Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ

- Advertisement -
- Advertisement -

ನಟಿ ಶ್ರೀದೇವಿ ಅವರ ಮರಣೋತ್ತರ ವರದಿಯೆಂದು ಪ್ರತಿಪಾದಿಸಿ ವರದಿಯೊಂದರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವರದಿಯಲ್ಲಿ ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಹೇಳುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ಚಿತ್ರದ ಸತ್ಯಾಂಶವನ್ನು ಪರಿಶೀಲಿಸೋಣ.

ಇದರ ಆರ್ಕೈವ್ ಇಲ್ಲಿದೆ

ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಪ್ರತಿಪಾದನೆ: ನಟಿ ಶ್ರೀದೇವಿ ಅವರಿಗೆ ಬಲವಂತವಾಗಿ ಮಾದಕ ದ್ರವ್ಯ ಸೇವಿನೆ ಮಾಡಲಾಗಿತ್ತು. ಅವರ ಸಾವು ಸ್ವಾಭಾವಿಕವಲ್ಲ ಎಂದು ಹೇಳಿದ ಮರಣೋತ್ತರ ವರದಿ.

ಸತ್ಯ:  ನಟಿ ಶ್ರೀದೇವಿ ಪ್ರಜ್ಞೆ ಕಳೆದುಕೊಂಡು ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ದುಬೈ ಮೀಡಿಯಾ ಆಫಿಸ್ ಟ್ವೀಟ್ ಮಾಡಿ ದೃಡಪಡಿಸಿದೆ. ಸಂಬಂಧಿತ ದಾಖಲೆಗಳೊಂದಿಗೆ  ಹಲವಾರು ಸುದ್ದಿ ಸಂಸ್ಥೆಗಳು ಕೂಡಾ ಇದನ್ನೇ ದೃಡಪಟಿಸಿದೆ. ಇದಲ್ಲದೆ, ವೈರಲ್ ಡಾಕ್ಯುಮೆಂಟ್ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ಡಾಕ್ಯುಮೆಂಟ್ ಅಧಿಕೃತವಲ್ಲ ಎಂದು ಸ್ಪಷ್ಟಪಡಿಸುವ ಅನೇಕ ಕಾಗುಣಿತ ಮತ್ತು ವ್ಯಾಕರಣ ತಪ್ಪುಗಳನ್ನು ನಾವೇ ಕಂಡುಕೊಳ್ಳಬಹುದು. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಪೋಸ್ಟ್‌ನ ಪ್ರತಿಪಾದನೆ ತಪ್ಪಾಗಿದೆ.

‘‘Sridevi death UAE’ ಎಂಬ ಕೀವರ್ಡ್‌ ಮೂಲಕ ಗೂಗಲ್‌ನಲ್ಲಿ ಹುಡುಕಾಟ ನಡೆಸಿದರೆ ದುಬೈ ಮೀಡಿಯಾ ಆಫಿಸ್‌ ಎಂಬ ಅಧೀಕೃತ ಟ್ವೀಟ್ಟರ್‌ನಲ್ಲಿ ಇದರ ಮಾಹಿತಿಯನ್ನು ಪಡೆಯಬಹುದಾಗಿದೆ.  ಇದರಲ್ಲಿ ನಟಿಯು ಪ್ರಜ್ಞೆ ತಪ್ಪಿ, ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. ಈ ವರದಿಯಲ್ಲಿ ಯಾವುದೇ ಗಾಯಗಳ ಬಗ್ಗೆ ಉಲ್ಲೇಖವಿಲ್ಲ.

ಅಷ್ಟೇ ಅಲ್ಲದೆ, ಈ ಬಗ್ಗೆ ಇನ್ನಷ್ಟು ದಾಖಲೆ ಹುಡುಕಾಡಿದರೆ ನಟಿಯ ಸಾವಿಗೆ ಸಂಬಂಧಿಸಿದ ದಾಖಲೆಗಳನ್ನು ಪ್ರಕಟಿಸಿರುವ ಪತ್ರಿಕೆಯ ಲೇಖನವನ್ನು ಕಾಣಬಹುದಾಗಿದೆ. ಇದು ಆಕಸ್ಮಿಕವಾಗಿ ಮುಳುಗಿರುವುದು ಸಾವಿಗೆ ಕಾರಣ ಎಂದು ದಾಖಲೆ ಸಮೇತ ಖಚಿತಪಡಿಸುತ್ತದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ ವೈರಲ್ ವರದಿಯು ಯುಎಇ ಸರ್ಕಾರದ ಯಾವುದೆ ಅಧೀಕೃತ ಮೂಲದ್ದಲ್ಲ ಎಂದು ಸ್ವತಃ ನಾವೆ ಕಂಡುಕೊಳ್ಳಬಹುದು. ಈ ವೈರಲ್ ವರದಿಯನ್ನು  ಸೂಕ್ಷ್ಮವಾಗಿ ಗಮನಿಸಿದರೆ, ಇದು ಅಧಿಕೃತವಲ್ಲ ಎಂದು ಸ್ಪಷ್ಟವಾಗುವ ಅನೇಕ ಕಾಗುಣಿತ ಮತ್ತು ವ್ಯಾಕರಣದ ತಪ್ಪುಗಳನ್ನು ಕಾಣಬಹುದಾಗಿದೆ. ಯುಎಇ ಆರೋಗ್ಯ ಸಚಿವಾಲಯದ ಲಾಂಛನವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿರುವುದರಿಂದ, ಡಿಜಿಟಲ್ ಪರಿಕರಗಳನ್ನು ಬಳಸಿಕೊಂಡು ಪೋಸ್ಟ್‌ನಲ್ಲಿರುವಂತಹ ಡಾಕ್ಯುಮೆಂಟ್ ಅನ್ನು ಸುಲಭವಾಗಿ ರಚಿಸಬಹುದಾಗಿದೆ.

ಪ್ರಸ್ತುತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣದ ನಂತರ ಬಾಲಿವುಡ್‌ನಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ಚರ್ಚೆ ನಡೆಯುತ್ತಿರುವುದರಿಂದ, ನಟಿ ಶ್ರೀದೇವಿಯ ಸಾವಿಗೆ ಸಂಬಂಧಿಸಿದ ಪೋಸ್ಟ್‌ಗಳು ಕೂಡಾ ಮತ್ತೆ ಹರಿದಾಡುತ್ತಿದೆ. ಅಲ್ಲದೆ ವಿಭಿನ್ನವಾಗಿ ದಾರಿತಪ್ಪಿಸುವ ಪ್ರತಿಪಾದನೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಶ್ರೀದೇವಿಯವರ ಮರಣೋತ್ತರ ವರದಿಯು ನಿಜವಾದದ್ದಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ವಿಡಿಯೋ ನೋಡಿ:`ಗಾಂಧಿ-151′ ವೆಬಿನಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...