Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

- Advertisement -
- Advertisement -

ಇತಿಹಾಸ ಪ್ರಸಿದ್ದ ಶ್ರೀರಂಗಪಟ್ಟಣದ ಹಳೇ ಸೇತುವೆಯ ಬಳಿ ಮತ್ಸ್ಯಕನ್ಯೆಯರು ಕಂಡು ಬಂದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ಸೇತುವೆಯೊಂದರ ಕೆಳಗೆ ಕಲ್ಲುಗಳ ಮೇಲೆ ಕುಳಿತಿರುವ ಮನುಷ್ಯನ ಶರೀರವಿರುವವ ಮೀನಿನ ಬಾಲದಂತಿರುವ ಜೀವಿಯೊಂದು ಕಲ್ಲುಗಳ ಮೇಲೆ ನೆಗೆಯುತ್ತಾ ಮರೆಯಾಗುವ ದೃಶ್ಯವು ವೈರಲ್ ವಿಡಿಯೊದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನಿಜವಾಗಿಯೂ ಈ ದೃಶ್ಯಗಳು ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಸೇತುವೆಯ ಬಳಿ ಸೆರೆಯಾಗಿವೆಯೆ? ಈ ರೀತಿಯ ಮತ್ಸ್ಯಕನ್ಯೆ ಇರುವುದು ನಿಜವೇ ಎಂಬುವುದನ್ನು ಫ್ಯಾಕ್ಟ್‌ಚೆಕ್ ಮಾಡೋಣ.

ಮತ್ಸ್ಯಕನ್ಯೆಯರ ವಿಡಿಯೊ ಎಂದು ಪ್ರತಿಪಾದಿಸಿ ವೈರಲ್ ಆಗಿರುವ ಈ ವಿಡಿಯೊ ಕುರಿತ ವಾಸ್ತವ ಏನೆಂದು ತಿಳಿಸುವಂತೆ ನಾನುಗೌರಿ.ಕಾಂ ವಾಟ್ಸಾಪ್‌‌ಗೆ ಹಲವಾರು ಮನವಿಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಇದೇ ರೀತಿಯ ದೃಶ್ಯಗಳೊಂದಿಗೆ ವೀಡಿಯೊವನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ.

ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ನಾವು ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ಇಲ್ಲಿನ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ. CGI ವಿಡಿಯೋ (ಕಂಪ್ಯೂಟರ್ ರಚಿತ ಚಿತ್ರ) 3D ನಲ್ಲಿ ಮತ್ಸ್ಯಕನ್ಯೆಯ ವಿನ್ಯಾಸ ಮತ್ತು ರಚನೆ: ಜೋಕ್ವಿನ್ ಪೆರೆಜ್ 3D ಅನಿಮೇಷನ್ ಮತ್ತು VFX ಆವೃತ್ತಿ” ಎಂದು ಹೇಳಿದೆ.

ಆದ್ದರಿಂದ, ಶ್ರೀರಂಗಪಟ್ಟಣದಲ್ಲಿ ಮತ್ಸ್ಯಕನ್ಯೆ ಎಂಬ ವೈರಲ್ ವಿಡಿಯೊ ನಿಜವಲ್ಲ. ಇದು 3D ಡಿಜಿಟಲ್‌ನಿಂದ ರಚಿಸಲಾದ ವಿಡಿಯೊ ಎಂಬುವುದು ಖಚಿತವಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ದೃಶ್ಯಗಳು 3D ಡಿಜಿಟಲ್ ಮೂಲಕ ರಚಿಸಲ್ಪಟ್ಟ ಕಾಲ್ಪನಿಕ ದೃಶ್ಯಗಳಾಗಿವೆ. ಹಾಗಾಗಿ ಶ್ರೀರಂಗಪಟ್ಟಣದಲ್ಲಿ ಜೀವಂತ ಮತ್ಸ್ಯಕನ್ಯೆಯರ ವಿಡಿಯೋ ದೃಶ್ಯಗಳು ಎಂದು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಹಿಂದೆಯೂ ಇದೇ ರೀತಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಮತ್ತೊಂದು ವಿಡಿಯೊ ಕೂಡಾ ಮತ್ಸ್ಯಕನ್ಯೆ ಎಂದು ವೈರಲ್!

ಮೇಲಿನ ವಿಡಿಯೊ ಮಾತ್ರವಲ್ಲದೆ ಮತ್ತೊಂದು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡಲಾಗಿದೆ. ಈ ವಿಡಿಯೊದಲ್ಲಿ ವಿಚಿತ್ರ ಪ್ರಾಣಿಯ ದೃಶ್ಯವೊಂದು ಕಂಡುಬರುತ್ತದೆ. ಈ ವಿಡಿಯೊವನ್ನು ಕೂಡಾ ಪರಿಶೀಲಿಸಿದಾಗ ಇದು 3D ದೃಶ್ಯಗಳ ಮೂಲಕ ರಚಿತವಾದ ವಿಡಿಯೊ ಎಂದು ತಿಳಿದು ಬಂದಿದೆ.

ಫ್ಯಾಕ್ಟ್‌ಚೆಕ್

ಈ ವೀಡಿಯೊ ಮೂರು ವಿಭಿನ್ನ ಕ್ಲಿಪ್‌ಗಳನ್ನು ಹೊಂದಿದೆ. ಎಲ್ಲಾ ಮೂರು ಕ್ಲಿಪ್‌ಗಳನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ನೋಡಬಹುದು. ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ತೋರಿಸಿರುವ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ” ಎಂದು ಹೇಳಿದೆ.

ಇದೇ ಚಾನೆಲ್‌ನಲ್ಲಿನ ಮತ್ತೊಂದು ವೀಡಿಯೊ ಈ ವಿಡಿಯೊಗಳ ಮೇಕಿಂಗ್ ಪ್ರಕ್ರಿಯೆಯನ್ನು ತೋರಿಸುತ್ತದೆ.

ಪೋಸ್ಟ್ ಮಾಡಿದ ವೀಡಿಯೊದಲ್ಲಿರುವ ಜೀವಿ ನಿಜವಾದದ್ದಲ್ಲ. ‘ಜೆಜೆಪಿಡಿ ಪ್ರೊಡಕ್ಷನ್ಸ್’ನ ಯೂಟ್ಯೂಬ್ ಚಾನೆಲ್‌ನಲ್ಲಿ, ವೀಡಿಯೊವನ್ನು ಕಂಪ್ಯೂಟರ್-ರಚಿತ (ಸಿಜಿಐ) ವೀಡಿಯೊ ಎಂಬ ವಿವರಣೆಯೊಂದಿಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

ಒಟ್ಟಾರೆಯಾಗಿ ಹೇಳುವುದಾದರೆ 3D ತಂತ್ರಜ್ಞಾನದಿಂದ ರಚಿಸಿದ ವಿಡಿಯೊವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ಸ್ಯಕನ್ಯೆಯರ ನೈಜ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ. ಅಲ್ಲದೆ ವಾಸ್ತವವಾಗಿ ಮತ್ಸ್ಯಕನ್ಯೆ ಎಂಬುವುದು ಕಾಲ್ಪನಿಕ ಜೀವಿಯಾಗಿದ್ದು, ಅಂತಹ ಒಂದು ಜೀವಿ ಇದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ.

ಹಾಗಾಗಿ ಮನರಂಜನೆಗಾಗಿ ಮಾಡಲಾದ ವಿಡಿಯೊವನ್ನು ಕೆಲವರು ನಿಜವೆಂದು ನಂಬಿ ವಿಡಿಯೊ ವೈರಲ್ ಮಡಿದ್ದಾರೆ. ಆದರೆ ಇದು ಯಾವುದೂ ನಿಜವಾದ ದೃಶ್ಯಗಳಲ್ಲ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...