Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

- Advertisement -
- Advertisement -

ಇತ್ತೀಚೆಗೆ ಬಿಜೆಪಿ ಬೆಂಬಲಿತ ಸಂಘಟನೆಗಳು ರಾಜ್ಯದಲ್ಲಿ ತೀವ್ರ ರೀತಿಯ ‘ಇಸ್ಲಾಮೊಫೊಬಿಯಾ’ ಹರಡುತ್ತಿವೆ. ಯಾವುದೆ ರೀತಿಯಲ್ಲೂ ಯಾರಿಗೂ ತೊಂದರೆ ಮಾಡದ ಮುಸ್ಲಿಮರ ಆಚರಣೆ ಮತ್ತು ಸಂಪ್ರದಾಯಗಳನ್ನು ಈ ಸಂಘಟನೆಗಳು ‘ಅಪರಾಧಿಕರಣ’ ಮಾಡುತ್ತಿವೆ. ಈ ಮೂಲಕ ಜನರ ನಡುವೆ ಮುಸ್ಲಿಂ ದ್ವೇಷ, ಅಪನಂಬಿಕೆ ಹರಡುವಂತೆ ಮಾಡಿ, ಸಮಾಜದಲ್ಲಿ ಒಡಕುಂಟು ಮಾಡುತ್ತಿವೆ. ರಾಜ್ಯದ ಬಿಜೆಪಿ ಸರ್ಕಾರ ಇದಕ್ಕೆ ನೇರವಾಗಿಯೆ ಬೆಂಬಲಿಸುತ್ತಿದೆ ಎಂಬುವುದು ಅಪಾಯಕಾರಿಯಾದ ಸಂಗತಿಯಾಗಿದೆ.

ಇದೀಗ ಹೊಸದಾಗಿ ‘ಹಲಾಲ್’ ವಿಚಾರವನ್ನು ಸಂಘಪರಿವಾರ ವಿವಾದವನ್ನಾಗಿ ಮಾಡಿದ್ದು, ಹಲವಾರು ಸುಳ್ಳುಗಳನ್ನು ‘ವೈಜ್ಞಾನಿಕ ಆಧಾರವಿದೆ’ ಎಂದು ಬಿಂಬಿಸಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಮತ್ತು ಬಜರಂಗದಳದ ಪೋಸ್ಟರ್‌ ಒಂದು ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ವೈರಲ್ ಪೋಸ್ಟರ್‌ನಲ್ಲಿ, “ಮುಸ್ಲಿಮರ ಅಂಗಡಿಯಿಂದ ಹಲಾಲ್ ಮಾಡಿರುವ ಮಾಂಸವನ್ನು ಖರೀದಿ ಮಾಡಬೇಡಿ. ಹಲಾಲ್ ಎಂದರೆ ಅಲ್ಲಾಹನ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಮಾಂಸ ವಿತರಣೆ ಮಾಡುವುದು. ಹಲಾಲ್‌‌‌ ಮಾಡುವ ಸಂದರ್ಭದಲ್ಲಿ ವಧೆಯಾಗುವ ಪ್ರಾಣಿಯ ಕತ್ತಿನ ಭಾಗ ಸೀಳಿ ಹಾಗೇ ಬಿಡುತ್ತಾರೆ”

“ಆಗ ಆ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ಕೆಲವು ವಿಷಕಾರಿ ಅಂಶಗಳು ಬಿಡುಗಡೆಯಾಗಿ ಪ್ರಾಣಿಯ ದೇಹದ ಎಲ್ಲಾ ಭಾಗಗಳಿಗೆ ಹರಡಿ ಮಾಂಸವು ವಿಷಯುಕ್ತವಾಗುತ್ತದೆ. ಇದರ ನಿರಂತರ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಇದು ವೈಜ್ಞಾನಿಕವಾಗಿ ನಿರೂಪಿತವಾಗಿರುವ ಸತ್ಯ. ಅವೈಜ್ಞಾನಿಕ ವಿಧಾನವಾದ ಹಲಾಲ್‌ ಮಾಡಿದ ಮಾಂಸ ಖರೀದಿಸುವುದರ ಬದಲು, ನಮ್ಮ ಹಿಂದು ಬಾಂಧವರು ಮಾಡುವ ‘ಜಟ್ಕಾಕಟ್‌’ ವಿಧಾನ ವೈೆಜ್ಞಾನಿಕವಾಗಿದೆ” ಎಂದು ಬಜರಂಗದಳದ ಪೋಸ್ಟರ್‌ ಹರಿದಾಡುತ್ತಿದೆ.

ಬಿಜೆಪಿ ಬೆಂಬಲಿತ ಸಂಘಟನೆಯ ಈ ಪೋಸ್ಟರ್‌ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಬಜರಂದಳ ಮತ್ತು ವಿಎಚ್‌ಪಿ

ವಾಸ್ತವದಲ್ಲಿ ಬಜರಂಗದಳ ಎಂಬ ಸಂಘಟನೆಯು ಬಿಜೆಪಿ ಪರ ಕೆಲಸ ಮಾಡುತ್ತಿರುವ ಸಂಘಟನೆಯಾಗಿದೆ. ಈ ಸಂಘಟನೆಯಲ್ಲಿ ಹೆಚ್ಚಿನ ಸಂಖ್ಯೆಯ ದಲಿತ ಮತ್ತು ಹಿಂದುಳಿದ ಸಮುದಾಯದ ಯುವಕರು ತುಂಬಿಕೊಂಡಿದ್ದು, ಮತೀಯ ಗಲಭೆಗಳಲ್ಲಿ ಭಾಗಿಯಾಗಿ ಬಲಿಪಶುಗಳಾಗಿರುವುದು ಚರ್ಚಿತ ವಿಷಯ. ಈ ಸಂಘಟನೆಗೆ ಸವರ್ಣೀಯರ ನಾಯಕತ್ವ ಇರುವ ಸಂಘಟನೆಯಾದ ವಿಎಚ್‌ಪಿ ಮಾರ್ಗದರ್ಶನ ನೀಡುತ್ತದೆ.

ಸಾಮಾನ್ಯವಾಗಿ ಈ ಸಂಘಟನೆಯನ್ನು ಬಿಜೆಪಿ ಸಮಾಜದಲ್ಲಿ ಅಶಾಂತಿ ಮೂಡಿಸುವಲ್ಲಿ ಮತ್ತು ಸಮಾಜದ ನಡುವೆ ಅಪನಂಬಿಕೆ, ದ್ವೇಷ ಹರಡಲು ಬಳಸಿಕೊಳ್ಳುತ್ತಲೆ ಬಂದಿದೆ. ಈ ಸಂಘಟನೆಯ ಹೆಸರಿನಲ್ಲಿ ಇದೀಗ ಹರಡುತ್ತಿರುವ ಪೋಸ್ಟರ್‌ ಸಂಪೂರ್ಣವಾಗಿ ಮುಸ್ಲಿಮರ ವಿರುದ್ದ ದ್ವೇಷ ಮತ್ತು ಅಪನಂಬಿಕೆ ಹರಡಬೇಕೆಂದೆ ರೂಪಿಸಲಾಗಿದೆ.

ಹಲಾಲ್ ಎಂದರೇನು?

ವಾಸ್ತವದಲ್ಲಿ ‘ಹಲಾಲ್‌‌’ ಎಂಬುವುದು ಮಾಂಸಕ್ಕೆ ಬಳಸುವ ಪ್ರಾಣಿಗಳನ್ನು ಕೊಲ್ಲುವ ವಿಧಾನಕ್ಕೆ ಇರುವ ಹೆಸರೇ ಅಲ್ಲ. ‘ಹಲಾಲ್‌’ ಎಂಬುದು ಅರೇಬಿಕ್ ಪದವಾಗಿದ್ದು, ಇದನ್ನು ‘ಸಮ್ಮತ’ ಎಂಬುವುದಾಗಿ ಸರಳವಾಗಿ ಅರ್ಥೈಸಬಹುದಾಗಿದೆ. ಆದರೆ, ಮಾಂಸಕ್ಕಾಗಿ ಪ್ರಾಣಿಯನ್ನು ಕೊಯ್ಯುವ ವಿಧಾನವೊಂದನ್ನಷ್ಟೆ ಹಲಾಲ್‌ ಎಂದು ಬಹುತೇಕರು ಅರ್ಥೈಸಿಕೊಂಡಿದ್ದಾರೆ.

ವಾಸ್ತವದಲ್ಲಿ ಪ್ರಾಣಿಯನ್ನು ಕೊಲ್ಲುವ ಇಸ್ಲಾಮಿ ವಿಧಾನಕ್ಕೆ ‘ದ್ಸಬಹ್’ ಎಂದು ಕರೆಯುತ್ತಾರೆ. ಮಾಂಸದ ಪ್ರಾಣಿಯ ಕತ್ತಿನ ಮುಂಭಾಗಕ್ಕೆ ಹರಿತವಾದ ಚೂರಿಯಿಂದ, ಮುಖ್ಯ ರಕ್ತನಾಳ, ಶ್ವಾಸ ನಾಳ ಮತ್ತು ಅನ್ನ ನಾಳವನ್ನು ಕೊಯ್ಯುವುದಾಗಿದೆ ದ್ಸಬಹ್. ಈ ವೇಳೆ ಪ್ರಾಣಿಯ ಬೆನ್ನುಹುರಿಯನ್ನು ಕತ್ತರಿಸಬಾರದು. (ಹಲಾಲ್‌ ಮತ್ತು ಹರಾಂ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ಫ್ಯಾಕ್ಟ್‌ಚೆಕ್‌: ಪೋಸ್ಟರ್‌‌ನಲ್ಲಿರುವ ಮಾಹಿತಿ ನಿಜವೇ?

ಪೋಸ್ಟರ್‌ ಮುಖ್ಯವಾಗಿ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬೇಡಿ ಎಂದು ಹೇಳುತ್ತದೆ. ಇದು ಸಮಾಜದಲ್ಲಿ ಮುಸ್ಲಿಮರ ವಿರುದ್ದ ದ್ವೇಷ ಹರಡುವ ಬಜರಂಗದಳದ ಎಂದಿನ ಕಾರ್ಯಸೂಚಿಯಾಗಿದೆ. ಉಳಿದಂತೆ ಅದು, ಯಾಕೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂಬುದಕ್ಕೆ ಹಲವು ಕಾರಣಗಳನ್ನು ನೀಡುತ್ತದೆ. ಅವುಗಳನ್ನು ಮುಖ್ಯವಾಗಿ ಕೆಳಗಿನಂತೆ ಪಟ್ಟಿ ಮಾಡಬಹುದು.

  • ಹಲಾಲ್ ಎಂದರೆ ಅಲ್ಲಾಹನ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಮಾಂಸ ವಿತರಣೆ ಮಾಡುವುದು.

ಈ ವಾದಕ್ಕೆ ಯಾವುದೆ ಹುರುಳಿಲ್ಲ. ಹಿಂದೂಗಳು ದೇವರಿಗೆ ನೈವೇದ್ಯ ಅರ್ಪಿಸುಂತೆ, ಮುಸ್ಲಿಮರು ಅಲ್ಲಾಹುವಿಗೆ ನೈವೇದ್ಯ ಅರ್ಪಿಸುವ ಆಚರಣೆಯನ್ನು ಮಾಡುವುದಿಲ್ಲ. ಅದಾಗ್ಯೂ ಮುಸ್ಲಿಮರು ಪ್ರಾಣಿಯನ್ನು ಕೊಲ್ಲುವಾಗ ‘ಬಿಸ್ಮಿಲ್ಲಾಹಿ-ರ್‍ರಹ್ಮಾನಿ-ರ್‍ರಹೀಂ’ ಎಂದು ಹೇಳುತ್ತಾರೆ. ಇದು ಯಾವುದೆ ‘ಅಪರಾಧಿ’ ಮಂತ್ರವಲ್ಲ. ಇದು ಕೇವಲ ತಾನು ನಂಬಿದ ದೇವರನ್ನು ನೆನೆಯುವುದಾಗಿದೆ.

ಇದನ್ನು ಮಸ್ಲಿಮರು ಕೇವಲ ಪ್ರಾಣಿಯನ್ನು ಕೊಯ್ಯುವಾಗ ಮಾತ್ರ ಹೇಳುವುದಲ್ಲ. ಮುಸ್ಲಿಮರು ತಿನ್ನಲಾರಂಭಿಸುವಾಗ, ಕುಡಿಯಲಾರಂಭಿಸುವಾಗ, ಮನೆಯಿಂದ ಹೊರಗೆ ಕಾಲಿಡುವಾಗ, ಮನೆಯೊಳಕ್ಕೆ ಪ್ರವೇಶಿಸುವಾಗ, ವಾಹನವೇರುವಾಗ, ವ್ಯಾಪಾರ ಆರಂಭಿಸುವಾಗ, ಯಾರಿಗಾದರೂ ಏನನ್ನಾದರೂ ಕೊಡುವಾಗ, ದುಡಿಮೆ ಆರಂಭಿಸುವಾಗ ಹೀಗೆ ಎಲ್ಲಾ ಕಾರ್ಯಗಳ ಆರಂಭದಲ್ಲೂ ಅಲ್ಲಾಹುವಿನ ನಾಮ ಉಚ್ಚರಿಸುತ್ತಾರೆ.

ತಾನು ನಂಬಿದ ದೇವನನ್ನು ನೆನೆದು ಕೆಲಸ ಪ್ರಾರಂಭ ಮಾಡುವುದು ಯಾರಿಗೂ ತೊಂದರೆ ಮಾಡುವುದಿಲ್ಲ. ಇದನ್ನು ಎಲ್ಲಾ ನಂಬಿಕೆಯ ಜನರು ಮಾಡುತ್ತಾರೆ. ಆದರೆ ಬಜರಂಗದಳ ಇದನ್ನು ‘ಅಪರಾಧ’ ಎಂಬಂತೆ ಬಿಂಬಿಸುತ್ತದೆ. ಇದು ದ್ವೇಷ ಹರಡುವ ತಂತ್ರವೆ ಹೊರತು ಬೇರೇನಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

  • ಹಲಾಲ್‌‌‌‌ ಮಾಡುವ ಸಂದರ್ಭದಲ್ಲಿ ವಧೆಯಾಗುವ ಪ್ರಾಣಿಯ ಕತ್ತಿನ ಭಾಗ ಸೀಳಿ ಹಾಗೇ ಬಿಡುತ್ತಾರೆ. ಆಗ ಆ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ಕೆಲವು ವಿಷಕಾರಿ ಅಂಶಗಳು ಬಿಡುಗಡೆಯಾಗಿ ಪ್ರಾಣಿಯ ದೇಹದ ಎಲ್ಲಾ ಭಾಗಗಳಿಗೆ ಹರಡಿ ಮಾಂಸವು ವಿಷಯುಕ್ತವಾಗುತ್ತದೆ.

ಈ ವಾದಗಳು ಕೂಡಾ ಸುಳ್ಳಾಗಿದ್ದು, ಇದಕ್ಕೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಆಹಾರ ತಜ್ಞ ಕೆ.ಸಿ. ರಘು, “ಮುಸ್ಲಿಮರು ಆಹಾರಕ್ಕಾಗಿ ಪ್ರಾಣಿಗಳನ್ನು ಕೊಲ್ಲುವ ವಿಧಾನದಿಂದ ಯಾವುದೆ ರೀತಿಯಲ್ಲಿ ಅಪಾಯವಿಲ್ಲ. ಮೆದುಳಿನ ಗ್ರಂಥಿಯಿಂದ ವಿಷಕಾರಿ ಅಂಶಗಳು ಬಿಡುಗಡೆಯಾಗುತ್ತದೆ ಎಂಬ ವಿಚಾರ ಸುಳ್ಳಾಗಿದ್ದು, ಇದಕ್ಕೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ” ಎಂದು ಹೇಳಿದ್ದಾರೆ.

‘‘ಪ್ರಾಣಿಗಳ ಮಾಂಸಗಳಲ್ಲಿ ವಿಷ ಇರುವುದು ಅವುಗಳಿಗೆ ಕೊಡುವ ಮೇವು ಮತ್ತು ಅವುಗಳನ್ನು ಸಾಕುವ ವಿಧಾನದಿಂದಾಗಿದೆ. ಅವುಗಳು ತಿನ್ನುವ ಆಹಾರದಲ್ಲಿ ವಿಷ ಇರುವುದರಿಂದ ಅವುಗಳ ಮಾಂಸವು ವಿಷಕಾರಿಯಾಗುತ್ತದೆ ಹೊರತು, ಕೊಂದ ನಂತರ ಅಲ್ಲ. ಪ್ರಾಣಿಯನ್ನು ಮಾಂಸಕ್ಕಾಗಿ ಕೊಲ್ಲುವಾಗ ಆದಷ್ಟು ಬೇಗನೆ ಪ್ರಾಣ ಹೋಗುವಂತೆ ಕೊಂದರೆ ಆರೋಗ್ಯಕ್ಕೆ ಒಳ್ಳೆಯದು. ಹಾಗೆ ನೋಡಿದರೆ ಮುಸ್ಲಿಮರು ಮಾಂಸಕ್ಕಾಗಿ ಕೊಯ್ಯುವಾಗ ಪ್ರಾಣಿಗಳ ಜೀವ ಬೇಗನೇ ಹಾರಿ ಹೋಗುತ್ತದೆ” ಎಂದು ಹೇಳಿದ್ದಾರೆ. 

  • ಹಲಾಲ್‌ ಮಾಡಿದ ಮಾಂಸದ ನಿರಂತರ ಸೇವನೆಯಿಂದ ಆರೋಗ್ಯದಲ್ಲಿ ಏರು ಪೇರಾಗುತ್ತದೆ ಮತ್ತು ಹಲಾಲ್‌ ಮಾಡಿರುವ ಮಾಂಸವು ವಿಷಯುಕ್ತವಾಗುತ್ತದೆ ಎಂಬುವುದು ವೈಜ್ಞಾನಿಕವಾಗಿ ನಿರೂಪಿತವಾಗಿರುವ ಸತ್ಯ.
  • ಹಲಾಲ್‌ ಮಾಡುವುದು ಅವೈಜ್ಞಾನಿಕ. ಹಿಂದೂಗಳು ಮಾಡುವ ‘ಜಟ್ಕಾಕಟ್‌’ ವಿಧಾನ ವೈೆಜ್ಞಾನಿಕವಾಗಿದೆ. 

ಬಜರಂಗದಳದ ಈ ಎರಡು ವಾದಕ್ಕೂ ಯಾವುದೆ ಹುರುಳಿಲ್ಲ. ಆರೋಗ್ಯದಲ್ಲಿ ಏರು ಪೇರಾಗುವುದು ಮಾಂಸದ ಗುಣಮಟ್ಟದಲ್ಲಿ ಆಗಿರುವುದರಿಂದ, ಮುಸ್ಲಿಮರು ಮಾಂಸಕ್ಕಾಗಿ ಪ್ರಾಣಿಗಳನ್ನು ಕೊಲ್ಲುವ ರೀತಿಯಿಂದಲ್ಲ. 

ಕೆ.ಸಿ. ರಘು ಅವರು, “ಪ್ರಾಣಿಗೆ ಕೊಡುವ ರಾಸಾಯನಿಕ ಭರಿತ ಆಹಾರದಿಂದಾಗಿ ಅದರ ಮಾಂಸದಲ್ಲಿ ವಿಷ ಇರಬಹುದೆ ಹೊರತು, ಪ್ರಾಣಿಯನ್ನು ಯಾವುದೇ ರೀತಿಯಲ್ಲಿ ಕೊಂದರೂ ಅದರ ಮಾಂಸದಲ್ಲಿ ವಿಷ ಹರಡುವುದಿಲ್ಲ. ಇವೆಲ್ಲಾ ಸುಳ್ಳಾಗಿದ್ದು, ಯಾವುದೆ ವೈಜ್ಞಾನಿಕ ಆಧಾರ ಇಲ್ಲ” ಎಂದು ಹೇಳುತ್ತಾರೆ.

ಒಟ್ಟಿನಲ್ಲಿ, ಬಜರಂಗದಳದ ಈ ವೈರಲ್ ಪೋಸ್ಟ್‌ ಸುಳ್ಳುಗಳಿಂದಲೇ ಕೂಡಿರುವ ಮತ್ತು ಸಮಾಜದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಹರಡಲೆಂದೆ ಮಾಡಿರುವ ಪೋಸ್ಟರ್‌ ಆಗಿದೆ. ಬಜರಂಗದಳ ಪೋಸ್ಟರ್‌ನಲ್ಲಿ ನೀಡಿರುವ ಮಾಹಿತಿಗೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ ಎಂಬುದು ಆಹಾರ ತಜ್ಞರ ಮಾತಿನಿಂದ ಸಾಬೀತಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಜರಂಗ ದಳ ಮಾಡುವದು ವಳೆಯ. ಭಜರಂಗ ದಳದವರು ಏನೇ ನಿರ್ಧಾರ ತೆಗೆದುಕೊಂಡರು ಅದು ಸರಿಯಾಗಿ ಇರುತ್ತೆ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...