Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

- Advertisement -
- Advertisement -

ಇತಿಹಾಸ ಪ್ರಸಿದ್ದ ಶ್ರೀರಂಗಪಟ್ಟಣದ ಹಳೇ ಸೇತುವೆಯ ಬಳಿ ಮತ್ಸ್ಯಕನ್ಯೆಯರು ಕಂಡು ಬಂದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ಸೇತುವೆಯೊಂದರ ಕೆಳಗೆ ಕಲ್ಲುಗಳ ಮೇಲೆ ಕುಳಿತಿರುವ ಮನುಷ್ಯನ ಶರೀರವಿರುವವ ಮೀನಿನ ಬಾಲದಂತಿರುವ ಜೀವಿಯೊಂದು ಕಲ್ಲುಗಳ ಮೇಲೆ ನೆಗೆಯುತ್ತಾ ಮರೆಯಾಗುವ ದೃಶ್ಯವು ವೈರಲ್ ವಿಡಿಯೊದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನಿಜವಾಗಿಯೂ ಈ ದೃಶ್ಯಗಳು ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಸೇತುವೆಯ ಬಳಿ ಸೆರೆಯಾಗಿವೆಯೆ? ಈ ರೀತಿಯ ಮತ್ಸ್ಯಕನ್ಯೆ ಇರುವುದು ನಿಜವೇ ಎಂಬುವುದನ್ನು ಫ್ಯಾಕ್ಟ್‌ಚೆಕ್ ಮಾಡೋಣ.

ಮತ್ಸ್ಯಕನ್ಯೆಯರ ವಿಡಿಯೊ ಎಂದು ಪ್ರತಿಪಾದಿಸಿ ವೈರಲ್ ಆಗಿರುವ ಈ ವಿಡಿಯೊ ಕುರಿತ ವಾಸ್ತವ ಏನೆಂದು ತಿಳಿಸುವಂತೆ ನಾನುಗೌರಿ.ಕಾಂ ವಾಟ್ಸಾಪ್‌‌ಗೆ ಹಲವಾರು ಮನವಿಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಇದೇ ರೀತಿಯ ದೃಶ್ಯಗಳೊಂದಿಗೆ ವೀಡಿಯೊವನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ.

ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ನಾವು ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ಇಲ್ಲಿನ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ. CGI ವಿಡಿಯೋ (ಕಂಪ್ಯೂಟರ್ ರಚಿತ ಚಿತ್ರ) 3D ನಲ್ಲಿ ಮತ್ಸ್ಯಕನ್ಯೆಯ ವಿನ್ಯಾಸ ಮತ್ತು ರಚನೆ: ಜೋಕ್ವಿನ್ ಪೆರೆಜ್ 3D ಅನಿಮೇಷನ್ ಮತ್ತು VFX ಆವೃತ್ತಿ” ಎಂದು ಹೇಳಿದೆ.

ಆದ್ದರಿಂದ, ಶ್ರೀರಂಗಪಟ್ಟಣದಲ್ಲಿ ಮತ್ಸ್ಯಕನ್ಯೆ ಎಂಬ ವೈರಲ್ ವಿಡಿಯೊ ನಿಜವಲ್ಲ. ಇದು 3D ಡಿಜಿಟಲ್‌ನಿಂದ ರಚಿಸಲಾದ ವಿಡಿಯೊ ಎಂಬುವುದು ಖಚಿತವಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ದೃಶ್ಯಗಳು 3D ಡಿಜಿಟಲ್ ಮೂಲಕ ರಚಿಸಲ್ಪಟ್ಟ ಕಾಲ್ಪನಿಕ ದೃಶ್ಯಗಳಾಗಿವೆ. ಹಾಗಾಗಿ ಶ್ರೀರಂಗಪಟ್ಟಣದಲ್ಲಿ ಜೀವಂತ ಮತ್ಸ್ಯಕನ್ಯೆಯರ ವಿಡಿಯೋ ದೃಶ್ಯಗಳು ಎಂದು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಹಿಂದೆಯೂ ಇದೇ ರೀತಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಮತ್ತೊಂದು ವಿಡಿಯೊ ಕೂಡಾ ಮತ್ಸ್ಯಕನ್ಯೆ ಎಂದು ವೈರಲ್!

ಮೇಲಿನ ವಿಡಿಯೊ ಮಾತ್ರವಲ್ಲದೆ ಮತ್ತೊಂದು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡಲಾಗಿದೆ. ಈ ವಿಡಿಯೊದಲ್ಲಿ ವಿಚಿತ್ರ ಪ್ರಾಣಿಯ ದೃಶ್ಯವೊಂದು ಕಂಡುಬರುತ್ತದೆ. ಈ ವಿಡಿಯೊವನ್ನು ಕೂಡಾ ಪರಿಶೀಲಿಸಿದಾಗ ಇದು 3D ದೃಶ್ಯಗಳ ಮೂಲಕ ರಚಿತವಾದ ವಿಡಿಯೊ ಎಂದು ತಿಳಿದು ಬಂದಿದೆ.

ಫ್ಯಾಕ್ಟ್‌ಚೆಕ್

ಈ ವೀಡಿಯೊ ಮೂರು ವಿಭಿನ್ನ ಕ್ಲಿಪ್‌ಗಳನ್ನು ಹೊಂದಿದೆ. ಎಲ್ಲಾ ಮೂರು ಕ್ಲಿಪ್‌ಗಳನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ನೋಡಬಹುದು. ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ತೋರಿಸಿರುವ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ” ಎಂದು ಹೇಳಿದೆ.

ಇದೇ ಚಾನೆಲ್‌ನಲ್ಲಿನ ಮತ್ತೊಂದು ವೀಡಿಯೊ ಈ ವಿಡಿಯೊಗಳ ಮೇಕಿಂಗ್ ಪ್ರಕ್ರಿಯೆಯನ್ನು ತೋರಿಸುತ್ತದೆ.

ಪೋಸ್ಟ್ ಮಾಡಿದ ವೀಡಿಯೊದಲ್ಲಿರುವ ಜೀವಿ ನಿಜವಾದದ್ದಲ್ಲ. ‘ಜೆಜೆಪಿಡಿ ಪ್ರೊಡಕ್ಷನ್ಸ್’ನ ಯೂಟ್ಯೂಬ್ ಚಾನೆಲ್‌ನಲ್ಲಿ, ವೀಡಿಯೊವನ್ನು ಕಂಪ್ಯೂಟರ್-ರಚಿತ (ಸಿಜಿಐ) ವೀಡಿಯೊ ಎಂಬ ವಿವರಣೆಯೊಂದಿಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

ಒಟ್ಟಾರೆಯಾಗಿ ಹೇಳುವುದಾದರೆ 3D ತಂತ್ರಜ್ಞಾನದಿಂದ ರಚಿಸಿದ ವಿಡಿಯೊವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ಸ್ಯಕನ್ಯೆಯರ ನೈಜ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ. ಅಲ್ಲದೆ ವಾಸ್ತವವಾಗಿ ಮತ್ಸ್ಯಕನ್ಯೆ ಎಂಬುವುದು ಕಾಲ್ಪನಿಕ ಜೀವಿಯಾಗಿದ್ದು, ಅಂತಹ ಒಂದು ಜೀವಿ ಇದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ.

ಹಾಗಾಗಿ ಮನರಂಜನೆಗಾಗಿ ಮಾಡಲಾದ ವಿಡಿಯೊವನ್ನು ಕೆಲವರು ನಿಜವೆಂದು ನಂಬಿ ವಿಡಿಯೊ ವೈರಲ್ ಮಡಿದ್ದಾರೆ. ಆದರೆ ಇದು ಯಾವುದೂ ನಿಜವಾದ ದೃಶ್ಯಗಳಲ್ಲ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...