೇಶೀಯ ಉತ್ಪನ್ನ. ಅಂದರೆ ಒಂದು ನಿರ್ದಿಷ್ಟ ಅವಧಿಯಲ್ಲಿ ದೇಶದೊಳಗೆ ಉತ್ಪಾದನೆಯಾಗುವ ಸರಕು ಮತ್ತು ಸೇವೆಗಳ ಒಟ್ಟು ಮಾರುಕಟ್ಟೆ ಮೌಲ್ಯವಾಗಿದೆ. ಇದರೊಂದಿಗೆ ದೇಶದಲ್ಲಿ ಜಿಡಿಪಿ ಇಳಿಕೆಯಾಗಿದೆ ಎಂದರೆ ದೇಶದಲ್ಲಿ ಉತ್ಪಾದನೆಗಳು ಕಡಿಮೆಯಾಗಿದೆ ಎಂದರ್ಥ.

ಕೊರೊನಾ ಸೋಂಕು 2019ರಲ್ಲಿ ಚೀನಾದಲ್ಲಿ ಪತ್ತೆಯಾದರೂ, 2020ರ ಹೊತ್ತಿಗೆ ಭಾರತದಲ್ಲಿ ಎಲ್ಲಾ ಕಡೆಗೆ ಹರಡಲು ಪ್ರಾರಂಭವಾಗಿತ್ತು. 2020 ರಲ್ಲಿ ದೇಶದ ಜಿಡಿಪಿ -7.252 ಗೆ ಇಳಿದಿತ್ತು. (ಸರಿಯಾಗಿ ಗಮನಿಸಿ ಅದು ಮೈನಸ್‌ 7.252)

ಕೊರೊನಾ ಸಮಯದಲ್ಲಿ ಲಾಕ್‌ಡೌನ್‌‌ ಇದ್ದ ಕಾರಣ ವಿಶ್ವದ ಇತರ ದೇಶಗಳಲ್ಲೂ ಜಿಡಿಪಿ ಕುಸಿತ ಕಂಡಿತ್ತು. ಹೀಗೆಯೇ ಭಾರತದಲ್ಲೂ ಜಿಡಿಪಿ ಕುಸಿತ ಆಗಿತ್ತು ಎಂಬ ವಾದಕ್ಕೆ ಬರುವುದಾದರೆ ಅದು 100% ಸರಿಯಾದ ವಾದವಲ್ಲ. ಯಾಕೆಂದರೆ ಕಳೆದ ಹತ್ತು ವರ್ಷಗಳ ಜಿಡಿಪಿಯನ್ನು ಲೆಕ್ಕಕ್ಕೆ ತೆಗೆದುಕೊಂಡದರೆ ಭಾರತದ ಜಿಡಿಪಿ ಏರುತ್ತಲೇ ಇತ್ತು. ಭಾರತದ ಜಿಡಿಪಿ ನಿರಂತರವಾಗಿ ಇಳಿಕೆ ಪ್ರಾರಂಭವಾಗಿದ್ದು 2016ರ ನಂತರವಾಗಿದೆ.

2010 ರಲ್ಲಿ 8.498 ಇದ್ದ ದೇಶದ ಜಿಡಿಪಿ 2019 ರ ಹೊತ್ತಿಗೆ 4.042 ತಲುಪಿತ್ತು. ಅದೇ ರೀತಿ 2020 ರಲ್ಲಿ ದೇಶದ ಜಿಡಿಪಿ ‘ಮೈನಸ್‌ 7.252ತಲುಪಿತ್ತು. ಈ ಮಾದರಿಯನ್ನು ನೋಡುವುದಾದರೆ ದೇಶದಲ್ಲಿ ಕೊರೊನಾ ಹರಡದಿದ್ದರೂ ದೇಶದ ಜಿಡಿಪಿ ಮೇಲಕ್ಕೆ ಏರುತ್ತಿರಲಿಲ್ಲ. ಆರ್ಥಿಕ ತಜ್ಞರು, ‘ನೋಟ್ ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ಜಾರಿ ಮತ್ತು ಮೋದಿ ಸರ್ಕಾರದ ಇತರ ಯೋಜನೆಗಳು ಇದಕ್ಕೆ ಕಾರಣ’ ಎಂದು ಹೇಳುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಇಷ್ಟೇ ಅಲ್ಲದೆ, ದೇಶದಲ್ಲಿ ಕೊರೊನಾ ಲಾಕ್‌ಡೌನ್‌ ಪ್ರಾರಂಭವಾಗಿದ್ದು 2020 ರ ಮಾರ್ಚ್‌ ನಂತರವಾಗಿದೆ. ಆದರೆ ದೇಶದ ಜಿಡಿಪಿ 2018-19 ಮತ್ತು  2019-20 ರ ಆರ್ಥಿಕ ವರ್ಷದ ಎಂಟು ತ್ರೈಮಾಸಿದಲ್ಲೂ ಇಳಿಕೆಯಲ್ಲಿತ್ತು. ಕೊರೊನಾ ಲಾಕ್‌ಡೌನ್‌‌ನಿಂದಾಗಿ ದೇಶದ ಜಿಡಿಪಿ ಮೇಲೆ ಪರಿಣಾಮ ಬೀರಿದ್ದು 2020-21 ರ ಮೇಲೆಯಾಗಿದೆ. 2020-21 ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ -23.9 (ಸರಿಯಾಗಿ ಗಮನಿಸಿ ಅದು ‘ಮೈನಸ್‌23.9ಆಗಿದೆ). ಅದರ ನಂತರ ಲಾಕ್‌ಡೌನ್‌ ಸಡಿಲಿಕೆಯ ನಂತರ ದೇಶದ ಜಿಡಿಪಿ ಮೇಲೇರುತ್ತಾ ಬಂದಿದೆ.


source: tradingeconomics.com

ತಲಾ ಆದಾಯ

ತಲಾ ಆದಾಯ ಎಂದರೆ ದೇಶದ ಪ್ರತಿ ವ್ಯಕ್ತಿ ಗಳಿಸಿದ ಸರಾಸರಿ ಆದಾಯ. ತಲಾ ಆದಾಯವನ್ನು ಒಂದು ದೇಶದ ಜನಸಂಖ್ಯೆಯ ಜೀವನ ಮಟ್ಟ ಮತ್ತು ಜೀವನದ ಗುಣಮಟ್ಟವನ್ನು ಮೌಲ್ಯಮಾಪನ ಮಾಡಲು ಬಳಸಬಹುದು.

ದೇಶದ ತಲಾ ಆದಾಯ 2012 ರಿಂದ ನಿತಂತರ ಏರುಗತಿಯಲ್ಲೇ ಇತ್ತು. ಆದರೆ 2020 ರಲ್ಲಿ ದೇಶದ ತಲಾ ಆದಾಯ ಪ್ರಧಾನಿ ಮೋದಿ ಇದ್ದಾಗಿಯೂ ಇಳಿದಿದೆ.


source: tradingeconomics.com

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಭಾರತದ ಸಂಪತ್ತು

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ. ಈ ವರ್ಷದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೇ ಆಗಿದ್ದಾರೆ.

ಅವೈಜ್ಞಾನಿಕ ಕೊರೊನಾ ಲಾಕ್‌ಡೌನ್‌ನಲ್ಲಿ ಕಾರ್ಮಿಕ ಮಹಾವಲಸೆ

ಪ್ರಧಾನಿ ಮೋದಿಯವರ ಅವೈಜ್ಞಾನಿಕ ಮತ್ತು ಅತ್ಯಂತ ತುರ್ತಿನ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ದೇಶದ ಸಂಪತ್ತನ್ನು ಸೃಷ್ಟಿಸುವ ಕೋಟ್ಯಾಂತರ ಕಾರ್ಮಿಕರು ಸಂಕಷ್ಟಕ್ಕೆ ಒಳಗಾದರು. ಲಕ್ಷಾಂತರ ಕಾರ್ಮಿಕರು ಹೊಟ್ಟೆಗೆ ಏನೂ ಇಲ್ಲದೆ ಸಾವಿರಾರು ಕಿಲೊ ಮೀಟರ್‌ ದೂರದ ತಮ್ಮ ಮನೆಯನ್ನು ಅರಸುತ್ತಾ ಬರಿಗಾಲಲ್ಲಿ ನಡೆಯುತ್ತಾ ಹೊದರು. ಈ ವೇಳೆ ಸಾವಿರಾರು ಜನರು ದಾರಿ ಮಧ್ಯೆ ಅಸುನೀಗಿದರು. ಹಲವಾರು ದಾರುಣ ಘಟನೆಗಳಿಗೂ ದೇಶ ಸಾಕ್ಷಿಯಾಯಿತು. ಈ ವೇಳೆ ಕೂಡಾ ಮೋದಿ ದೇಶದ ಪ್ರಧಾನಿಯಾಗಿದ್ದರು.

ಆರೋಗ್ಯ ತಜ್ಞರ ಎಚ್ಚರಿಕೆಯ ಹೊರಾಗಿಯು ಆರೋಗ್ಯ ವ್ಯವಸ್ಥೆ ಸರಿ ಮಾಡದ ಪ್ರಧಾನಿ

ಕೊರೊನಾ ಮೊದಲ ಅಲೆಯ ಸಮಯದಲ್ಲಿ ದೇಶದ ಜನತೆ ಕಷ್ಟಪಟ್ಟರೂ, ಎರಡನೇ ಅಲೆ ಬರಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದರೂ, ಪ್ರಧಾನಿ ಮೋದಿ ಅದರ ಬಗ್ಗೆ ಗಮನಹರಿಸಿರಲಿಲ್ಲ. 2021ರ ಜನವರಿ 28 ರಂದು ವರ್ಲ್ಡ್ ಎಕನಾಮಿಕ್ ಫೋರಮ್‌ನ ದಾವೋಸ್ ಸಂವಾದವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಕೊರೊನಾ ವೈರಸ್ ಅನ್ನು ಯಶಸ್ವಿಯಾಗಿ ನಿಯಂತ್ರಿಸಿದ ದೇಶಗಳಲ್ಲಿ ಭಾರತವೂ ಒಂದು’ ಎಂದು ಘೋಷಿಸಿದ್ದರು.

ಇದರ ನಂತರ ದೇಶದಲ್ಲಿ ಎರಡನೇ ಅಲೆ ಪ್ರಾರಂಭವಾಗಿ ದೇಶದ ಜನತೆ ಆಮ್ಲಜನಕವಿಲ್ಲದೆ ಕಷ್ಟಕ್ಕೆ ಒಳಗಾಗಿದ್ದು. ಕೋಟ್ಯಾಂತರ ಭಾರತೀಯರು ಆಮ್ಲಜನಕವಿಲ್ಲದೆ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದರು. ದೇಶದ ಸ್ಮಶಾನಗಳು ತುಂಬಿ ಜನರು ಹೆಣವನ್ನು ಸುಡಲೂ ಸರತಿ ಸಾಲಿನಲ್ಲಿ ನಿಲ್ಲುವಂತಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಹೆಚ್ಚಿದ ಸಾಲ

ಕೊರೊನಾದ ಎರಡು ವರ್ಷಗಳಲ್ಲಿ ಪ್ರತಿ ಭಾರತೀಯನ ಮೇಲಿನ ಸಾಲಗಳು ಹೆಚ್ಚಾಗಿದೆ. ಭಾರತದ ಸಾಲದ ಹೊರೆಯು 2021 ರ ಹಣಕಾಸು ವರ್ಷಕ್ಕೆ ಒಟ್ಟು GDP ಗಿಂತಲೂ 60.5% ಕ್ಕೆ ಜಿಗಿದಿದೆ.

ಉದ್ಯೋಗ ನಷ್ಟ

CMIE 2020 ವರದಿಯ ಪ್ರಕಾರ, ಜುಲೈ 2020 ರಲ್ಲಿ ರಾಷ್ಟ್ರೀಯ ನಿರುದ್ಯೋಗ ದರವು 7.4% ಕ್ಕೆ ಇಳಿದಿತ್ತು ಮತ್ತು ಏಪ್ರಿಲ್ 2020 ರಲ್ಲಿ ಗರಿಷ್ಠ 23.5% ವರೆಗೂ ತಲುಪಿತ್ತು. ನವೆಂಬರ್ 2021 ರಲ್ಲಿ ಕಾರ್ಮಿಕ ವರ್ಗದ ಲಕ್ಷಾಂತರ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು CMIE ವರದಿ ಮಾಡಿತ್ತು.  ಸುಮಾರು 60 ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುವ ಉದ್ಯೋಗಿಗಳ ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ ಎಂದು ಈ ವರದಿ ಹೇಳಿತ್ತು.

ಬೆಲೆ ಏರಿಕೆ

ಕೊರೊನಾದಿಂದ ದೇಶದ ಜನರು ಉದ್ಯೋಗವಿಲ್ಲದೆ ಕಷ್ಟ ಪಡುತ್ತಿದ್ದಾಗ, ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಬೆಲೆಗಳನ್ನು ಏರಿಸುತ್ತಲೇ ಹೋಗಿದೆ. ದೇಶದ ಇತಿಹಾಸದಲ್ಲೇ ಇಂದನಕ್ಕೆ ಅತ್ಯಂತ ಹೆಚ್ಚು ಬೆಲೆ ಕೊರೊನಾದ ಈ ಎರಡು ವರ್ಷಗಳಲ್ಲಿ ದಾಖಲಾಯಿತು. ಇಷ್ಟೇ ಅಲ್ಲದೆ, ಅಡುಗೆ ಎಣ್ಣೆ ಸೇರಿದಂತೆ ದಿನ ಬಳಕೆ ವಸ್ತುಗಳ ಮೇಲೆ ಕೂಡಾ ಬೆಲೆ ಏರಿಕೆ ಆಗಿತ್ತು. ಜನರು ಬೆಲೆ ಏರಿಕೆಯಿಂದಾಗಿ ಕಷ್ಟ ಪಡುವಂತಾಯಿತು.

ಈ ಎಲ್ಲಾ ಆಧಾರಗಳನ್ನು ಇಟ್ಟುಕೊಂಡು ಹೇಳಬಹುದಾದರೆ, ‘ಮೋದಿಯಿಂದಾಗಿ ಕೊರೊನಾ ಸಮಯದಲ್ಲೂ ದೇಶದ ಪ್ರತಿ ಮನೆಯ ಸಂಪತ್ತು ತುಂಬಿತ್ತು’ ಎಂಬ ಅಮಿತ್‌ ಶಾ ಅವರ ಹೇಳಿಕೆಯು ಸುಳ್ಳಾಗಿದೆ. ಇದಕ್ಕೆ ಯಾವುದೆ ಅಧೀಕೃತ ಆಧಾರಗಳು ಇಲ್ಲ. ಇದೊಂದು ರಾಜಕೀಯ ಗಿಮಿಕ್ಕಿನ ಭಾಷಣ ಮಾತ್ರವೇ ಆಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...