Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

- Advertisement -
- Advertisement -

ಇತಿಹಾಸ ಪ್ರಸಿದ್ದ ಶ್ರೀರಂಗಪಟ್ಟಣದ ಹಳೇ ಸೇತುವೆಯ ಬಳಿ ಮತ್ಸ್ಯಕನ್ಯೆಯರು ಕಂಡು ಬಂದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ಸೇತುವೆಯೊಂದರ ಕೆಳಗೆ ಕಲ್ಲುಗಳ ಮೇಲೆ ಕುಳಿತಿರುವ ಮನುಷ್ಯನ ಶರೀರವಿರುವವ ಮೀನಿನ ಬಾಲದಂತಿರುವ ಜೀವಿಯೊಂದು ಕಲ್ಲುಗಳ ಮೇಲೆ ನೆಗೆಯುತ್ತಾ ಮರೆಯಾಗುವ ದೃಶ್ಯವು ವೈರಲ್ ವಿಡಿಯೊದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನಿಜವಾಗಿಯೂ ಈ ದೃಶ್ಯಗಳು ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಸೇತುವೆಯ ಬಳಿ ಸೆರೆಯಾಗಿವೆಯೆ? ಈ ರೀತಿಯ ಮತ್ಸ್ಯಕನ್ಯೆ ಇರುವುದು ನಿಜವೇ ಎಂಬುವುದನ್ನು ಫ್ಯಾಕ್ಟ್‌ಚೆಕ್ ಮಾಡೋಣ.

ಮತ್ಸ್ಯಕನ್ಯೆಯರ ವಿಡಿಯೊ ಎಂದು ಪ್ರತಿಪಾದಿಸಿ ವೈರಲ್ ಆಗಿರುವ ಈ ವಿಡಿಯೊ ಕುರಿತ ವಾಸ್ತವ ಏನೆಂದು ತಿಳಿಸುವಂತೆ ನಾನುಗೌರಿ.ಕಾಂ ವಾಟ್ಸಾಪ್‌‌ಗೆ ಹಲವಾರು ಮನವಿಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಇದೇ ರೀತಿಯ ದೃಶ್ಯಗಳೊಂದಿಗೆ ವೀಡಿಯೊವನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ.

ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ನಾವು ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ಇಲ್ಲಿನ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ. CGI ವಿಡಿಯೋ (ಕಂಪ್ಯೂಟರ್ ರಚಿತ ಚಿತ್ರ) 3D ನಲ್ಲಿ ಮತ್ಸ್ಯಕನ್ಯೆಯ ವಿನ್ಯಾಸ ಮತ್ತು ರಚನೆ: ಜೋಕ್ವಿನ್ ಪೆರೆಜ್ 3D ಅನಿಮೇಷನ್ ಮತ್ತು VFX ಆವೃತ್ತಿ” ಎಂದು ಹೇಳಿದೆ.

ಆದ್ದರಿಂದ, ಶ್ರೀರಂಗಪಟ್ಟಣದಲ್ಲಿ ಮತ್ಸ್ಯಕನ್ಯೆ ಎಂಬ ವೈರಲ್ ವಿಡಿಯೊ ನಿಜವಲ್ಲ. ಇದು 3D ಡಿಜಿಟಲ್‌ನಿಂದ ರಚಿಸಲಾದ ವಿಡಿಯೊ ಎಂಬುವುದು ಖಚಿತವಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ದೃಶ್ಯಗಳು 3D ಡಿಜಿಟಲ್ ಮೂಲಕ ರಚಿಸಲ್ಪಟ್ಟ ಕಾಲ್ಪನಿಕ ದೃಶ್ಯಗಳಾಗಿವೆ. ಹಾಗಾಗಿ ಶ್ರೀರಂಗಪಟ್ಟಣದಲ್ಲಿ ಜೀವಂತ ಮತ್ಸ್ಯಕನ್ಯೆಯರ ವಿಡಿಯೋ ದೃಶ್ಯಗಳು ಎಂದು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಹಿಂದೆಯೂ ಇದೇ ರೀತಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಮತ್ತೊಂದು ವಿಡಿಯೊ ಕೂಡಾ ಮತ್ಸ್ಯಕನ್ಯೆ ಎಂದು ವೈರಲ್!

ಮೇಲಿನ ವಿಡಿಯೊ ಮಾತ್ರವಲ್ಲದೆ ಮತ್ತೊಂದು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡಲಾಗಿದೆ. ಈ ವಿಡಿಯೊದಲ್ಲಿ ವಿಚಿತ್ರ ಪ್ರಾಣಿಯ ದೃಶ್ಯವೊಂದು ಕಂಡುಬರುತ್ತದೆ. ಈ ವಿಡಿಯೊವನ್ನು ಕೂಡಾ ಪರಿಶೀಲಿಸಿದಾಗ ಇದು 3D ದೃಶ್ಯಗಳ ಮೂಲಕ ರಚಿತವಾದ ವಿಡಿಯೊ ಎಂದು ತಿಳಿದು ಬಂದಿದೆ.

ಫ್ಯಾಕ್ಟ್‌ಚೆಕ್

ಈ ವೀಡಿಯೊ ಮೂರು ವಿಭಿನ್ನ ಕ್ಲಿಪ್‌ಗಳನ್ನು ಹೊಂದಿದೆ. ಎಲ್ಲಾ ಮೂರು ಕ್ಲಿಪ್‌ಗಳನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ನೋಡಬಹುದು. ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ತೋರಿಸಿರುವ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ” ಎಂದು ಹೇಳಿದೆ.

ಇದೇ ಚಾನೆಲ್‌ನಲ್ಲಿನ ಮತ್ತೊಂದು ವೀಡಿಯೊ ಈ ವಿಡಿಯೊಗಳ ಮೇಕಿಂಗ್ ಪ್ರಕ್ರಿಯೆಯನ್ನು ತೋರಿಸುತ್ತದೆ.

ಪೋಸ್ಟ್ ಮಾಡಿದ ವೀಡಿಯೊದಲ್ಲಿರುವ ಜೀವಿ ನಿಜವಾದದ್ದಲ್ಲ. ‘ಜೆಜೆಪಿಡಿ ಪ್ರೊಡಕ್ಷನ್ಸ್’ನ ಯೂಟ್ಯೂಬ್ ಚಾನೆಲ್‌ನಲ್ಲಿ, ವೀಡಿಯೊವನ್ನು ಕಂಪ್ಯೂಟರ್-ರಚಿತ (ಸಿಜಿಐ) ವೀಡಿಯೊ ಎಂಬ ವಿವರಣೆಯೊಂದಿಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

ಒಟ್ಟಾರೆಯಾಗಿ ಹೇಳುವುದಾದರೆ 3D ತಂತ್ರಜ್ಞಾನದಿಂದ ರಚಿಸಿದ ವಿಡಿಯೊವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ಸ್ಯಕನ್ಯೆಯರ ನೈಜ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ. ಅಲ್ಲದೆ ವಾಸ್ತವವಾಗಿ ಮತ್ಸ್ಯಕನ್ಯೆ ಎಂಬುವುದು ಕಾಲ್ಪನಿಕ ಜೀವಿಯಾಗಿದ್ದು, ಅಂತಹ ಒಂದು ಜೀವಿ ಇದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ.

ಹಾಗಾಗಿ ಮನರಂಜನೆಗಾಗಿ ಮಾಡಲಾದ ವಿಡಿಯೊವನ್ನು ಕೆಲವರು ನಿಜವೆಂದು ನಂಬಿ ವಿಡಿಯೊ ವೈರಲ್ ಮಡಿದ್ದಾರೆ. ಆದರೆ ಇದು ಯಾವುದೂ ನಿಜವಾದ ದೃಶ್ಯಗಳಲ್ಲ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...