Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ

- Advertisement -
- Advertisement -

ನಟಿ ಶ್ರೀದೇವಿ ಅವರ ಮರಣೋತ್ತರ ವರದಿಯೆಂದು ಪ್ರತಿಪಾದಿಸಿ ವರದಿಯೊಂದರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವರದಿಯಲ್ಲಿ ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಹೇಳುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ಚಿತ್ರದ ಸತ್ಯಾಂಶವನ್ನು ಪರಿಶೀಲಿಸೋಣ.

ಇದರ ಆರ್ಕೈವ್ ಇಲ್ಲಿದೆ

ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಪ್ರತಿಪಾದನೆ: ನಟಿ ಶ್ರೀದೇವಿ ಅವರಿಗೆ ಬಲವಂತವಾಗಿ ಮಾದಕ ದ್ರವ್ಯ ಸೇವಿನೆ ಮಾಡಲಾಗಿತ್ತು. ಅವರ ಸಾವು ಸ್ವಾಭಾವಿಕವಲ್ಲ ಎಂದು ಹೇಳಿದ ಮರಣೋತ್ತರ ವರದಿ.

ಸತ್ಯ:  ನಟಿ ಶ್ರೀದೇವಿ ಪ್ರಜ್ಞೆ ಕಳೆದುಕೊಂಡು ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ದುಬೈ ಮೀಡಿಯಾ ಆಫಿಸ್ ಟ್ವೀಟ್ ಮಾಡಿ ದೃಡಪಡಿಸಿದೆ. ಸಂಬಂಧಿತ ದಾಖಲೆಗಳೊಂದಿಗೆ  ಹಲವಾರು ಸುದ್ದಿ ಸಂಸ್ಥೆಗಳು ಕೂಡಾ ಇದನ್ನೇ ದೃಡಪಟಿಸಿದೆ. ಇದಲ್ಲದೆ, ವೈರಲ್ ಡಾಕ್ಯುಮೆಂಟ್ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ಡಾಕ್ಯುಮೆಂಟ್ ಅಧಿಕೃತವಲ್ಲ ಎಂದು ಸ್ಪಷ್ಟಪಡಿಸುವ ಅನೇಕ ಕಾಗುಣಿತ ಮತ್ತು ವ್ಯಾಕರಣ ತಪ್ಪುಗಳನ್ನು ನಾವೇ ಕಂಡುಕೊಳ್ಳಬಹುದು. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಪೋಸ್ಟ್‌ನ ಪ್ರತಿಪಾದನೆ ತಪ್ಪಾಗಿದೆ.

‘‘Sridevi death UAE’ ಎಂಬ ಕೀವರ್ಡ್‌ ಮೂಲಕ ಗೂಗಲ್‌ನಲ್ಲಿ ಹುಡುಕಾಟ ನಡೆಸಿದರೆ ದುಬೈ ಮೀಡಿಯಾ ಆಫಿಸ್‌ ಎಂಬ ಅಧೀಕೃತ ಟ್ವೀಟ್ಟರ್‌ನಲ್ಲಿ ಇದರ ಮಾಹಿತಿಯನ್ನು ಪಡೆಯಬಹುದಾಗಿದೆ.  ಇದರಲ್ಲಿ ನಟಿಯು ಪ್ರಜ್ಞೆ ತಪ್ಪಿ, ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. ಈ ವರದಿಯಲ್ಲಿ ಯಾವುದೇ ಗಾಯಗಳ ಬಗ್ಗೆ ಉಲ್ಲೇಖವಿಲ್ಲ.

ಅಷ್ಟೇ ಅಲ್ಲದೆ, ಈ ಬಗ್ಗೆ ಇನ್ನಷ್ಟು ದಾಖಲೆ ಹುಡುಕಾಡಿದರೆ ನಟಿಯ ಸಾವಿಗೆ ಸಂಬಂಧಿಸಿದ ದಾಖಲೆಗಳನ್ನು ಪ್ರಕಟಿಸಿರುವ ಪತ್ರಿಕೆಯ ಲೇಖನವನ್ನು ಕಾಣಬಹುದಾಗಿದೆ. ಇದು ಆಕಸ್ಮಿಕವಾಗಿ ಮುಳುಗಿರುವುದು ಸಾವಿಗೆ ಕಾರಣ ಎಂದು ದಾಖಲೆ ಸಮೇತ ಖಚಿತಪಡಿಸುತ್ತದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ ವೈರಲ್ ವರದಿಯು ಯುಎಇ ಸರ್ಕಾರದ ಯಾವುದೆ ಅಧೀಕೃತ ಮೂಲದ್ದಲ್ಲ ಎಂದು ಸ್ವತಃ ನಾವೆ ಕಂಡುಕೊಳ್ಳಬಹುದು. ಈ ವೈರಲ್ ವರದಿಯನ್ನು  ಸೂಕ್ಷ್ಮವಾಗಿ ಗಮನಿಸಿದರೆ, ಇದು ಅಧಿಕೃತವಲ್ಲ ಎಂದು ಸ್ಪಷ್ಟವಾಗುವ ಅನೇಕ ಕಾಗುಣಿತ ಮತ್ತು ವ್ಯಾಕರಣದ ತಪ್ಪುಗಳನ್ನು ಕಾಣಬಹುದಾಗಿದೆ. ಯುಎಇ ಆರೋಗ್ಯ ಸಚಿವಾಲಯದ ಲಾಂಛನವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿರುವುದರಿಂದ, ಡಿಜಿಟಲ್ ಪರಿಕರಗಳನ್ನು ಬಳಸಿಕೊಂಡು ಪೋಸ್ಟ್‌ನಲ್ಲಿರುವಂತಹ ಡಾಕ್ಯುಮೆಂಟ್ ಅನ್ನು ಸುಲಭವಾಗಿ ರಚಿಸಬಹುದಾಗಿದೆ.

ಪ್ರಸ್ತುತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣದ ನಂತರ ಬಾಲಿವುಡ್‌ನಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ಚರ್ಚೆ ನಡೆಯುತ್ತಿರುವುದರಿಂದ, ನಟಿ ಶ್ರೀದೇವಿಯ ಸಾವಿಗೆ ಸಂಬಂಧಿಸಿದ ಪೋಸ್ಟ್‌ಗಳು ಕೂಡಾ ಮತ್ತೆ ಹರಿದಾಡುತ್ತಿದೆ. ಅಲ್ಲದೆ ವಿಭಿನ್ನವಾಗಿ ದಾರಿತಪ್ಪಿಸುವ ಪ್ರತಿಪಾದನೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಶ್ರೀದೇವಿಯವರ ಮರಣೋತ್ತರ ವರದಿಯು ನಿಜವಾದದ್ದಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ವಿಡಿಯೋ ನೋಡಿ:`ಗಾಂಧಿ-151′ ವೆಬಿನಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...