Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ

- Advertisement -
- Advertisement -

ನಟಿ ಶ್ರೀದೇವಿ ಅವರ ಮರಣೋತ್ತರ ವರದಿಯೆಂದು ಪ್ರತಿಪಾದಿಸಿ ವರದಿಯೊಂದರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವರದಿಯಲ್ಲಿ ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಹೇಳುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ಚಿತ್ರದ ಸತ್ಯಾಂಶವನ್ನು ಪರಿಶೀಲಿಸೋಣ.

ಇದರ ಆರ್ಕೈವ್ ಇಲ್ಲಿದೆ

ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಪ್ರತಿಪಾದನೆ: ನಟಿ ಶ್ರೀದೇವಿ ಅವರಿಗೆ ಬಲವಂತವಾಗಿ ಮಾದಕ ದ್ರವ್ಯ ಸೇವಿನೆ ಮಾಡಲಾಗಿತ್ತು. ಅವರ ಸಾವು ಸ್ವಾಭಾವಿಕವಲ್ಲ ಎಂದು ಹೇಳಿದ ಮರಣೋತ್ತರ ವರದಿ.

ಸತ್ಯ:  ನಟಿ ಶ್ರೀದೇವಿ ಪ್ರಜ್ಞೆ ಕಳೆದುಕೊಂಡು ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ದುಬೈ ಮೀಡಿಯಾ ಆಫಿಸ್ ಟ್ವೀಟ್ ಮಾಡಿ ದೃಡಪಡಿಸಿದೆ. ಸಂಬಂಧಿತ ದಾಖಲೆಗಳೊಂದಿಗೆ  ಹಲವಾರು ಸುದ್ದಿ ಸಂಸ್ಥೆಗಳು ಕೂಡಾ ಇದನ್ನೇ ದೃಡಪಟಿಸಿದೆ. ಇದಲ್ಲದೆ, ವೈರಲ್ ಡಾಕ್ಯುಮೆಂಟ್ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ಡಾಕ್ಯುಮೆಂಟ್ ಅಧಿಕೃತವಲ್ಲ ಎಂದು ಸ್ಪಷ್ಟಪಡಿಸುವ ಅನೇಕ ಕಾಗುಣಿತ ಮತ್ತು ವ್ಯಾಕರಣ ತಪ್ಪುಗಳನ್ನು ನಾವೇ ಕಂಡುಕೊಳ್ಳಬಹುದು. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಪೋಸ್ಟ್‌ನ ಪ್ರತಿಪಾದನೆ ತಪ್ಪಾಗಿದೆ.

‘‘Sridevi death UAE’ ಎಂಬ ಕೀವರ್ಡ್‌ ಮೂಲಕ ಗೂಗಲ್‌ನಲ್ಲಿ ಹುಡುಕಾಟ ನಡೆಸಿದರೆ ದುಬೈ ಮೀಡಿಯಾ ಆಫಿಸ್‌ ಎಂಬ ಅಧೀಕೃತ ಟ್ವೀಟ್ಟರ್‌ನಲ್ಲಿ ಇದರ ಮಾಹಿತಿಯನ್ನು ಪಡೆಯಬಹುದಾಗಿದೆ.  ಇದರಲ್ಲಿ ನಟಿಯು ಪ್ರಜ್ಞೆ ತಪ್ಪಿ, ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. ಈ ವರದಿಯಲ್ಲಿ ಯಾವುದೇ ಗಾಯಗಳ ಬಗ್ಗೆ ಉಲ್ಲೇಖವಿಲ್ಲ.

ಅಷ್ಟೇ ಅಲ್ಲದೆ, ಈ ಬಗ್ಗೆ ಇನ್ನಷ್ಟು ದಾಖಲೆ ಹುಡುಕಾಡಿದರೆ ನಟಿಯ ಸಾವಿಗೆ ಸಂಬಂಧಿಸಿದ ದಾಖಲೆಗಳನ್ನು ಪ್ರಕಟಿಸಿರುವ ಪತ್ರಿಕೆಯ ಲೇಖನವನ್ನು ಕಾಣಬಹುದಾಗಿದೆ. ಇದು ಆಕಸ್ಮಿಕವಾಗಿ ಮುಳುಗಿರುವುದು ಸಾವಿಗೆ ಕಾರಣ ಎಂದು ದಾಖಲೆ ಸಮೇತ ಖಚಿತಪಡಿಸುತ್ತದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ ವೈರಲ್ ವರದಿಯು ಯುಎಇ ಸರ್ಕಾರದ ಯಾವುದೆ ಅಧೀಕೃತ ಮೂಲದ್ದಲ್ಲ ಎಂದು ಸ್ವತಃ ನಾವೆ ಕಂಡುಕೊಳ್ಳಬಹುದು. ಈ ವೈರಲ್ ವರದಿಯನ್ನು  ಸೂಕ್ಷ್ಮವಾಗಿ ಗಮನಿಸಿದರೆ, ಇದು ಅಧಿಕೃತವಲ್ಲ ಎಂದು ಸ್ಪಷ್ಟವಾಗುವ ಅನೇಕ ಕಾಗುಣಿತ ಮತ್ತು ವ್ಯಾಕರಣದ ತಪ್ಪುಗಳನ್ನು ಕಾಣಬಹುದಾಗಿದೆ. ಯುಎಇ ಆರೋಗ್ಯ ಸಚಿವಾಲಯದ ಲಾಂಛನವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿರುವುದರಿಂದ, ಡಿಜಿಟಲ್ ಪರಿಕರಗಳನ್ನು ಬಳಸಿಕೊಂಡು ಪೋಸ್ಟ್‌ನಲ್ಲಿರುವಂತಹ ಡಾಕ್ಯುಮೆಂಟ್ ಅನ್ನು ಸುಲಭವಾಗಿ ರಚಿಸಬಹುದಾಗಿದೆ.

ಪ್ರಸ್ತುತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣದ ನಂತರ ಬಾಲಿವುಡ್‌ನಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ಚರ್ಚೆ ನಡೆಯುತ್ತಿರುವುದರಿಂದ, ನಟಿ ಶ್ರೀದೇವಿಯ ಸಾವಿಗೆ ಸಂಬಂಧಿಸಿದ ಪೋಸ್ಟ್‌ಗಳು ಕೂಡಾ ಮತ್ತೆ ಹರಿದಾಡುತ್ತಿದೆ. ಅಲ್ಲದೆ ವಿಭಿನ್ನವಾಗಿ ದಾರಿತಪ್ಪಿಸುವ ಪ್ರತಿಪಾದನೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಶ್ರೀದೇವಿಯವರ ಮರಣೋತ್ತರ ವರದಿಯು ನಿಜವಾದದ್ದಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ವಿಡಿಯೋ ನೋಡಿ:`ಗಾಂಧಿ-151′ ವೆಬಿನಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...