Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

- Advertisement -
- Advertisement -

ಇತಿಹಾಸ ಪ್ರಸಿದ್ದ ಶ್ರೀರಂಗಪಟ್ಟಣದ ಹಳೇ ಸೇತುವೆಯ ಬಳಿ ಮತ್ಸ್ಯಕನ್ಯೆಯರು ಕಂಡು ಬಂದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ಸೇತುವೆಯೊಂದರ ಕೆಳಗೆ ಕಲ್ಲುಗಳ ಮೇಲೆ ಕುಳಿತಿರುವ ಮನುಷ್ಯನ ಶರೀರವಿರುವವ ಮೀನಿನ ಬಾಲದಂತಿರುವ ಜೀವಿಯೊಂದು ಕಲ್ಲುಗಳ ಮೇಲೆ ನೆಗೆಯುತ್ತಾ ಮರೆಯಾಗುವ ದೃಶ್ಯವು ವೈರಲ್ ವಿಡಿಯೊದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನಿಜವಾಗಿಯೂ ಈ ದೃಶ್ಯಗಳು ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಸೇತುವೆಯ ಬಳಿ ಸೆರೆಯಾಗಿವೆಯೆ? ಈ ರೀತಿಯ ಮತ್ಸ್ಯಕನ್ಯೆ ಇರುವುದು ನಿಜವೇ ಎಂಬುವುದನ್ನು ಫ್ಯಾಕ್ಟ್‌ಚೆಕ್ ಮಾಡೋಣ.

ಮತ್ಸ್ಯಕನ್ಯೆಯರ ವಿಡಿಯೊ ಎಂದು ಪ್ರತಿಪಾದಿಸಿ ವೈರಲ್ ಆಗಿರುವ ಈ ವಿಡಿಯೊ ಕುರಿತ ವಾಸ್ತವ ಏನೆಂದು ತಿಳಿಸುವಂತೆ ನಾನುಗೌರಿ.ಕಾಂ ವಾಟ್ಸಾಪ್‌‌ಗೆ ಹಲವಾರು ಮನವಿಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಇದೇ ರೀತಿಯ ದೃಶ್ಯಗಳೊಂದಿಗೆ ವೀಡಿಯೊವನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ.

ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ನಾವು ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ಇಲ್ಲಿನ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ. CGI ವಿಡಿಯೋ (ಕಂಪ್ಯೂಟರ್ ರಚಿತ ಚಿತ್ರ) 3D ನಲ್ಲಿ ಮತ್ಸ್ಯಕನ್ಯೆಯ ವಿನ್ಯಾಸ ಮತ್ತು ರಚನೆ: ಜೋಕ್ವಿನ್ ಪೆರೆಜ್ 3D ಅನಿಮೇಷನ್ ಮತ್ತು VFX ಆವೃತ್ತಿ” ಎಂದು ಹೇಳಿದೆ.

ಆದ್ದರಿಂದ, ಶ್ರೀರಂಗಪಟ್ಟಣದಲ್ಲಿ ಮತ್ಸ್ಯಕನ್ಯೆ ಎಂಬ ವೈರಲ್ ವಿಡಿಯೊ ನಿಜವಲ್ಲ. ಇದು 3D ಡಿಜಿಟಲ್‌ನಿಂದ ರಚಿಸಲಾದ ವಿಡಿಯೊ ಎಂಬುವುದು ಖಚಿತವಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ದೃಶ್ಯಗಳು 3D ಡಿಜಿಟಲ್ ಮೂಲಕ ರಚಿಸಲ್ಪಟ್ಟ ಕಾಲ್ಪನಿಕ ದೃಶ್ಯಗಳಾಗಿವೆ. ಹಾಗಾಗಿ ಶ್ರೀರಂಗಪಟ್ಟಣದಲ್ಲಿ ಜೀವಂತ ಮತ್ಸ್ಯಕನ್ಯೆಯರ ವಿಡಿಯೋ ದೃಶ್ಯಗಳು ಎಂದು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಹಿಂದೆಯೂ ಇದೇ ರೀತಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಮತ್ತೊಂದು ವಿಡಿಯೊ ಕೂಡಾ ಮತ್ಸ್ಯಕನ್ಯೆ ಎಂದು ವೈರಲ್!

ಮೇಲಿನ ವಿಡಿಯೊ ಮಾತ್ರವಲ್ಲದೆ ಮತ್ತೊಂದು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡಲಾಗಿದೆ. ಈ ವಿಡಿಯೊದಲ್ಲಿ ವಿಚಿತ್ರ ಪ್ರಾಣಿಯ ದೃಶ್ಯವೊಂದು ಕಂಡುಬರುತ್ತದೆ. ಈ ವಿಡಿಯೊವನ್ನು ಕೂಡಾ ಪರಿಶೀಲಿಸಿದಾಗ ಇದು 3D ದೃಶ್ಯಗಳ ಮೂಲಕ ರಚಿತವಾದ ವಿಡಿಯೊ ಎಂದು ತಿಳಿದು ಬಂದಿದೆ.

ಫ್ಯಾಕ್ಟ್‌ಚೆಕ್

ಈ ವೀಡಿಯೊ ಮೂರು ವಿಭಿನ್ನ ಕ್ಲಿಪ್‌ಗಳನ್ನು ಹೊಂದಿದೆ. ಎಲ್ಲಾ ಮೂರು ಕ್ಲಿಪ್‌ಗಳನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ನೋಡಬಹುದು. ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ತೋರಿಸಿರುವ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ” ಎಂದು ಹೇಳಿದೆ.

ಇದೇ ಚಾನೆಲ್‌ನಲ್ಲಿನ ಮತ್ತೊಂದು ವೀಡಿಯೊ ಈ ವಿಡಿಯೊಗಳ ಮೇಕಿಂಗ್ ಪ್ರಕ್ರಿಯೆಯನ್ನು ತೋರಿಸುತ್ತದೆ.

ಪೋಸ್ಟ್ ಮಾಡಿದ ವೀಡಿಯೊದಲ್ಲಿರುವ ಜೀವಿ ನಿಜವಾದದ್ದಲ್ಲ. ‘ಜೆಜೆಪಿಡಿ ಪ್ರೊಡಕ್ಷನ್ಸ್’ನ ಯೂಟ್ಯೂಬ್ ಚಾನೆಲ್‌ನಲ್ಲಿ, ವೀಡಿಯೊವನ್ನು ಕಂಪ್ಯೂಟರ್-ರಚಿತ (ಸಿಜಿಐ) ವೀಡಿಯೊ ಎಂಬ ವಿವರಣೆಯೊಂದಿಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

ಒಟ್ಟಾರೆಯಾಗಿ ಹೇಳುವುದಾದರೆ 3D ತಂತ್ರಜ್ಞಾನದಿಂದ ರಚಿಸಿದ ವಿಡಿಯೊವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ಸ್ಯಕನ್ಯೆಯರ ನೈಜ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ. ಅಲ್ಲದೆ ವಾಸ್ತವವಾಗಿ ಮತ್ಸ್ಯಕನ್ಯೆ ಎಂಬುವುದು ಕಾಲ್ಪನಿಕ ಜೀವಿಯಾಗಿದ್ದು, ಅಂತಹ ಒಂದು ಜೀವಿ ಇದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ.

ಹಾಗಾಗಿ ಮನರಂಜನೆಗಾಗಿ ಮಾಡಲಾದ ವಿಡಿಯೊವನ್ನು ಕೆಲವರು ನಿಜವೆಂದು ನಂಬಿ ವಿಡಿಯೊ ವೈರಲ್ ಮಡಿದ್ದಾರೆ. ಆದರೆ ಇದು ಯಾವುದೂ ನಿಜವಾದ ದೃಶ್ಯಗಳಲ್ಲ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...