Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ

- Advertisement -
- Advertisement -

ನಟಿ ಶ್ರೀದೇವಿ ಅವರ ಮರಣೋತ್ತರ ವರದಿಯೆಂದು ಪ್ರತಿಪಾದಿಸಿ ವರದಿಯೊಂದರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವರದಿಯಲ್ಲಿ ನಟಿ ಶ್ರೀದೇವಿಗೆ ಬಲವಂತವಾಗಿ ಕೊಕೇನ್ ನೀಡಲಾಗಿತ್ತು, ಅವರ ದೇಹದಲ್ಲಿ ಮೂರು ಗಾಯಗಳಿತ್ತು ಜೊತೆಗೆ ಅವರ ಸಾವು ಸಹಜವಲ್ಲ ಎಂದು ಹೇಳುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ಚಿತ್ರದ ಸತ್ಯಾಂಶವನ್ನು ಪರಿಶೀಲಿಸೋಣ.

ಇದರ ಆರ್ಕೈವ್ ಇಲ್ಲಿದೆ

ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಪ್ರತಿಪಾದನೆ: ನಟಿ ಶ್ರೀದೇವಿ ಅವರಿಗೆ ಬಲವಂತವಾಗಿ ಮಾದಕ ದ್ರವ್ಯ ಸೇವಿನೆ ಮಾಡಲಾಗಿತ್ತು. ಅವರ ಸಾವು ಸ್ವಾಭಾವಿಕವಲ್ಲ ಎಂದು ಹೇಳಿದ ಮರಣೋತ್ತರ ವರದಿ.

ಸತ್ಯ:  ನಟಿ ಶ್ರೀದೇವಿ ಪ್ರಜ್ಞೆ ಕಳೆದುಕೊಂಡು ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ದುಬೈ ಮೀಡಿಯಾ ಆಫಿಸ್ ಟ್ವೀಟ್ ಮಾಡಿ ದೃಡಪಡಿಸಿದೆ. ಸಂಬಂಧಿತ ದಾಖಲೆಗಳೊಂದಿಗೆ  ಹಲವಾರು ಸುದ್ದಿ ಸಂಸ್ಥೆಗಳು ಕೂಡಾ ಇದನ್ನೇ ದೃಡಪಟಿಸಿದೆ. ಇದಲ್ಲದೆ, ವೈರಲ್ ಡಾಕ್ಯುಮೆಂಟ್ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ಡಾಕ್ಯುಮೆಂಟ್ ಅಧಿಕೃತವಲ್ಲ ಎಂದು ಸ್ಪಷ್ಟಪಡಿಸುವ ಅನೇಕ ಕಾಗುಣಿತ ಮತ್ತು ವ್ಯಾಕರಣ ತಪ್ಪುಗಳನ್ನು ನಾವೇ ಕಂಡುಕೊಳ್ಳಬಹುದು. ಆದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಪೋಸ್ಟ್‌ನ ಪ್ರತಿಪಾದನೆ ತಪ್ಪಾಗಿದೆ.

‘‘Sridevi death UAE’ ಎಂಬ ಕೀವರ್ಡ್‌ ಮೂಲಕ ಗೂಗಲ್‌ನಲ್ಲಿ ಹುಡುಕಾಟ ನಡೆಸಿದರೆ ದುಬೈ ಮೀಡಿಯಾ ಆಫಿಸ್‌ ಎಂಬ ಅಧೀಕೃತ ಟ್ವೀಟ್ಟರ್‌ನಲ್ಲಿ ಇದರ ಮಾಹಿತಿಯನ್ನು ಪಡೆಯಬಹುದಾಗಿದೆ.  ಇದರಲ್ಲಿ ನಟಿಯು ಪ್ರಜ್ಞೆ ತಪ್ಪಿ, ನಂತರ ಸ್ನಾನದತೊಟ್ಟಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. ಈ ವರದಿಯಲ್ಲಿ ಯಾವುದೇ ಗಾಯಗಳ ಬಗ್ಗೆ ಉಲ್ಲೇಖವಿಲ್ಲ.

ಅಷ್ಟೇ ಅಲ್ಲದೆ, ಈ ಬಗ್ಗೆ ಇನ್ನಷ್ಟು ದಾಖಲೆ ಹುಡುಕಾಡಿದರೆ ನಟಿಯ ಸಾವಿಗೆ ಸಂಬಂಧಿಸಿದ ದಾಖಲೆಗಳನ್ನು ಪ್ರಕಟಿಸಿರುವ ಪತ್ರಿಕೆಯ ಲೇಖನವನ್ನು ಕಾಣಬಹುದಾಗಿದೆ. ಇದು ಆಕಸ್ಮಿಕವಾಗಿ ಮುಳುಗಿರುವುದು ಸಾವಿಗೆ ಕಾರಣ ಎಂದು ದಾಖಲೆ ಸಮೇತ ಖಚಿತಪಡಿಸುತ್ತದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ ವೈರಲ್ ವರದಿಯು ಯುಎಇ ಸರ್ಕಾರದ ಯಾವುದೆ ಅಧೀಕೃತ ಮೂಲದ್ದಲ್ಲ ಎಂದು ಸ್ವತಃ ನಾವೆ ಕಂಡುಕೊಳ್ಳಬಹುದು. ಈ ವೈರಲ್ ವರದಿಯನ್ನು  ಸೂಕ್ಷ್ಮವಾಗಿ ಗಮನಿಸಿದರೆ, ಇದು ಅಧಿಕೃತವಲ್ಲ ಎಂದು ಸ್ಪಷ್ಟವಾಗುವ ಅನೇಕ ಕಾಗುಣಿತ ಮತ್ತು ವ್ಯಾಕರಣದ ತಪ್ಪುಗಳನ್ನು ಕಾಣಬಹುದಾಗಿದೆ. ಯುಎಇ ಆರೋಗ್ಯ ಸಚಿವಾಲಯದ ಲಾಂಛನವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿರುವುದರಿಂದ, ಡಿಜಿಟಲ್ ಪರಿಕರಗಳನ್ನು ಬಳಸಿಕೊಂಡು ಪೋಸ್ಟ್‌ನಲ್ಲಿರುವಂತಹ ಡಾಕ್ಯುಮೆಂಟ್ ಅನ್ನು ಸುಲಭವಾಗಿ ರಚಿಸಬಹುದಾಗಿದೆ.

ಪ್ರಸ್ತುತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣದ ನಂತರ ಬಾಲಿವುಡ್‌ನಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ಚರ್ಚೆ ನಡೆಯುತ್ತಿರುವುದರಿಂದ, ನಟಿ ಶ್ರೀದೇವಿಯ ಸಾವಿಗೆ ಸಂಬಂಧಿಸಿದ ಪೋಸ್ಟ್‌ಗಳು ಕೂಡಾ ಮತ್ತೆ ಹರಿದಾಡುತ್ತಿದೆ. ಅಲ್ಲದೆ ವಿಭಿನ್ನವಾಗಿ ದಾರಿತಪ್ಪಿಸುವ ಪ್ರತಿಪಾದನೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಶ್ರೀದೇವಿಯವರ ಮರಣೋತ್ತರ ವರದಿಯು ನಿಜವಾದದ್ದಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ವಿಡಿಯೋ ನೋಡಿ:`ಗಾಂಧಿ-151′ ವೆಬಿನಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...