Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

- Advertisement -
- Advertisement -

ಇತ್ತೀಚೆಗೆ ಬಿಜೆಪಿ ಬೆಂಬಲಿತ ಸಂಘಟನೆಗಳು ರಾಜ್ಯದಲ್ಲಿ ತೀವ್ರ ರೀತಿಯ ‘ಇಸ್ಲಾಮೊಫೊಬಿಯಾ’ ಹರಡುತ್ತಿವೆ. ಯಾವುದೆ ರೀತಿಯಲ್ಲೂ ಯಾರಿಗೂ ತೊಂದರೆ ಮಾಡದ ಮುಸ್ಲಿಮರ ಆಚರಣೆ ಮತ್ತು ಸಂಪ್ರದಾಯಗಳನ್ನು ಈ ಸಂಘಟನೆಗಳು ‘ಅಪರಾಧಿಕರಣ’ ಮಾಡುತ್ತಿವೆ. ಈ ಮೂಲಕ ಜನರ ನಡುವೆ ಮುಸ್ಲಿಂ ದ್ವೇಷ, ಅಪನಂಬಿಕೆ ಹರಡುವಂತೆ ಮಾಡಿ, ಸಮಾಜದಲ್ಲಿ ಒಡಕುಂಟು ಮಾಡುತ್ತಿವೆ. ರಾಜ್ಯದ ಬಿಜೆಪಿ ಸರ್ಕಾರ ಇದಕ್ಕೆ ನೇರವಾಗಿಯೆ ಬೆಂಬಲಿಸುತ್ತಿದೆ ಎಂಬುವುದು ಅಪಾಯಕಾರಿಯಾದ ಸಂಗತಿಯಾಗಿದೆ.

ಇದೀಗ ಹೊಸದಾಗಿ ‘ಹಲಾಲ್’ ವಿಚಾರವನ್ನು ಸಂಘಪರಿವಾರ ವಿವಾದವನ್ನಾಗಿ ಮಾಡಿದ್ದು, ಹಲವಾರು ಸುಳ್ಳುಗಳನ್ನು ‘ವೈಜ್ಞಾನಿಕ ಆಧಾರವಿದೆ’ ಎಂದು ಬಿಂಬಿಸಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಮತ್ತು ಬಜರಂಗದಳದ ಪೋಸ್ಟರ್‌ ಒಂದು ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ವೈರಲ್ ಪೋಸ್ಟರ್‌ನಲ್ಲಿ, “ಮುಸ್ಲಿಮರ ಅಂಗಡಿಯಿಂದ ಹಲಾಲ್ ಮಾಡಿರುವ ಮಾಂಸವನ್ನು ಖರೀದಿ ಮಾಡಬೇಡಿ. ಹಲಾಲ್ ಎಂದರೆ ಅಲ್ಲಾಹನ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಮಾಂಸ ವಿತರಣೆ ಮಾಡುವುದು. ಹಲಾಲ್‌‌‌ ಮಾಡುವ ಸಂದರ್ಭದಲ್ಲಿ ವಧೆಯಾಗುವ ಪ್ರಾಣಿಯ ಕತ್ತಿನ ಭಾಗ ಸೀಳಿ ಹಾಗೇ ಬಿಡುತ್ತಾರೆ”

“ಆಗ ಆ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ಕೆಲವು ವಿಷಕಾರಿ ಅಂಶಗಳು ಬಿಡುಗಡೆಯಾಗಿ ಪ್ರಾಣಿಯ ದೇಹದ ಎಲ್ಲಾ ಭಾಗಗಳಿಗೆ ಹರಡಿ ಮಾಂಸವು ವಿಷಯುಕ್ತವಾಗುತ್ತದೆ. ಇದರ ನಿರಂತರ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಇದು ವೈಜ್ಞಾನಿಕವಾಗಿ ನಿರೂಪಿತವಾಗಿರುವ ಸತ್ಯ. ಅವೈಜ್ಞಾನಿಕ ವಿಧಾನವಾದ ಹಲಾಲ್‌ ಮಾಡಿದ ಮಾಂಸ ಖರೀದಿಸುವುದರ ಬದಲು, ನಮ್ಮ ಹಿಂದು ಬಾಂಧವರು ಮಾಡುವ ‘ಜಟ್ಕಾಕಟ್‌’ ವಿಧಾನ ವೈೆಜ್ಞಾನಿಕವಾಗಿದೆ” ಎಂದು ಬಜರಂಗದಳದ ಪೋಸ್ಟರ್‌ ಹರಿದಾಡುತ್ತಿದೆ.

ಬಿಜೆಪಿ ಬೆಂಬಲಿತ ಸಂಘಟನೆಯ ಈ ಪೋಸ್ಟರ್‌ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಬಜರಂದಳ ಮತ್ತು ವಿಎಚ್‌ಪಿ

ವಾಸ್ತವದಲ್ಲಿ ಬಜರಂಗದಳ ಎಂಬ ಸಂಘಟನೆಯು ಬಿಜೆಪಿ ಪರ ಕೆಲಸ ಮಾಡುತ್ತಿರುವ ಸಂಘಟನೆಯಾಗಿದೆ. ಈ ಸಂಘಟನೆಯಲ್ಲಿ ಹೆಚ್ಚಿನ ಸಂಖ್ಯೆಯ ದಲಿತ ಮತ್ತು ಹಿಂದುಳಿದ ಸಮುದಾಯದ ಯುವಕರು ತುಂಬಿಕೊಂಡಿದ್ದು, ಮತೀಯ ಗಲಭೆಗಳಲ್ಲಿ ಭಾಗಿಯಾಗಿ ಬಲಿಪಶುಗಳಾಗಿರುವುದು ಚರ್ಚಿತ ವಿಷಯ. ಈ ಸಂಘಟನೆಗೆ ಸವರ್ಣೀಯರ ನಾಯಕತ್ವ ಇರುವ ಸಂಘಟನೆಯಾದ ವಿಎಚ್‌ಪಿ ಮಾರ್ಗದರ್ಶನ ನೀಡುತ್ತದೆ.

ಸಾಮಾನ್ಯವಾಗಿ ಈ ಸಂಘಟನೆಯನ್ನು ಬಿಜೆಪಿ ಸಮಾಜದಲ್ಲಿ ಅಶಾಂತಿ ಮೂಡಿಸುವಲ್ಲಿ ಮತ್ತು ಸಮಾಜದ ನಡುವೆ ಅಪನಂಬಿಕೆ, ದ್ವೇಷ ಹರಡಲು ಬಳಸಿಕೊಳ್ಳುತ್ತಲೆ ಬಂದಿದೆ. ಈ ಸಂಘಟನೆಯ ಹೆಸರಿನಲ್ಲಿ ಇದೀಗ ಹರಡುತ್ತಿರುವ ಪೋಸ್ಟರ್‌ ಸಂಪೂರ್ಣವಾಗಿ ಮುಸ್ಲಿಮರ ವಿರುದ್ದ ದ್ವೇಷ ಮತ್ತು ಅಪನಂಬಿಕೆ ಹರಡಬೇಕೆಂದೆ ರೂಪಿಸಲಾಗಿದೆ.

ಹಲಾಲ್ ಎಂದರೇನು?

ವಾಸ್ತವದಲ್ಲಿ ‘ಹಲಾಲ್‌‌’ ಎಂಬುವುದು ಮಾಂಸಕ್ಕೆ ಬಳಸುವ ಪ್ರಾಣಿಗಳನ್ನು ಕೊಲ್ಲುವ ವಿಧಾನಕ್ಕೆ ಇರುವ ಹೆಸರೇ ಅಲ್ಲ. ‘ಹಲಾಲ್‌’ ಎಂಬುದು ಅರೇಬಿಕ್ ಪದವಾಗಿದ್ದು, ಇದನ್ನು ‘ಸಮ್ಮತ’ ಎಂಬುವುದಾಗಿ ಸರಳವಾಗಿ ಅರ್ಥೈಸಬಹುದಾಗಿದೆ. ಆದರೆ, ಮಾಂಸಕ್ಕಾಗಿ ಪ್ರಾಣಿಯನ್ನು ಕೊಯ್ಯುವ ವಿಧಾನವೊಂದನ್ನಷ್ಟೆ ಹಲಾಲ್‌ ಎಂದು ಬಹುತೇಕರು ಅರ್ಥೈಸಿಕೊಂಡಿದ್ದಾರೆ.

ವಾಸ್ತವದಲ್ಲಿ ಪ್ರಾಣಿಯನ್ನು ಕೊಲ್ಲುವ ಇಸ್ಲಾಮಿ ವಿಧಾನಕ್ಕೆ ‘ದ್ಸಬಹ್’ ಎಂದು ಕರೆಯುತ್ತಾರೆ. ಮಾಂಸದ ಪ್ರಾಣಿಯ ಕತ್ತಿನ ಮುಂಭಾಗಕ್ಕೆ ಹರಿತವಾದ ಚೂರಿಯಿಂದ, ಮುಖ್ಯ ರಕ್ತನಾಳ, ಶ್ವಾಸ ನಾಳ ಮತ್ತು ಅನ್ನ ನಾಳವನ್ನು ಕೊಯ್ಯುವುದಾಗಿದೆ ದ್ಸಬಹ್. ಈ ವೇಳೆ ಪ್ರಾಣಿಯ ಬೆನ್ನುಹುರಿಯನ್ನು ಕತ್ತರಿಸಬಾರದು. (ಹಲಾಲ್‌ ಮತ್ತು ಹರಾಂ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ಫ್ಯಾಕ್ಟ್‌ಚೆಕ್‌: ಪೋಸ್ಟರ್‌‌ನಲ್ಲಿರುವ ಮಾಹಿತಿ ನಿಜವೇ?

ಪೋಸ್ಟರ್‌ ಮುಖ್ಯವಾಗಿ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬೇಡಿ ಎಂದು ಹೇಳುತ್ತದೆ. ಇದು ಸಮಾಜದಲ್ಲಿ ಮುಸ್ಲಿಮರ ವಿರುದ್ದ ದ್ವೇಷ ಹರಡುವ ಬಜರಂಗದಳದ ಎಂದಿನ ಕಾರ್ಯಸೂಚಿಯಾಗಿದೆ. ಉಳಿದಂತೆ ಅದು, ಯಾಕೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂಬುದಕ್ಕೆ ಹಲವು ಕಾರಣಗಳನ್ನು ನೀಡುತ್ತದೆ. ಅವುಗಳನ್ನು ಮುಖ್ಯವಾಗಿ ಕೆಳಗಿನಂತೆ ಪಟ್ಟಿ ಮಾಡಬಹುದು.

  • ಹಲಾಲ್ ಎಂದರೆ ಅಲ್ಲಾಹನ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಮಾಂಸ ವಿತರಣೆ ಮಾಡುವುದು.

ಈ ವಾದಕ್ಕೆ ಯಾವುದೆ ಹುರುಳಿಲ್ಲ. ಹಿಂದೂಗಳು ದೇವರಿಗೆ ನೈವೇದ್ಯ ಅರ್ಪಿಸುಂತೆ, ಮುಸ್ಲಿಮರು ಅಲ್ಲಾಹುವಿಗೆ ನೈವೇದ್ಯ ಅರ್ಪಿಸುವ ಆಚರಣೆಯನ್ನು ಮಾಡುವುದಿಲ್ಲ. ಅದಾಗ್ಯೂ ಮುಸ್ಲಿಮರು ಪ್ರಾಣಿಯನ್ನು ಕೊಲ್ಲುವಾಗ ‘ಬಿಸ್ಮಿಲ್ಲಾಹಿ-ರ್‍ರಹ್ಮಾನಿ-ರ್‍ರಹೀಂ’ ಎಂದು ಹೇಳುತ್ತಾರೆ. ಇದು ಯಾವುದೆ ‘ಅಪರಾಧಿ’ ಮಂತ್ರವಲ್ಲ. ಇದು ಕೇವಲ ತಾನು ನಂಬಿದ ದೇವರನ್ನು ನೆನೆಯುವುದಾಗಿದೆ.

ಇದನ್ನು ಮಸ್ಲಿಮರು ಕೇವಲ ಪ್ರಾಣಿಯನ್ನು ಕೊಯ್ಯುವಾಗ ಮಾತ್ರ ಹೇಳುವುದಲ್ಲ. ಮುಸ್ಲಿಮರು ತಿನ್ನಲಾರಂಭಿಸುವಾಗ, ಕುಡಿಯಲಾರಂಭಿಸುವಾಗ, ಮನೆಯಿಂದ ಹೊರಗೆ ಕಾಲಿಡುವಾಗ, ಮನೆಯೊಳಕ್ಕೆ ಪ್ರವೇಶಿಸುವಾಗ, ವಾಹನವೇರುವಾಗ, ವ್ಯಾಪಾರ ಆರಂಭಿಸುವಾಗ, ಯಾರಿಗಾದರೂ ಏನನ್ನಾದರೂ ಕೊಡುವಾಗ, ದುಡಿಮೆ ಆರಂಭಿಸುವಾಗ ಹೀಗೆ ಎಲ್ಲಾ ಕಾರ್ಯಗಳ ಆರಂಭದಲ್ಲೂ ಅಲ್ಲಾಹುವಿನ ನಾಮ ಉಚ್ಚರಿಸುತ್ತಾರೆ.

ತಾನು ನಂಬಿದ ದೇವನನ್ನು ನೆನೆದು ಕೆಲಸ ಪ್ರಾರಂಭ ಮಾಡುವುದು ಯಾರಿಗೂ ತೊಂದರೆ ಮಾಡುವುದಿಲ್ಲ. ಇದನ್ನು ಎಲ್ಲಾ ನಂಬಿಕೆಯ ಜನರು ಮಾಡುತ್ತಾರೆ. ಆದರೆ ಬಜರಂಗದಳ ಇದನ್ನು ‘ಅಪರಾಧ’ ಎಂಬಂತೆ ಬಿಂಬಿಸುತ್ತದೆ. ಇದು ದ್ವೇಷ ಹರಡುವ ತಂತ್ರವೆ ಹೊರತು ಬೇರೇನಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

  • ಹಲಾಲ್‌‌‌‌ ಮಾಡುವ ಸಂದರ್ಭದಲ್ಲಿ ವಧೆಯಾಗುವ ಪ್ರಾಣಿಯ ಕತ್ತಿನ ಭಾಗ ಸೀಳಿ ಹಾಗೇ ಬಿಡುತ್ತಾರೆ. ಆಗ ಆ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ಕೆಲವು ವಿಷಕಾರಿ ಅಂಶಗಳು ಬಿಡುಗಡೆಯಾಗಿ ಪ್ರಾಣಿಯ ದೇಹದ ಎಲ್ಲಾ ಭಾಗಗಳಿಗೆ ಹರಡಿ ಮಾಂಸವು ವಿಷಯುಕ್ತವಾಗುತ್ತದೆ.

ಈ ವಾದಗಳು ಕೂಡಾ ಸುಳ್ಳಾಗಿದ್ದು, ಇದಕ್ಕೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಆಹಾರ ತಜ್ಞ ಕೆ.ಸಿ. ರಘು, “ಮುಸ್ಲಿಮರು ಆಹಾರಕ್ಕಾಗಿ ಪ್ರಾಣಿಗಳನ್ನು ಕೊಲ್ಲುವ ವಿಧಾನದಿಂದ ಯಾವುದೆ ರೀತಿಯಲ್ಲಿ ಅಪಾಯವಿಲ್ಲ. ಮೆದುಳಿನ ಗ್ರಂಥಿಯಿಂದ ವಿಷಕಾರಿ ಅಂಶಗಳು ಬಿಡುಗಡೆಯಾಗುತ್ತದೆ ಎಂಬ ವಿಚಾರ ಸುಳ್ಳಾಗಿದ್ದು, ಇದಕ್ಕೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ” ಎಂದು ಹೇಳಿದ್ದಾರೆ.

‘‘ಪ್ರಾಣಿಗಳ ಮಾಂಸಗಳಲ್ಲಿ ವಿಷ ಇರುವುದು ಅವುಗಳಿಗೆ ಕೊಡುವ ಮೇವು ಮತ್ತು ಅವುಗಳನ್ನು ಸಾಕುವ ವಿಧಾನದಿಂದಾಗಿದೆ. ಅವುಗಳು ತಿನ್ನುವ ಆಹಾರದಲ್ಲಿ ವಿಷ ಇರುವುದರಿಂದ ಅವುಗಳ ಮಾಂಸವು ವಿಷಕಾರಿಯಾಗುತ್ತದೆ ಹೊರತು, ಕೊಂದ ನಂತರ ಅಲ್ಲ. ಪ್ರಾಣಿಯನ್ನು ಮಾಂಸಕ್ಕಾಗಿ ಕೊಲ್ಲುವಾಗ ಆದಷ್ಟು ಬೇಗನೆ ಪ್ರಾಣ ಹೋಗುವಂತೆ ಕೊಂದರೆ ಆರೋಗ್ಯಕ್ಕೆ ಒಳ್ಳೆಯದು. ಹಾಗೆ ನೋಡಿದರೆ ಮುಸ್ಲಿಮರು ಮಾಂಸಕ್ಕಾಗಿ ಕೊಯ್ಯುವಾಗ ಪ್ರಾಣಿಗಳ ಜೀವ ಬೇಗನೇ ಹಾರಿ ಹೋಗುತ್ತದೆ” ಎಂದು ಹೇಳಿದ್ದಾರೆ. 

  • ಹಲಾಲ್‌ ಮಾಡಿದ ಮಾಂಸದ ನಿರಂತರ ಸೇವನೆಯಿಂದ ಆರೋಗ್ಯದಲ್ಲಿ ಏರು ಪೇರಾಗುತ್ತದೆ ಮತ್ತು ಹಲಾಲ್‌ ಮಾಡಿರುವ ಮಾಂಸವು ವಿಷಯುಕ್ತವಾಗುತ್ತದೆ ಎಂಬುವುದು ವೈಜ್ಞಾನಿಕವಾಗಿ ನಿರೂಪಿತವಾಗಿರುವ ಸತ್ಯ.
  • ಹಲಾಲ್‌ ಮಾಡುವುದು ಅವೈಜ್ಞಾನಿಕ. ಹಿಂದೂಗಳು ಮಾಡುವ ‘ಜಟ್ಕಾಕಟ್‌’ ವಿಧಾನ ವೈೆಜ್ಞಾನಿಕವಾಗಿದೆ. 

ಬಜರಂಗದಳದ ಈ ಎರಡು ವಾದಕ್ಕೂ ಯಾವುದೆ ಹುರುಳಿಲ್ಲ. ಆರೋಗ್ಯದಲ್ಲಿ ಏರು ಪೇರಾಗುವುದು ಮಾಂಸದ ಗುಣಮಟ್ಟದಲ್ಲಿ ಆಗಿರುವುದರಿಂದ, ಮುಸ್ಲಿಮರು ಮಾಂಸಕ್ಕಾಗಿ ಪ್ರಾಣಿಗಳನ್ನು ಕೊಲ್ಲುವ ರೀತಿಯಿಂದಲ್ಲ. 

ಕೆ.ಸಿ. ರಘು ಅವರು, “ಪ್ರಾಣಿಗೆ ಕೊಡುವ ರಾಸಾಯನಿಕ ಭರಿತ ಆಹಾರದಿಂದಾಗಿ ಅದರ ಮಾಂಸದಲ್ಲಿ ವಿಷ ಇರಬಹುದೆ ಹೊರತು, ಪ್ರಾಣಿಯನ್ನು ಯಾವುದೇ ರೀತಿಯಲ್ಲಿ ಕೊಂದರೂ ಅದರ ಮಾಂಸದಲ್ಲಿ ವಿಷ ಹರಡುವುದಿಲ್ಲ. ಇವೆಲ್ಲಾ ಸುಳ್ಳಾಗಿದ್ದು, ಯಾವುದೆ ವೈಜ್ಞಾನಿಕ ಆಧಾರ ಇಲ್ಲ” ಎಂದು ಹೇಳುತ್ತಾರೆ.

ಒಟ್ಟಿನಲ್ಲಿ, ಬಜರಂಗದಳದ ಈ ವೈರಲ್ ಪೋಸ್ಟ್‌ ಸುಳ್ಳುಗಳಿಂದಲೇ ಕೂಡಿರುವ ಮತ್ತು ಸಮಾಜದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಹರಡಲೆಂದೆ ಮಾಡಿರುವ ಪೋಸ್ಟರ್‌ ಆಗಿದೆ. ಬಜರಂಗದಳ ಪೋಸ್ಟರ್‌ನಲ್ಲಿ ನೀಡಿರುವ ಮಾಹಿತಿಗೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ ಎಂಬುದು ಆಹಾರ ತಜ್ಞರ ಮಾತಿನಿಂದ ಸಾಬೀತಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಜರಂಗ ದಳ ಮಾಡುವದು ವಳೆಯ. ಭಜರಂಗ ದಳದವರು ಏನೇ ನಿರ್ಧಾರ ತೆಗೆದುಕೊಂಡರು ಅದು ಸರಿಯಾಗಿ ಇರುತ್ತೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....